Home Archive by category Fresh News (Page 190)

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ

ಮಂಗಳೂರು: ಜುಲೈ 7ರಂದು ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ

ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು ಬೆಳಿಗ್ಗೆ 10.15ಕ್ಕೆ ಸರಿಯಾಗಿ ನಡೆಯಲಿರುವ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ

35ನೇ ಹಂತದ ಗೆಲುವು ಸಾಧಿಸಿ ದಾಖಲೆ ಬರೆದ ಕ್ಯಾವೆಂಡಿಶ್ ಬೆಲ್ಜಿಯಂನ ಲೆಜೆಂಡ್ ಎಡ್ಡಿ ಮೆರೆಕ್ಸ್ ದಾಖಲೆ ಪತನ

ಬ್ರಿಟನ್ನಿನ ಮಾರ್ಕ್ ಕ್ಯಾವೆಂಡಿಶ್ ಅವರು ಟೂರ್ ಡೆ ಫ್ರಾನ್ಸ್ ತುಳಿಬಂಡಿ ಸೈಕ್ಲಿಂಗ್‌ನಲ್ಲಿ 35ನೇ ಹಂತದ ಗೆಲುವು ಸಾಧಿಸಿ ದಾಖಲೆ ಬರೆದರು. 2021ರಲ್ಲಿ ಕ್ಯಾವೆಂಡಿಶ್ ಅವರು 34ನೇ ಹಂತ ಗೆಲುವು ಸಾಧಿಸಿ ಸೈಕ್ಲಿಂಗ್ ದಂತ ಕತೆ ಬೆಲ್ಜಿಯಂನ ಎಡ್ಡಿ ಮೆರೆಕ್ಸ್ ದಾಖಲೆ ಸರಿಗಟ್ಟಿದ್ದರು. ಈಗ ಮುರಿದು ದಾಖಲೆ ಬರೆದಿದ್ದಾರೆ. 5ನೇ ಹಂತದ ಸ್ಪ್ರಿಂಟ್ ಸೈಕ್ಲಿಂಗ್‌ನಲ್ಲಿ 69.4 ಕಿಲೋಮೀಟರ್ ವೇಗದಲ್ಲಿ ಬಂದ ಕ್ಯಾವೆಂಡಿಶ್ ಸೈಂಟ್ ವಲ್ಬಾಸ್‌ನಲ್ಲಿ ಕೈಯೆತ್ತಿ ತನ್ನ ದಾಖಲೆ

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಚ್. ಎಮ್ ಹಮೀದ್ ಬೆಳ್ಳಾರೆ ಆಯ್ಕೆ

ಸುಳ್ಯ. ಬೆಳ್ಳಾರೆ ಕೆಪಿಸಿಸಿ ಕಾನೂನು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾಕ್ಟರ್ ಎ ಜೆ ಅಕ್ರಮ್ ಪಾಷಾರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಝಕರಿಯ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಸಮಿತಿ ಸದಸ್ಯರಾದ ಹಮೀದ್ ಎಚ್ ಎಂ ಬೆಳ್ಳಾರೆ ಇವರನ್ನು ನೇಮಕ ಮಾಡಲಾಗಿದೆ. ದಿನಾಂಕ 30. 6 .2018 ರಿಂದ ಜಾರಿಗೆ ಬರುವಂತೆ ನೇಮಿಸಿರುವುದಕ್ಕೆ ಎಲ್ಲಾ ರೀತಿಯಿಂದಲೂ ಸಹಕರಿಸಿದ ಪ್ರೋತ್ಸಾಹ ನೀಡಿದ

ಕಿನ್ನಿಗೋಳಿ: ರೋಟರಿಯ ವಲಯ ಸಹಾಯಕ ಗವರ್ನರ್ ಆಗಿ ಶರತ್ ಶೆಟ್ಟಿ ಆಯ್ಕೆ

ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ,ಸಂಕಲಕರಿಯ ಹಾಲು ಉತ್ಪಾದಕರ ಸಂಘ,ಮುಲ್ಕಿ ವಲಯ ಪತ್ರಕರ್ತರ ಸಂಘ,ಕಿನ್ನಿಗೋಳಿಯ ಸಾರ್ವಜನಿಕ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ

ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತದಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

ವಿದ್ಯರ‍್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು . ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಯುವ ಜನಾಂಗದ ಆದ್ಯ ರ‍್ತವ್ಯ ಆಗಿರುತ್ತದೆ. ಕರ‍್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನರ‍್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಹಾಗೂ ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯರ‍್ಥಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ದಾಳಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಾಲೂಕು ಕಚೇರಿ ಅಧಿಕಾರಿಗಳು ಕಡತ ವಿಲೇವಾರಿ ಮಾಡಲು ಜನರನ್ನು ಸತಾಯಿಸುತ್ತಿದ್ದರು. ಆದ್ದರಿಂದ ಶಾಸಕರು ಕಚೇರಿ ದಿಢೀರ್ ಅಂತಾ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಜನರ ಸಮಸ್ಯೆ ಆಲಿಸಿದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ಇತರೆ ಅಧಿಕಾರಿಗಳನ್ನ ತರಾಟೆಗೆ

ಗಾಯಕ, ಸಮಾಜ ಸೇವಕ ಯುವರಾಜ್ ದೇವಾಡಿಗ ಇನ್ನಿಲ್ಲ

ದುಬೈಯ ಯುವ ಗಾಯಕ, ಸಮಾಜ ಸೇವಕ ಯುವರಾಜ್ ಕೆ ದೇವಾಡಿಗ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯುವರಾಜ್ ಕೆ ದೇವಾಡಿಗ ಅವರು ಮಂಗಳೂರಿನ ಮಂದಾರಬೈಲ್ ನ ನಿವಾಸಿಯಾಗಿದ್ದು ಶಾರ್ಜದ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. 2 ವರ್ಷಗಳ ಹಿಂದೆ ಇವರ ವಿವಾಹವು ಬಿಜೈ ಕಾಪಿಕಾಡಿನ ಪ್ರತಿಮಾ ಎಂಬುವವರ ಜೊತೆ ನಡೆದಿತ್ತು. ಯೌಟ್ಯೂಬ್ ಮತ್ತು ಫೇಸ್ಬುಕ್‌ನಲ್ಲಿ ಸ್ವರಬ್ರಾಮ್ಹರೀ ಎಂಬ ಚಾನೆಲ್ ಮುಖಾಂತರ ತಮ್ಮ ಹಾಡುಗಾರಿಕೆಯಿಂದ ಹಲವಾರು ಅಭಿಮಾನಿಗಳನ್ನು