ನೆಲ್ಯಾಡಿ: ಖಾಸಗಿ ಬಸ್ಸ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ
ಕಾರ್ಕಳ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ಕಾರ್ಕಳದ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಹಾಗೂ ಪುರಸಭಾ ಮುಖ್ಯ ಅಧಿಕಾರಿ, ರೂಪಾ ಟಿ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆ ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಭಾರತ ಒಂದು ಪ್ರಪಂಚದಲ್ಲಿ ಅತಿ ಬಲಿಷ್ಠವಾದ
ಪುತ್ತೂರು : ಏ.9ರಂದು ಪುತ್ತೂರು ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಮಹಿಳಾ
ಉಳ್ಳಾಲ: 2024ರ ಮೇ, ತಿಂಗಳಲ್ಲಿ ಅಮರಿಕಾದ ನ್ಯೂಯಾರ್ಕ್ನಲ್ಲಿ ಜರಗುವ ವರ್ಲ್ಡ್ ಸೈನ್ಸ್ ಸ್ಕಾಲರ್ ಕಾರ್ಯಕ್ರಮಕ್ಕೆ ಉಳ್ಳಾಲದ ಮೊಗವೀರ ಸಮಾಜದ ಬಾಲಕಿ ಸಿಂಧೂರಳಿಗೆ ಆಹ್ವಾನ ಬಂದಿದ್ದು, ಮುಂದಿನ ತಿಂಗಳು ತಾಯಿ ಮಗಳು ಇಬ್ಬರು ಭಾಗಿಯಾಗಲಿದ್ದಾರೆ ಎಂದು ಬಾಲಕಿಯ ತಾಯಿ ಶಿಬಾನಿ ರಾಜಾ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ನ್ಯೂಯಾರ್ಕ್ನಲ್ಲಿ ನಡೆಯುವ ವರ್ಲ್ಡ್ ಸೈನ್ಸ್ ಸ್ಕಾಲರ್
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,
ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ
ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ




























