ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್
ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 265ನೇ ಕಾರ್ಯಕ್ರಮವಾಗಿ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಸಸ್ಯರಾಶಿಗಳ ಮಹತ್ವ ಎಂಬ ಘೋಷಣೆಯಡಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಮಕ್ಕಳೊಂದಿಗೆ ಸಂವಾದ ನಡೆಸಿ ಪಕ್ಷಿ ಸಂಕುಲಗಳ ಉಳಿವಿನ ಮಹತ್ವದ ಬಗ್ಗೆ ಮನವರಿಕೆ ಮಾಡಿದರು. ಶಿಕ್ಷಕಿಯರು, ಮಕ್ಕಳು
ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಹರಾಜು ಪ್ರಕ್ರಿಯೆ ಕೃಷ್ಣಾಪುರದ ಎಮ್ಜೆಎಮ್ ಹಾಲ್ನಲ್ಲಿ ನಡೆಯಿತು. ಜನವರಿ 12 ರಿಂದ 21ರ ವರೆಗೆ 32ತಂಡಗಳ ಮದ್ಯೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವು ಕೃಷ್ಣಾಪುರದ ಪ್ಯಾರಡೈಸ್ ಮೈದಾನದಲ್ಲಿ ನಡೆಯಲಿದ್ದು, ಅದರ ಬಿಡ್ಡಿಂಗ್ ಪ್ರಕ್ರಿಯೆಯು ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಮಾತನಾಡಿ,
ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು. ಬಿಜೆಪಿ ಪರ ಶಿವಸೇನೆಯನ್ನು ಒಡೆದು ಏಕನಾಥ ಶಿಂಧೆ ಮುಖ್ಯಮಂತ್ರಿ ಆದವರು. ಆಗ ಮಹಾ ಅಘಾಡಿ ಮೈತ್ರಿ ಸರಕಾರವನ್ನು ಬೀಳಿಸಲಾಗಿತ್ತು. ಉದ್ಧವ್ ಠಾಕ್ರೆಯವರ ಬಣ ಪಕ್ಷ ಬಿಟ್ಟ ಶಾಸಕರನ್ನು ಅನರ್ಹ ಗೊಳಿಸುವಂತೆ
ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು ಸಂಕೀರ್ಣದಲ್ಲಿ ನಡೆದ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಈಜು
ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ
ಪುತ್ತೂರು: ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023 ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ ಎಂದು ಶಾಂತಿಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಂ ಭಟ್ ಮತ್ತು ಚಿಕ್ಕಮುಡ್ನೂರು ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದ್ರಟ್ಟದಲ್ಲಿ 2ನೇ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು ಸಮಿತಿಗೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು. ಸಮಿತಿಯ ಅಧ್ಯಕ್ಷರಾದ ದಿನಕರ
ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ
ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಕಾಶವಾಣಿ ಮತ್ತು ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾಗಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯ ಸಮಿತಿಯ ನಿರ್ಣಯದಂತೆ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶ ನೀಡಿರುತ್ತಾರೆ. ಕಾರ್ಯಾಧ್ಯಕ್ಷರಾಗಿ ಉದಯಕುಮಾರ್ ಬಿ ಹೈಕಾಡಿ, ಖಜಾಂಚಿಯಾಗಿ ಸ್ಮಿತಾ




























