Home Archive by category Fresh News (Page 212)

ಬೀಚ್‍ಗಳಲ್ಲಿ ಬೀಚ್‍ಗಾರ್ಡ್ ನೇಮಕ : ಡಾ|| ಚೂಂತಾರು

ದಿನಾಂಕ: 26 05-2024 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುರತ್ಕಲ್ ಮತ್ತು ಸಸಿಹಿತ್ಲು ಬೀಚ್‍ಗಳಿಗೆ ಭೇಟಿ ನೀಡಿ ಅಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಪ್ರವಾಹ ರಕ್ಷಣಾ ಕಾರ್ಯದ ಕುರಿತು ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲಾ

ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲ ಕೊಡುಗೆ

 ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲಗಳನ್ನು ಸೌಧಾಮಿನಿ  ಮಾಲಕರಾದ  ಮೋನಪ್ಪ ನಾಯ್ಕ್ ಎಂಬವರು ಸೇವಾರೂಪದಲ್ಲಿ ನೀಡಿದರು. ಇವರಿಗೆ ದೇಗುಲದ ವತಿಯಿಂದ ಶ್ರೀ ದೇವರ ಪ್ರಸಾದ ನೀಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ಹಾಗೂ ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತಿದ್ದರು.

ಉಡುಪಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳು ವಶಕ್ಕೆ

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 18ರಂದು ನಡು ರಸ್ತೆಯಲ್ಲಿಯೇ ನಡೆದ ಗ್ಯಾಂಗ್‌ವಾರ್ ಗೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಾಪು ಕೊಂಬಗುಡ್ಡೆ ಮೂಲದ ಆಶಿಕ್ (26), ತೋನ್ಸೆ ಹೂಡೆಯ ರಾಕೀಬ್ (21) ಹಾಗೂ ಮೇ 25ರಂದು ಸಕ್ಲೈನ್ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೆ ಮೂವರನ್ನು ಉಡುಪಿ ನಗರ

ಮಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ: ಸಲೀಂ ಅಹ್ಮದ್

ಶಿಕ್ಷಕರ ಮತ್ತು ಪದವೀಧಕರ ಕ್ಷೇತ್ರದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮ್ಮ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಮತ್ತು ಕೆಕೆ ಮಂಜುನಾಥ್ ಅವರು ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿಯಿಂದ ಅನೇಕ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಜನರಿಗೆ ನಮ್ಮ ಸರ್ಕಾರದ

ಹಾಸನ:  ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಮೃತ್ಯು

ಕಾರು – ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ. ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ,ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು. ಎಲ್ಲರೂ

ವಿಟ್ಲ: ವಿದೇಶದಲ್ಲಿರುವ ವ್ಯಕ್ತಿಯ ಮನೆಗೆ ನುಗ್ಗಿದ ಕಳ್ಳರು: ಸೊತ್ತುಗಳಿಗಾಗಿ ಸಾಕಷ್ಟು ಜಾಲಾಡಿದ ಕಳ್ಳರು

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ. ಮನೆ ಮಾಲೀಕ ವಿದೇಶದಲ್ಲಿದ್ದು, ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು ಮನೆಯಿಡೀ ಜಾಲಾಡಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ನಡೆದಿದೆ. ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಜ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ

ಹೋಟೆಲ್ ಉದ್ಯಮದಲ್ಲಿ ಹೊಸತನ ಸೃಷ್ಟಿಸಿದ ರಾಜೇಂದ್ರ ಶೆಟ್ಟಿ: ಪುಣೆಗೆ ಲಗ್ಗೆ ಇಟ್ಟಿದೆ ಹೋಟೆಲ್ “ವಿಶ್ವನಾಥ್ ಪ್ಯಾಲೆಸ್” “ಪಂಜುರ್ಲಿ

ಜಗತ್ತಿನಲ್ಲೇ ಹೋಟೆಲ್ ಉದ್ಯಮದಲ್ಲಿ ಪ್ರಸಿದ್ಧಿಯನ್ನು ಪಡೆದವರು ನಮ್ಮ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯವರು.ಪುಣೆಯ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ   ಪಂಜುರ್ಲಿ ಗ್ರೂಪಿನ “ವಿಶ್ವನಾಥ್ ಪ್ಯಾಲೆಸ್”  ಹೋಟೆಲ್ ಬದುಕಿಗೊಂದು ಭರವಸೆಯ ಬೆಳಕಾಗಿದೆ.   ಉಪಹಾರ  ಸೇವಿಸುವುದಕ್ಕಾಗಿ  ಹೋಟೆಲ್ ಒಳಗಡೆ ಹೆಜ್ಜೆ ಇಟ್ಟಾಗ  ಪ್ರತೀ ಹೆಜ್ಜೆಗೂ ಇಲ್ಲಿನ ಗೋಡೆಗಳ ಮೇಲಿನ ಭಿತ್ತಿ ಪತ್ರಗಳು ಮೈ

ಮಂಗಳೂರು: ಡಾ. ನರೇಶ್ವಂದ್ ಹೆಗ್ಡೆ ಪರ ನಟ ಅರವಿಂದ ಬೋಳಾರ್ ಅಬ್ಬರದ ಪ್ರಚಾರ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರ ಪರವಾಗಿ ನಟ ಅರವಿಂದ ಬೋಳಾರ್ ಅವರು ಎರಡನೇ ದಿನ ಕೂಡ ಪ್ರಚಾರದಲ್ಲಿ ತೊಡಗಿದರು. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರ ಪರವಾಗಿ ನಟ  ಅರವಿಂದ ಬೋಳಾರ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಂಗಳೂರಿನ

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿದ್ಯಾವಂತ, ಶಿಕ್ಷಕನೇ ಅಭ್ಯರ್ಥಿಯಾಗಿ ಪ್ರತಿನಿಧಿಸಬೇಕು: ಡಾ.ನರೇಶ್ಚಂದ್ ಹೆಗ್ಡೆ

ನೈಋತ್ಯ ಶಿಕ್ಷಕರ ಕ್ಷೇತ್ರ ಅತ್ಯಂತ ಸುಶಿಕ್ಷಿತ ಮತದಾರರ ಕ್ಷೇತ್ರವೆನಿಸಿದೆ.ಇಲ್ಲಿನ ಮತದಾರರು ಕನಿಷ್ಠ ಎರೆಡೆರಡು ಪದವಿಗಳನ್ನು ಪಡೆದವರು ಈ ಕ್ಷೇತ್ರವನ್ನು ವಿದ್ಯಾವಂತ ಮತ್ತು ಸ್ವತಃ ಶಿಕ್ಷಕನೇ ಆಗಿರುವ ಅಭ್ಯರ್ಥಿಯೇ ಪ್ರತಿನಿಧಿಸಬೇಕು ಎಂಬ ಪರಿಕಲ್ಪನೆಯಡಿ ಹೃದ್ರೋಗ ಶಸ್ತ್ರ ಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ವಹಿಸಿರುವುದಾಗಿ ನೈರುತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ

ದೇರಳಕಟ್ಟೆ: ಆವರಣ ಗೋಡೆ ಕುಸಿದು ಎರಡು ಕಾರಿಗೆ ಹಾನಿ

ದೇರಳಕಟ್ಟೆ ಯೇನೆಪೊಯ ಆಸ್ಪತ್ರೆ ಬಳಿ ಮರದ ಮಿಲ್ಲೊಂದರ ಆವರಣ ಗೋಡೆ ಕುಸಿದು ಎರಡು ಕಾರು ಮತ್ತು ಒಂದು ಕೈಗಾಡಿಗೆ ಹಾನಿಯಾದ ಘಟನೆ ನಡೆದಿದ್ದು, ಘಟನೆಯ ಸಂದರ್ಭದಲ್ಲಿ ವಾಹನದಲ್ಲಿ ಯಾರೂ ಇಲ್ಲದ ಕಾರಣ ಮತ್ತು ಆವರಣ ಗೋಡೆ ಬದಿಯಲ್ಲಿ ಎರಡೇ ವಾಹನಗಳು ಇದ್ದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.   ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಆವರಣಗೋಡೆ ಒದ್ದೆಯಾಗಿದ್ದು, ಎತ್ತರದ ಹಳೆ ಗೋಡೆಯಾಗಿದ್ದು, ಕುಸಿದು ಬಿದ್ದಿದೆ. ಯೇನೆಪೊಯ ವೈದ್ಯರಿಗೆ