ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ. ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ
ಬೈಂದೂರು ಕಿರಿಮಂಜೇಶ್ವರದಲ್ಲಿರುವ ಜಿ.ಎನ್ ಖಾರ್ವಿ ಕಾಂಪ್ಲೆಕ್ಸ್ನಲ್ಲಿ ನೂತನ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಶುಭಾರಂಭಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜಿಲ್ಲೆಯನ್ನು ಸೇಫ್ ಆಗಿಸುವ ನಿಟ್ಟಿನಲ್ಲಿ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಸಂಸ್ಥೆಯು ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ನಿಯಂತ್ರಣ ಕೊಠಡಿ ಮಾದರಿಯಲ್ಲಿ
ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಲಯವಾರು ನೀಟ್ ಫಲಿತಾಂಶ ಪ್ರಕಟವಾಗಿದ್ದು ರಾಜಸ್ತಾನ, ಗುಜರಾತ್ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಉತ್ತಮ ಸಾಧನೆ ಮಾಡಿವೆ. ಹರಿಯಾಣದ 720ಕ್ಕೆ 720 ಪಡೆದಿದ್ದ ಒಬ್ಬರು ಕೂಡ ಮತ್ತೆ ಆ ಸಾಧನೆ ಪಡೆದಿಲ್ಲ. 700ಕ್ಕೆ ಮೇಲೆ ಅಂಕ ಗಳಿಸಿದವರಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ನೀಟ್ ಫಲಿತಾಂಶದಂತೆ 2,250 ಮಂದಿ ಸೊನ್ನೆ ಅಂಕ ಪಡೆದಿದ್ದಾರೆ ಮತ್ತು 9,400 ವಿದ್ಯಾರ್ಥಿಗಳು ನಕಾರಾತ್ಮಕ ಅಂಕ ಪಡೆದಿದ್ದಾರೆ. ಪ್ರಶ್ನೆಪತ್ರಿಕೆ
ಭಾರತದ ಪ್ರಸಿದ್ಧ ಟೆನ್ನಿಸ್ ಆಟಗಾರರಾದ ವಿಜಯ ಅಮೃತರಾಜ್ ಮತ್ತು ಲಿಯಾಂಡರ್ ಪಯಸ್ರಿಗೆ ಅಂತರರಾಷ್ಟ್ರೀಯ ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಸಂದಿದೆ. ಟೆನ್ನಿಸ್ ಆಟಗಾರರಾಗಿ ಲಿಯಾಂಡರ್ ಪಯಸ್ ಮತ್ತು ಟೆನ್ನಿಸ್ಗೆ ನೀಡಿರುವ ಕೊಡುಗೆಗಾಗಿ ವಿಜಯ ಅಮೃತ್ರಾಜ್ ಅವರುಗಳಿಗೆ ಈ ಗೌರವ ಸಲ್ಲುತ್ತಿದೆ. ಇಲ್ಲಿಗೆ ೨೮ ದೇಶಗಳ ೨೬೭ ಜನರು ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಪಡೆದಂತಾಯಿತು ಎಂದು ಇಂಟರ್ನ್ಯಾಶನಲ್ ಟೆನ್ನಿಸ್ ಹಾಲ್ ಆಫ್ ಫೇಮ್ ಒಕ್ಕೂಟವು ತಿಳಿಸಿದೆ.ಟೆನ್ನಿಸ್
ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ
ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು. ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಭಾನುವಾರ ಗುರು ಪೂರ್ಣಿಮೆಯನ್ನು ಶ್ರದ್ಧಾ
ಪುತ್ತೂರು: ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತದೇಹ ಪತ್ತೆಯಾಗಿದೆ.ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು
ಮಂಗಳೂರು: ಕುರುಬ ಸಮುದಾಯದ ವತಿಯಿಂದ ದ್ವಿತೀಯ ಬಾರಿಗೆ ವಿಧಾನ ಪರಿಷತ್ ಶಾಸಕರಾಗಿ ಆಯ್ಕೆಯಾದ ಶ್ರೀ ಐವನ್ ಡಿಸೋಜ ರವರಿಗೆ ಅಭಿನಂದಿಸಿ ಶುಭ ಕೊರಲಾಯಿತು.ಮೊದಲನೆಯ ಬಾರಿ ಶಾಸಕರಾಗಿದ್ದಾಗ ತಮ್ಮ ಸಮಾಜದ ಬೆಳವಣಿಗೆಗೆ ನೀಡಿದ ಸಹಕಾರದ ಬಗ್ಗೆ ಸ್ಮರಿಸಿ , ಮುಂದಿನ ದಿನಗಳಲ್ಲಿ ಕುರುಬ ಸಮುದಾಯದ ಜನರಿಗೆ ರೇಶನ್ ಕಾರ್ಡ್ ಶೈಕ್ಷಣಿಕವಾಗಿ ಸ್ಕಾಲರ್ಶಿಪ್ ನ ಹಾಗೂ ಇತರ ಸಮಸ್ಯೆಯ ಬಗ್ಗೆ ವಿವರಿಸಿದರು. ಈ ಬಗ್ಗೆ ಸರಕಾರದ ಗಮನ ಸೆಳೆಯಬೇಕೆಂದು ಕುರುಬ ಸಮಾಜದ ನಾಯಕರು ಹಾಗೂ
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು ನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ




























