Home Archive by category Fresh News (Page 188)

ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ’ಕೆಸರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆ

ಪ್ರಕೃತಿಯೇ ವಿಶ್ವವಿದ್ಯಾನಿಲಯ. ಮರ, ನದಿ ಕೂಡಾ ಪರೋಪಕಾರ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ನಾಶವಾಗಬಾರದು. ಅದರ ಜತೆಗೆ ಬದುಕು ಸಾಗಬೇಕು. ಪ್ರಕೃತಿ ಸಮತೋಲನ ಕಾಪಾಡುತ್ತದೆ. ಪ್ರಕೃತಿಯನ್ನು ಸ್ವಚ್ಛವಾಗಿಡುವುದು ಕರ್ತವ್ಯ ಮತ್ತು ಪರಿಣಾಮವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆಧ್ಯಾತ್ಮದ ಚಿಂತನೆ ಮೂಲಕ ಜೀವನ ಪಾವನವಾಗಬೇಕು ಎಂದು ಒಡಿಯೂರು ಶ್ರೀ

ಮಂಗಳೂರು: ರೆ.ಫಾ. ಮೈಕಲ್ ಎಲ್ ಸಾಂತುಮೇಯರ್ ಅವರಿಗೆ ಪಿಹೆಚ್‌ಡಿ ಪ್ರದಾನ

ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಮತ್ತು ಕ್ಯಾಂಪಸ್ ನಿರ್ದೇಶಕರಾದ ರೆವರೆಂಡ್ ಫಾದರ್ ಮೈಕಲ್ ಎಲ್ ಸಾಂತುಮೇಯರ್ ಅವರಿಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಯಿತು. ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಕೆಲಸದಲ್ಲಿ ತೊಡಗಿಕೊಳ್ಳುವುದರ ಕಣ್ಣೋಟಗಳು ಮತ್ತು ಅದು ಸಂಘಟಿತ ನಾಗರಿಕ ವರ್ತನೆಯ ಮೇಲೆ ಬೀರುವ ಪರಿಣಾಮಗಳು ಎಂಬ ಪ್ರಬಂಧಕ್ಕಾಗಿ ಡಾಕ್ಟರ್ ಆಫ್ ಫಿಲಾಸಫಿ ನೀಡಿ ಗೌರವಿಸಿದೆ. ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಶೋಧನಾ

ರಸ್ತೆ ಕಾಮಗಾರಿಗೆ ಸ್ಥಳೀಯರ ಆಗ್ರಹ

ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್‌ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ರೋಡ್, ತೋಡಾಗಿ ಪರಿಣಮಿಸಿದ್ದು ಸ್ಥಳೀಯರು ಸಂಬಂಧಪಟ್ಟವರಿಗೆ ಹಿಡಿ ಶಾಪ

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ ವಿಧಿವಶ

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ಸೋಮವಾರ ವಿಧಿವಶರಾದರು.ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಬೆಂಗಳೂರು ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗಿ

ಭಾನುವಾರ 954 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 159 ಮಂದಿ ಡೆಂಗಿ ಹೊಂದಿರುವುದು ದೃಢ ಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ. ಡೆಂಗಿ ಬಾಧಿತರಲ್ಲಿ ಎಲ್ಲ ಪ್ರಾಯದವರೂ ಇದ್ದು ಭಾನುವಾರದ 159 ಪ್ರಕರಣದಲ್ಲಿ 80 ಬೆಂಗಳೂರು ನಗರ ವ್ಯಾಪ್ತಿಯದಾಗಿದೆ. ಸದ್ಯ 301 ಜನರು ಡೆಂಗಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರುಷದ ಒಟ್ಟು ಡೆಂಗಿ ಪ್ರಕರಣ 7,165 ಎಂದು ಆರೋಗ್ಯ ಇಲಾಖೆ ಹೇಳಿದೆ. ಡೆಂಗಿ ಜ್ವರಕ್ಕೆ

ಪುರಿ ಜಗನ್ನಾಥ ರಥೋತ್ಸವ ನೂಕು ನುಗ್ಗಲು

ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ನೂಕು ನುಗ್ಗಲಿನಲ್ಲಿ ಒಬ್ಬ ಸತ್ತುದರಿಂದ ತೇರು ಎಳೆಯುವುದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ತೇರು ಎಳೆಯುವ ಸಮಯದಲ್ಲಿ ಹೆಚ್ಚು ಭಕ್ತರು ಸೇರಿದ್ದರು. ರಥ ಎಳೆಯಲು ಮುನ್ನುಗ್ಗಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಒಬ್ಬ ಉಸಿರು ಕಟ್ಟಿ ಸತ್ತರೆ ಹಲವರು ಕೆಳಕ್ಕೆ ಬಿದ್ದು ಗಾಯಗೊಂಡರು. ಒಬ್ಬಿಬ್ಬರು ಗಂಭೀರ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್

ಜಗತ್ತಿನ ಬಹು ಜನರು ಪ್ರೀತಿಸುವ ಹಣ್ಣು ಪಪ್ಪಾಯಿ

ಜಗತ್ತಿನ ಜನರು ಪ್ರೀತಿಸುವ ಹಣ್ಣುಗಳಲ್ಲಿ ಒಂದಾದ ಪಪ್ಪಾಯಿ ಪ್ರತಿ ವರುಷ ಆರು ಕೋಟಿ ಟನ್ ಉತ್ಪಾದನೆ ಆಗುತ್ತದೆ. ಪಪ್ಪಾಯಿಯ ಬೇಸಾಯ ಮತ್ತು ಮೂಲ ತೆಂಕಣ ಮೆಕ್ಸಿಕೋ ಮತ್ತು ಕೋಸ್ಟಾರಿಕಾ ಆಗಿದೆ. ಪಪ್ಪಾಯಿ ಹೆಸರು ಕೂಡ ಅಲ್ಲಿಯದೇ ಆಗಿದೆ. ಇದು ತನ್ನ ಮದ್ಗುಣ ಮತ್ತು ಉತ್ತಮ ಪೋಷಕಾಂಶಗಳಿಂದ ವಾಣಿಜ್ಯ ಮಹತ್ವದ ಹಣ್ಣು ಎನಿಸಿದೆ.ಪಪ್ಪಾಯಿ ಕಾರಿಕಾ ಉಷ್ಣ ವಲಯದ ಹಣ್ಣಾಗಿದೆ. ಇಂಡೋನೇಶಿಯಾದಲ್ಲಿ ಇದರ ಎಲೆಯನ್ನು ಔಷಧಿಯಾಗಿ ಬಳಸುತ್ತಾರೆ. ಪಪ್ಪಾಯಿಯ ಸೊನೆ ಮತ್ತು ಕೆಲವು

ಪಡುಬಿದ್ರಿ :ಯುವವಾಹಿನಿ ಅಡ್ವೆ ಘಟಕದಿಂದ ಕೆಸರ್ಡೊಂಜಿ ದಿನ

ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಅಡ್ವೆ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಗದ್ದೆಯಲ್ಲಿ ಹತ್ತನೇ ವರ್ಷದ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗರೋಡಿಯ ಮುಖ್ಯ ಅರ್ಚಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷ ಸಚಿನ್ ಎಸ್. ಕರ್ಕೇರ ಇವರ ನೇತ್ರತ್ವದಲ್ಲಿ ಪ್ರಪ್ರಥಮ ಬಾರಿಗೆ ಈ ಕೆಸರು ಗದ್ದೆ ಕ್ರೀಢಾಕೂಟ ಆಯೋಜಿಸಲಾಗಿದ್ದು, ಸುತ್ತಲ ಗ್ರಾಮಗಳಿಂದ ನೂರಾರು ಮಂದಿ

ಉಳ್ಳಾಲ:ಮನೆಯ ಗಾಡ್ರೆಜ್‌ನೊಳಗಿದ್ದ ಚಿನ್ನಾಭರಣ ಕಳವು ಪ್ರಕರಣ-ಇಬ್ಬರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8ರಿಂದ ಜೂ.16ರ ಮಧ್ಯಾಹ್ನ 12ರ ನಡುವೆ ನಡುವೆ 15