Home Archive by category Fresh News (Page 264)

ಮೂಡುಬಿದಿರೆ: ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪುರಸಭಾ ಅಧಿಕಾರಿಗೆ ಚಾಟಿ ಬೀಸಿದ ಲೋಕಾಯುಕ್ತ ಅಧಿಕಾರಿಗಳು

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ

ಮಂಗಳೂರು: ಟಾಟಾ ಸಮೂಹದ ತನಿಷ್ಕ್ ಜ್ಯುವೆಲ್ಲರಿ ಮಳಿಗೆ ಮರು ಆರಂಭ

ಭಾರತದ ಅತಿ ದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ಟಾಟಾ ಸಮೂಹದ ತನಿಷ್ಕ್ ಚಿನ್ನಾಭರಣದ ಭವ್ಯ ಮಳಿಗೆಯು ಮಂಗಳೂರಿನಲ್ಲಿ ಮರು ಆರಂಭಗೊಂಡಿತು.ಟಾಟಾ ಸಮೂಹವು ತನ್ನ ರಿಟೇಲ್ ಉದ್ಯಮವಾದ ತನಿಷ್ಕ್ ಜ್ಯುವೆಲ್ಲರಿಯನ್ನು ಮಂಗಳೂರಿನಲ್ಲಿ ಮರು ಆರಂಭಿಸಿದ್ದು, ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಭಾಸ್ಕರ್ ಭಟ್ ಹಾಗೂ ರೀಜನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಟಾಟಾ ಸನ್ಸ್ ಪ್ರೈವೆಟ್

ಬಾಯಿಯಲ್ಲಿ ಉಸಿರಾಟ ಮಾಡಬಾರದೇಕೆ?

ಉಸಿರಾಟ ಎನ್ನುವುದು ನೈಸರ್ಗಿಕವಾದ ನಮಗರಿವಿಲ್ಲದೆ ಉಂಟಾಗುವ ಜೈವಿಕ ಪ್ರಕ್ರಿಯೆಯಾಗಿರುತ್ತದೆ. ಪ್ರತಿಯೊಬ್ಬ ಜೀವಿಗೂ ಅಗತ್ಯವಾದ ಆಕ್ಸಿಜನ್ ದೊರಕಿ, ಅನಗತ್ಯವಾದ ಕಾರ್ಬನ್ ಡೈಯಾಕ್ಸೈಡ್ ಮತ್ತು ಇತರ ಅನಿಲಗಳು ಉಸಿರಾಟದ ಮುಖಾಂತರ ಹೊರ ಹಾಕಲ್ಪಡುತ್ತದೆ. ನಾವು ಸೇವಿಸಿದ ಗಾಳಿ ನೇರವಾಗಿ ಶ್ವಾಸಕೋಶಕ್ಕೆ ಗಾಳಿ ಕೊಳವೆ ಅಥವಾ ಟ್ರೇಕಿಯಾ ನಾಳದ ಮುಖಾಂತರ ತಲುಪುತ್ತದೆ. ನಾವು ಗಾಳಿಯನ್ನು ಮೂಗು ಮತ್ತು ಬಾಯಿಯ ಮುಖಾಂತರ ಒಳಗೆ ಸೆಳೆದುಕೊಳ್ಳಬಹುದು. ಆರೋಗ್ಯವಂಥ ವ್ಯಕ್ತಿಗಳು

17ನೇ ಲೋಕ ಸಭೆಗೆ ವಿದಾಯ ಹೇಳುವ ಮೊದಲು

17ನೇ ಲೋಕ ಸಭೆಯು 88% ನಿಗದಿತ ಕೆಲಸ ಮಾಡಿದೆ ಎಂದು ವರದಿ ಆಗಿದೆ. ಆದರೆ ಅವರೆಲ್ಲ ಲೋಕಸಭೆಯಲ್ಲಿ ಗದ್ದಲ ಮಾಡಿದ್ದರ ಬಗೆಗೇ ಮಾಧ್ಯಮಗಳಲ್ಲಿ ಹೆಚ್ಚು ವರದಿಯಾಗಿತ್ತು. ಗದ್ದಲ ಮಾಡಿದ, ಕೂಗಾಡಿದ, ಕಲಾಪ ಮುಂದೂಡಿದ, ಹೊರ ನಡೆದ, ಹಾಜರಿ ಹಾಕಿ ಭತ್ಯೆ ಪಡೆದು ಕ್ಯಾಂಟೀನ್‍ನಲ್ಲಿ ಕುಳಿತ ಕಾಲ ಎಷ್ಟು ಎಂದು ಲೆಕ್ಕ ಸಿಕ್ಕಿಲ್ಲ. ಬಹುತೇಕ ಸಂಸದರು ತಮ್ಮ ಅನುಕೂಲದ ಹೊರತಾಗಿ ಬೇರೆಯದರ ಬಗೆಗೆ ತಲೆ ಕೆಡಿಸಿಕೊಂಡುದು, ತಲೆ ಓಡಿಸಿದ್ದು ಕಡಿಮೆ. ಹಾಲಿ ಲೋಕ ಸಭೆಯ ಅವಧಿ ಮುಗಿಯಲು

ಮಂಗಳೂರು: ಜೆರೂಸಾ ಶಾಲೆ ಪ್ರಕರಣ, ಜಾಲ ತಾಣ ಅಪಪ್ರಚಾರ : ಸೆನ್ ಠಾಣೆಗೆ ದೂರು ನೀಡಿದ ಮಾಜೀ ಕೌನ್ಸಿಲರ್‌ ಅಪ್ಪಿ

ಮಂಗಳೂರು ವೆಲೆನ್ಸಿಯಾದ ಜೆರೂಸಾ ಶಾಲೆಯ ಪ್ರಕರಣ ಸಂಬಂಧವಾಗಿ ಕೆಲವರು ಜಾಲ ತಾಣಗಳ ಮೂಲಕ ಸಮಾಜದ ನೆಮ್ಮದಿ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜೀ ಕೌನ್ಸಿಲರ್ ಅಪ್ಪಿ ಅವರು ಸೆನ್ ಠಾಣೆಗೆ ದೂರು ನೀಡಿದರು. ವಾಟ್ಸ್‌ ಆ್ಯಪ್ ವಾಯ್ಸ್ ಮೆಸೇಜ್, ತಿರುಚಿದ ಫೋಟೋ ಮೆಸೇಜ್ ಎಂದು ಹರಿದಾಡುತ್ತಿವೆ. ವೈರಲ್ ಆಗುತ್ತಿರುವ ಇವು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಗಲಭೆ ಎಬ್ಬಿಸುವ ಉದ್ದೇಶದಿಂದ ಕೂಡಿವೆ. ಕೂಡಲೆ ಇವುಗಳ ವಿರುದ್ಧ ಕ್ರಮ

ಮಂಗಳೂರು: ಉರ್ವ ಬೋಳೂರಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಸಹಸ್ರ ಕಲಶ ಸಹಿತ ಬ್ರಹ್ಮಕಲಶ ಪೂರಣಂ

ಮಂಗಳೂರಿನ ಉರ್ವ ಬೋಳೂರಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳು ವಿಧಿ ವಿಧಾನಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ವೈದಿಕ ವಿಧಿ-ವಿಧಾನಗಳು ನೆರವೇರಿದವು. ಪುಣ್ಯಾಹಃ ಪ್ರಾತ ಕಾಲ 2 ಗಂಟೆಯಿಂದ ಸಹಸ್ರಕಲಶ ಸಹಿತ ಬ್ರಹ್ಮಕಲಶ ಪೂರಣಂ, ಗೋಪೂಜೆ, 5.15ರಿಂದ ಪಂಚಗವ್ಯ ಪುಣ್ಯಾಹಃ ಪಂಚಾಮೃತ ಸಹಿತ ಬ್ರಹ್ಮಕಲಶಾಭಿಷೇಕ ನೆರವೇರಿತು. ಶ್ರೀ ಮಾರಿಯಮ್ಮ

ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ಪರವಾಗಿ *ಶ್ರೀ ಭಾಸ್ಕರ್ ರಾವ್ ( CISO) ಅವರು RBI ನ ಗವರ್ನರ್ ಶ್ರೀ ಟಿ.ರಬಿ ಶಂಕರ್ ಮತ್ತು ಶ್ರೀ ಎ.ಕೆ. ಗೋಯೆಲ್,(ಪಂಜಾಬ್

ಮೂಡುಬಿದಿರೆ : ಜೆಇಇ ಮೈನ್ಸ್ ಫಲಿತಾಂಶ:ಆಳ್ವಾಸ್ ಪದವಿಪೂರ್ವ ಕಾಲೇಜಿನ 53 ವಿದ್ಯಾರ್ಥಿಗಳಿಗೆ 95ಕ್ಕೂ ಅಧಿಕ ಪರ್ಸಂಟೈಲ್

ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ – 97.1516355 ಹಾಗೂ ಗಣಿತ- 99.537079)

ಸುರತ್ಕಲ್: ಫೆ.18 ರಂದು ಸುರತ್ಕಲ್ ನಲ್ಲಿ ಆಯುಷ್ಮಾನ್ ಮತ್ತು ಇ ಶ್ರಮ ಕಾಡ್೯ ವಿತರಣೆ

ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ ಆಯೋಜಿಸಲಾಗಿದೆ.ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು