Home Archive by category Fresh News (Page 236)

ಎರ್ಮಾಳಿನ ಅಕ್ರಮ ಕೋಳಿಯಂಕಕ್ಕೆ ದಾಳಿ : ಒಂಭತ್ತು ಮಂದಿ ವಶಕ್ಕೆ

ಎರ್ಮಾಳಿನ ಬಾರೊಂದರ ಹಿಂಬದಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಒಂಭತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಪೊಲೀಸ್ ವಶದಲ್ಲಿರುವವರು ಸುರೇಂದ್ರ ಬೆಳಪು, ಮಹೇಶ್ ಕುರ್ಕಾಲು, ಗಣೇಶ್ ಶೆಟ್ಟಿ ಎಲ್ಲೂರು, ಉಮೇಶ್ ಪೂಜಾರಿ ಕಾಪು, ಶ್ರೀಕಾಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ರಾಜೇಂದ್ರ ಎಲ್ಲೂರು, ರಾಮ ತೆಂಕ ಎರ್ಮಾಳು, ಯೋಗೀಶ್

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಾಜಿ ಅಧ್ಯಕ್ಷರುಗಳಾದ ವಿಜಯ ಕುಮಾರ್ ಸೊರಕೆ, ಜಯಂತ್ ನಡುಬೈಲು, ಕೆ.ಪಿ. ದಿವಾಕರ್, ಉಪಾಧ್ಯಕ್ಷರಾದ  ಅಶೋಕ್ ಕುಮಾರ್ ಪಡ್ಪು, ಶ್ರೀಮತಿ ವಿಮಲಾ ಸುರೇಶ್, ಕಾರ್ಯದರ್ಶಿ ಚಿದಾನಂದ ಸುವರ್ಣ,

ಗೊಳಿತೊಟ್ಟು: ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ  ಗಂಭೀರ ಗಾಯ

 ರಾಷ್ಟ್ರೀಯ ಹೆದ್ದಾರಿ 75  ಬೆಂಗಳೂರು ಮಂಗಳೂರು ಮಧ್ಯೆ ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ  ಅಪಘಾತ ಸಂಭವಿಸಿ  ಮೂರು ಮಂದಿ ಗಂಭೀರ  ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ.  ಗಾಯಗೊಂಡವರನ್ನು ಕೊಕ್ಕಡದ ರಜನೀಶ್, ಗಗನ್  ಹಾಗೂ ಗೊಳಿತೊಟ್ಟು ನ ವಿನಯ್ ಎಂದು ಗುರುತಿಸಲಾಗಿದೆ. ವಿನಯ್ ಎಂಬವರು  ಸಣ್ಣಂಪಾಡಿಯಿಂದ ಗೊಳಿತೊಟ್ಟು ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕೊಕ್ಕಡದಿಂದ  ಉಪ್ಪಿನಂಗಡಿಯಲ್ಲಿ

ನೆಲ್ಯಾಡಿ: ಜಿಲ್ಲಾ ಪ್ರಚಾರ ಸಮಿತಿಯ ಸದಸ್ಯರಾಗಿ ಉಷಾ ಅಂಚನ್ ನೇಮಕ

ನೆಲ್ಯಾಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ನೆಲ್ಯಾಡಿಯ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ. ಉಷಾ ಅಂಚನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರೂ ದ.ಕ. ಚುನಾವಣಾ ಪ್ರಚಾರ ಉಸ್ತುವಾರಿಯೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಚಾರ ಸಮಿತಿಗೆ ನೇಮಿಸಿದ್ದಾರೆ.  ತಾಲೂಕು ಪಂಚಾಯತ್ ಮಾಜಿ ಸದಸ್ಯೆಯಾಗಿ, ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ಕಾರ್ಯದರ್ಶಿಯಾಗಿ, ಕಡಬ ಬ್ಲಾಕ್ ಮಹಿಳಾ

ನವಮಂಗಳೂರು ಬಂದರಿಗೆ ‘ಸೆವೆನ್ ಸೀಸ್ ಮರೈನರ್’ ಹಡಗು ಆಗಮನ

ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 6ನೇ ಹಾಗೂ 2023-24ನೇ ಆರ್ಥಿಕ ವರ್ಷದ ಕೊನೆಯ ಕ್ರೂಝ್  ‘ಸೆವೆನ್ ಸೀಸ್ ಮರೈನರ್’ನ್ನು ಬರಮಾಡಿಕೊಂಡಿತು. ಸೆವೆನ್ ಸೀಸ್ ಮರೈನರ್ 610 ಪ್ರಯಾಣಿಕರು ಮತ್ತು 440 ಸಿಬ್ಬಂದಿಯನ್ನು ಹೊತ್ತು ಮಂಗಳೂರಿಗೆ ಆಗಮಿಸಿದ್ದು, ಪ್ರವಾಸಿಗರಿಗೆ ನವ ಮಂಗಳೂರು ಬಂದರಿನ ಹಡಗು ತಂಗುದಾಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣಗಳು, ದೇವಾಲಯ, ಮಾರುಕಟ್ಟೆ ಮತ್ತು ಅಂಗಡಿಗಳಿಗೆ ತೆರಳಲು

ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ದೆಹಲಿ: ಹಿರಿಯ ರಾಜಕಾರಣಿ ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅವರ ನಿವಾಸದಲ್ಲಿ ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ ಪ್ರದಾನ

ಕಪಿಲಾ ನದಿಯಲ್ಲಿ ನಿಂತ ನೀರಿನ ಹರಿವು: ದೇವರ ಮೀನುಗಳಿಗೆ ತೊಂದರೆಯ ಆತಂಕ

 ಬೆಳ್ತಂಗಡಿ. ಶಿಶಿಲ ದೇವಸ್ಥಾನದಲ್ಲಿ ದೇವರ ಮೀನುಗಳಿಗೆ ಕಪಿಲಾ ನದಿಯಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವುದರಿಂದ   ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ

ಕಡಬದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗದ್ದಲ

ಪ್ರಮುಖ ಸ್ಥಾನಮಾನಗಳನ್ನು ನೀಡುವ ವೇಳೆ ಮುಸ್ಲಿಂ ಸಮುದಾಯವನ್ನು ಅವಗಣಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಶನಿವಾರ ಜರಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಕ್ಷದಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಅವಗಣಿಸಲಾಗಿದೆ ಎಂದು ಸಭೆ ಆರಂಭವಾಗುವ ಮುನ್ನ ಜಿಲ್ಲಾ ಮುಖಂಡರ ಜತೆ ಮುಸ್ಲಿಂ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಆ ವೇಳೆ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಆತ್ಮಹತ್ಯೆ?

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ  ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು

ಮಂಗಳೂರು: ಗ್ಯಾಲಕ್ಸಿ ಯುನಿಸೆಕ್ಸ್ ಸಲೋನ್ ಶುಭಾರಂಭ

ಮಂಗಳೂರಿನ ನವಭಾರತ್ ಸರ್ಕಲ್‌ನ ಗುಲಾಬಿ ಶ್ರೀಪಾದ್ ಎನ್‌ಕ್ಲೇವ್‌ನಲ್ಲಿ ಸುಸಜ್ಜಿತವಾದ ಗ್ಯಾಲಕ್ಸಿ ಯುನಿಸೆಕ್ಸ್ ಸಲೂನ್ ಶುಭಾರಂಭಗೊಂಡಿತು.ನೂತನ ಸಲೂನನ್ನು ಗಣ್ಯರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುಡಿಪುವಿನ ಸೂರಜ್ ಪಿಯು ಕಾಲೇಜಿನ ಚೇರ್‌ಮ್ಯಾನ್ ಡಾ. ಮಂಜುನಾಥ್ ರೇವಣ್ಕರ್ ಅವರು ಮಾತನಾಡಿ, ಮಂಗಳೂರು ನಗರದಲ್ಲಿ ಸುಸಜ್ಜಿತ ಮಾದರಿಯಲ್ಲಿ ಗ್ಯಾಲಕ್ಸಿ ಸಲೋನ್ ಕಾರ್ಯಾರಂಭಗೊಂಡಿರುವುದು ಸಂತಸದ ವಿಚಾರ ಎಂದರು.