Home Archive by category Fresh News (Page 33)

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ಪ್ರಾರ್ಥನೆ

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ.. ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು. ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿ ಪ್ರಸನ್ನ ಕುಮಾರ್ ಮಾರ್ತಾ ರಿಗೆ ಸಾಂತ್ವನ ಹೇಳಿದ್ದಾರೆ.ಸಂದರ್ಭದಲ್ಲಿ

ವಿಶ್ವಕಪ್ ಗೆದ್ದ ಕಬಡ್ಡಿ ಆಟಗಾತಿ೯ ಧನಲಕ್ಷ್ಮೀಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭವು ಸೋಮವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಮಾತನಾಡಿ, ಕ್ರೀಡಾ ಸಾಧಕರಿಗೆ ಮತ್ತಷ್ಟು ಉತ್ತೇಜನ ನೀಡಲು ಅನೇಕ ರಾಜ್ಯ ಸರ್ಕಾರಗಳು

72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 04, ರಿಂದ 11, 2026 ರವರೆಗೆ ನಡೆಯಲಿದೆ.ಚಾಂಪಿಯನ್‌ಶಿಪ್‌ಗೆ ಸಿದ್ಧತೆಯಾಗಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ​​(ಕೆವಿಎ) ಕರ್ನಾಟಕ ರಾಜ್ಯ ಪುರುಷ

ಡಿ.4 : ಬಬ್ಬುಕಟ್ಟೆ ಸರಕಾರಿ ಶಾಲೆಯಲ್ಲಿ ಡೆನ್ನ ಡೆನ್ನಾನ – ಪದ ಪನ್ಕನ’ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ- ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ

ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಪಡುಕುತ್ಯಾರು, ವಿಶ್ವಕರ್ಮ ಸಮಾಜ ಸೇವಾ ಸಂಘ, ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ

ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ಹರಿಶ್ಚಂದ್ರ ಆಚಾರ್ಯ ಗೌರವಾಧ್ಯಕ್ಷರು, ಚಂದಯ್ಯ ಪಿ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ ಗೌರವ ಸಲಹೆಗಾರರು, ಮಾಧವ ಶೀನ ಆಚಾರ್ಯ ಮುಂಬೈ ಕಮಿಟಿ ಅಧ್ಯಕ್ಷರು, ಕಾರ್ಯದರ್ಶಿಯಾಗಿ ಸುರೇಶ್ ಆರ್ ಆಚಾರ್ಯ,ಕಾಪು ಜಯರಾಮ ಆಚಾರ್ಯ

ಎಸ್ ಕೆ ಪೂಜಾರಿ ಅವರಿಗೆ ವಿಶ್ವಮಾನ್ಯ ಪ್ರಶಸ್ತಿ ಪ್ರದಾನ

ಮಸ್ಕತ್:ಕನ್ನಡ ಸಂಘ ಮಸ್ಕತ್ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಹಯೋಗದೊಂದಿಗೆ ಒಮಾನ್ ದೇಶದ ಮಸ್ಕತ್ ನ ಬೌಷರ್ ಸಿಬಿಎಫ್ಎಸ್ ಸಭಾಂಗಣದಲ್ಲಿ ದಿನಾಂಕ 28-11-2025 ರಂದು ಮೊನ್ನೆ ನಡೆದ “3ನೇ ವಿಶ್ವ ಕನ್ನಡ ಹಬ್ಬ” ಆಚರಣೆಯ ಯು ನಡೆಯಿತು. ಕನ್ನಡ ಹಬ್ಬದ ಸುಸಂದರ್ಭದಲ್ಲಿ ಮಸ್ಕತ್ ನ ಹೆಸರಾಂತ ಸಮಾಜ ಸೇವಕರು, ಯಶಸ್ವಿ ಉದ್ಯಮಿಗಳು, ಶ್ರೀ ಗಣೇಶ ಫೆಸ್ಟಿವಲ್ ಮಸ್ಕತ್ ಸಮಿತಿಯ ಅಧ್ಯಕ್ಷರು, ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರು ಮತ್ತು

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ

ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾತಿ೯ ಧನಲಕ್ಷ್ಮೀ ಪೂಜಾರಿಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾರ್ತಿ, ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಧನಲಕ್ಷ್ಮಿ ಪೂಜಾರಿಯವರಿಗೆ ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ಶನಿವಾರ ಭವ್ಯವಾದ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ದ.ಕ ಜಿಲ್ಲಾ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಸ್ವಾಗತಿಸಿ, ಅಭಿನಂದಿಸಿದರು. ಬಳಿಕ ಎಡಪದವಿನಲ್ಲಿ ವಿವೇಕಾನಂದ ಪಿಯು ಕಾಲೇಜು