Home Archive by category Fresh News (Page 223)

ಮದುವೆಯಾಗುವುದಿಲ್ಲ ಎಂದರೆ ಗುಂಪು ಅತ್ಯಾಚಾರ

ಮದುವೆಯಾಗಲು ಒಪ್ಪದ ತರುಣಿಯನ್ನು ಮದುವೆಯಾಗಲು ಬಯಸಿದ್ದವನು ನಾಲ್ವರ ಜೊತೆಗೆ ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹುಡುಗ ಹುಡುಗಿ ಮೊದಲಿನಿಂದ ಪರಿಚಿತರಿದ್ದರು. ಸರಕಾರಿ ಕೆಲಸ ಸಿಕ್ಕ ಮೇಲೆ ಹುಡುಗಿಯು ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್‍ನಲ್ಲಿ ನೆಲೆಸಿದ ಮೇಲೆ ಹಳ್ಳಿಯ ಸಂಪರ್ಕ ಕಡಿಮೆಯಾಯಿತು. ಅಂತಿಮವಾಗಿ ಯುವಕನು ತನ್ನ ಅಣ್ಣ,

ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣ; ಬಿಜೆಪಿಯವರದೇ ದೊಡ್ಡ ಕಿತಾಪತಿ; ಮಾಜೀ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಿಜೆಪಿಯ ಒಂದಿಬ್ಬರ ಕೈವಾಡವಿದೆ ಎಂದು ಮಾಜೀ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದರು.ಬಿಜೆಪಿಗೆ ಹಾಸನದಲ್ಲಿ ಸ್ಥಳವಿಲ್ಲ ಮತ್ತು ಗೆಲುವು ಅಸಾಧ್ಯ ಎಂದು ತಿಳಿದ ಬಳಿಕ ಮಾಜೀ ಪ್ರಧಾನಿ ದೇವೇಗೌಡರ ಕುಟುಂಬದ ಹೆಸರನ್ನು ಕೆಡಿಸಲು ಈ ಸಂಚು ಮಾಡಲಾಗಿದೆ. ಪೆನ್ ಡ್ರಯ್ವ್ ತಯಾರಿಸಿ ಹಂಚುವ ಮೂಲಕ ದೇವೇಗೌಡರ ಕುಟುಂಬಕ್ಕೆ ಕಳಂಕ ಹಚ್ಚಲು ಭಾರೀ ತೆರೆಯ ಮರೆಯ ಸಂಚು ನಡೆದಿದೆ ಎಂದು

ಒಂದಾದರೂ ಸತ್ಯ ಹೇಳಿ ಮೋದಿಯವರೆ- ಮುಖ್ಯಮಂತ್ರಿ

ಒಂದಾದರೂ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಆಳುವವರ ಸುಳ್ಳನ್ನು ಬಯಲು ಮಾಡುವುದು ಬುದ್ಧಿಜೀವಿಗಳ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ. ವೈ. ಚಂದ್ರಚೂಡ್ ಕಳೆದ ವರುಷ ಹೇಳಿದ್ದರು. ಸರಕಾರಗಳು ಸುಳ್ಳು ಮತ್ತು ಸುಳ್ಳು ಸುದ್ದಿಗಳ ವಿರುದ್ಧ ಕಾವಲುಗಾರ ಆಗಿ ನಿಲ್ಲಬೇಕು ಎಂದೂ ಅವರು ಹೇಳಿದರು.ಪ್ರಜಾಪ್ರಭುತ್ವ ಮತ್ತು ಸತ್ಯ ಕೈ ಕೈ ಹಿಡಿದು ಸಾಗಬೇಕು. ಆದರೆ ನಿರಂಕುಶವಾದಿ

ರಾಜಕೀಯ ಸಂಚಿನಿಂದಾಗಿ ಮುಖ್ಯಮಂತ್ರಿ ಜೈಲಲ್ಲಿದ್ದಾರೆ : ಹೈಕೋರ್ಟ್ 3 ಪಿಐಎಲ್ ವಜಾ ಮಾಡಿದೆ- ಆಮ್ ಆದ್ಮಿ ಪಕ್ಷ

ದಿಲ್ಲಿಯ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರೀವಾಲ್ ಮುಂದುವರಿಯಲಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೇಳಿದರು. ಅರವಿಂದ ಕೇಜ್ರೀವಾಲ್ ಅವರು ಮೌಲ್ಯದ ಪ್ರಶ್ನೆ ಬಂದಾಗ ಹತ್ತು ವರುಷದ ಹಿಂದೆ 49 ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಿಜೆಪಿಯ ರಾಜಕೀಯ ಸಂಚಿನ ಫಲವಾಗಿ ಕೇಜ್ರೀವಾಲ್ ಜೈಲಿನಲ್ಲಿ ಇದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದರು. ಮುಖ್ಯಮಂತ್ರಿ ಉತ್ಸವ ಮೂರ್ತಿ ಅಲ್ಲ, ದೀರ್ಘ ಕಾಲ ಅಜ್ಞಾತದಲ್ಲಿ ಇರಬಾರದು ಎಂಬ

ಹಾಸನದ ಸಂತ್ರಸ್ತೆಯರು ಹಿಂದೂ ಹೆಣ್ಣು ಮಕ್ಕಳಲ್ಲವೆ? ಕೂಡಲೆ ಬಂಧಿಸಿ ಕರೆತನ್ನಿ- ಕಾಂಗ್ರೆಸ್ ಪಕ್ಷದ ಒತ್ತಾಯ

ಸಂಸದ ಪ್ರಜ್ವಲ್ ರೇವಣ್ಣರಿಂದ ಶೋಷಿತರಾದ ಹೆಣ್ಣುಮಕ್ಕಳು ಹಿಂದೂಗಳಲ್ಲವೆ? ವಿದೇಶಕ್ಕೆ ಪರಾರಿಯಾಗಲು ಬಿಜೆಪಿ ನೆರವು ನೀಡಿದ್ದೇಕೆ ಎಂದಿತ್ಯಾದಿಯಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ಸಿನವರು ಪ್ರಶ್ನಿಸಿದರು. ಹೆಣ ಇಟ್ಟು ರಾಜಕೀಯ ಮಾಡುವ, ಹಿಂದೂ ಶಬ್ದದ ರಾಜಕೀಯ ಮಾಡುವ ಬಿಜೆಪಿಯವರಿಗೆ ಹಾಸನದಲ್ಲಿ ಅವರ ಮೈತ್ರಿ ಸಂಸದರಿಂದ ಅನ್ಯಾಯಕ್ಕೆ ಒಳಗಾದವರು ಹಿಂದೂ ಹೆಣ್ಣುಮಕ್ಕಳು ಎಂದು ತಿಳಿದಿಲ್ಲವೆ ಎಂದು ಪ್ರಶ್ನಿಸಿದರು. ಪ್ರಜ್ವಲ್ ರೇವಣ್ಣ ವಿದೇಶಕ್ಕೆ

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್,

ಸುಳ್ಯ:  ಭಕ್ತಿ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸುಳ್ಯ:  ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ…ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು… ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾದ

ಮಂಡೆಕೋಲು: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

ಸುಳ್ಯ: ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನಲ್ಲದೆ ದುಃಖಿತ ಮನಸ್ಸಿಗೆ ನೆಮ್ಮದಿಯ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.  ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಜೀವನದಲ್ಲಿ ಬರುವ ಕಷ್ಟ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ  35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಅಪ್ಪಳಿಸಿದ ಸುಂಟರಗಾಳಿ: ಐವರ ಸಾವು: 33ಮಂದಿಗೆ ಗಾಯ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ. ಸುಂಟರಗಾಳಿ ಬಳಿಕ ದಕ್ಷಿಣ