ಮೂಡುಬಿದಿರೆ : ಸೋಮವಾರ ಸುರಿದ ಭಾರೀ ಗಾಳಿ ಮಳೆಗೆ ಕಡಂದಲೆ ಗ್ರಾಮ ವ್ಯಾಪ್ತಿಯ ಕೆ.ಬಿ. ಕೃಷ್ಣ ಮೂರ್ತಿ ಭಟ್ ಎಂಬವರ ಜೋಡಿಕಟ್ಟೆ ಬಡಗಬೆಟ್ಟು ಎಂಬಲ್ಲಿ ದೈವಸ್ಥಾನದ ಮೇಲೆ ಮರ ಬಿದ್ದು ಹಾನಿ ಆಗಿದೆ. ಮರ ಬಿದ್ದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆ ಮೇಲೆ ಬಿದ್ದಿದೆ. ಜಾನ್ ಫೆರ್ನಾಂಡಿಸ್ ಜೋಡಿಕಟ್ಟೆ ಮುದಲಗಡಿ ಎಂಬವರ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ
ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ.
ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘2024ರ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್ಗಳ
“ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಅವರ ಸರಕಾರ ಮಂಡಿಸಿರುವ ಎಲ್ಲ
ಮಗು ಮದುವೆ, ಬಾಲ್ಯ ವಿವಾಹ ಭಾರತ ಮತ್ತು ಕರ್ನಾಟಕದ ಒಂದು ಅಂಟು ಜಾಡ್ಯವಾಗಿ ಬಲಿತು ಕುಳಿತಿದೆ.ಲಗ್ನದ ವಯಸ್ಸನ್ನು 21ಕ್ಕೆ ಏರಿಸಿದರೂ ಸಮಸ್ಯೆ ಪರಿಹಾರ ಆಗಿಲ್ಲ. ಮದುವೆಯ ವಯಸ್ಸು 21 ಎಂದಾಗ ಹೆಣ್ಣು ಉನ್ನತ ಓದು ಮುಗಿಸಿರುವುದು ಸಾಧ್ಯ. 18 ಎಂದರೆ ಕಲಿಕೆ ಕಡೆ ಇಲ್ಲವೇ ಸಂಸಾರ ತೂಗಿಸಿಕೊಂಡು ಓದಬೇಕು. 21ಕ್ಕೆ ಹೆಣ್ಣು ಕೆಲಸಕ್ಕೆ ಸೇರಿರುವುದೂ ಸಾಧ್ಯ. ಇದು ಸಂಸಾರಕ್ಕೆ ಅನುಕೂಲ. ಭಾರತೀಯ ಸಮಾಜದಲ್ಲಿ ಅನಾನುಕೂಲವೂ ಆಗಬಹುದು. 21ರಲ್ಲಿ ಹೆಣ್ಣು ಸ್ವತಂತ್ರವಾಗಿ
ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ
ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ
ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ ನಲ್ಲಿ ಮುಸ್ತಫಾ ಪ್ರೇಮಿ ಅವರು ಪ್ರಾಂಚೈಸಿಯ ಮಾಲೀಕತ್ವದಲ್ಲಿ ಟೋನಿ & ಗೈ ಇದರ ಎರಡನೇ
ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಈ ಸಾಲಿನ ಶಾಲಾ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಮತ್ತು ಕಾನೂನು ಅರಿವು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ನೆಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ಎಸ್ ಟಿ ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾರು ಹೆಚ್ಚಿನ ಅಧ್ಯಯನ ಮಾಡುತ್ತಾರೋ ಅವರು ಖಂಡಿತವಾಗಿ ಯಶಸ್ವಿನ ಗುರಿಯನ್ನು ತಲುಪುತ್ತಾರೆ.
ಮೂಡುಬಿದಿರೆ: ಬ್ರಾಂಚ್ ಎಂ.ಎಸ್.ಎಂ.ಇ, ಡಿ.ಎಫ್. ಒ, ಮಿನಿಸ್ಟ್ರಿ ಆಫ್ ಮೈಕ್ರೋ ಸ್ಮಾಲ್ & ಮೀಡಿಯಂ ಎಂಟರ್ ಪ್ರೈಸಸ್ ಗವರ್ನಮೆಂಟ್ ಆಫ್ ಇಂಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಯೆಯ್ಯಾಡಿ ಮಂಗಳೂರು ಇದರ ವತಿಯಿಂದ ಮಹಿಳಾ ಉದ್ಯಮಿಗಳಿಗೆ ಆಯೋಜಿಸಲಾಗಿದ್ದ ಐದು ದಿನಗಳ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ತರಬೇತಿಯ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಮೂಡಬಿದಿರೆ ವೀಚೀಸ್ ಫ್ಯಾಶನ್ ಡಿಸೈನಿಂಗ್ ಹಾಗು ಕೌಶಲ್ಯಾಧಾರಿತ ತರಬೇತಿ ಕೇಂದ್ರದಲ್ಲಿ ನಡೆಯಿತು.ಎಂ.ಎಸ್.ಎಮ್.ಇ




























