Home Archive by category Fresh News (Page 4)

ಇಸ್ರೇಲ್‌ ಮೇಲೆ ಇರಾನ್‌ನಿಂದ ಪ್ರತಿದಾಳಿ

ಟೆಲ್‌ ಅವೀವ್: ಇಸ್ರೇಲ್‌ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ ದಾಳಿಯನ್ನು ಇಸ್ರೇಲ್‌ ರಕ್ಷಣಾ ಪಡೆ(ಐಡಿಎಫ್‌) ಖಚಿತಪಡಿಸಿದೆ.‘ಸ್ವಲ್ಪ ಸಮಯದ ಹಿಂದೆ ಇಸ್ರೇಲ್‌ ಕಡೆಗೆ ಇರಾನ್‌ ಕ್ಷಿಪಣಿಗಳು ಬರುತ್ತಿರುವುದನ್ನು ನಾವು ಗುರುತಿಸಿದ್ದೇವೆ. ಇರಾನ್‌ ಬೆದರಿಕೆಯನ್ನು ತಡೆಯಲು ಎಲ್ಲಾ ವ್ಯವಸ್ಥೆ

ದುಬೈ ಸೇರಿ ಗಲ್ಫ್‌ ದೇಶಗಳಲ್ಲಿನ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ

ದುಬೈ: ಇರಾನ್‌, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ. ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ, ಮನೆಯಲ್ಲಿಯೇ ಜಾಗರೂಕತೆಯಿಂದ ಇರಬೇಕು ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು – ನ್ಯಾಯಕ್ಕಾಗಿ ಹಾಗೂ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ

ದ.ಕ ಜಿಲ್ಲೆಯ ವಿಶೇಷ ಚೇತನರಿಗೆ ವಿವಿಧ ಉದ್ಯೋಗದಾತರ ಪ್ರಾಯೋಜಿತ ಯಾಂತ್ರಿಕ ತ್ರಿಚಕ್ರವಾಹನ ವಿತರಣಾ ಕಾರ್ಯಕ್ರಮ

ಮಂಗಳೂರು; ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು. ಅವರು ಪದವಿನಂಗಡಿಯ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಬೆನಕ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ ಜಿಲ್ಲೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ

ಅರೆಬಾಸೆ ಗ್ರಾಮೋತ್ಸವ -2026

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್ 8ರಂದು ಜರುಗಲಿದೆ. ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ‘ಅರೆಬಾಸೆ ಒಳ್ಸೊಮ… ಅರೆಬಾಸೆ ಬೆಳ್ಸೊಮ..’ ಎಂಬ ಆಶಯದೊಂದಿಗೆ ಪೂರ್ವಾಹ್ನ ಗಂಟೆ 9.30ರಿಂದ ಜರುಗಲಿರುವ ಕಾರ್ಯಕ್ರಮವನ್ನು ಅರೆಭಾಷೆ ಅಕಾಡೆಮಿಯ

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯಾನ್

​ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ ಪೀಳಿಗೆಗೆ ದೊಡ್ಡ ಪ್ರೇರಣೆ. ಇಡುಕ್ಕಿಯ ಸಾಧಾರಣ ಕೃಷಿಕ ಮತ್ತು ಅಂಗನವಾಡಿ ಶಿಕ್ಷಕಿಯ ಮಗನಾದ ಇವರು,

ಪಣಂಬೂರು: ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ

ಕನ್ಯಾನ ಸದಾಶಿವ ಶೆಟ್ಟಿ – ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ: ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ

ಮುಂಬಯಿ,- ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಸಮಾಜದ ಮುಂಚೂಣಿ ಮಹಾ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ನಡುವಿನ ಬಿನ್ನಾಭಿಪ್ರಾಯಗಳು ಇಂದು ಸುಖಾಂತ್ಯಗೊಂಡಿದ್ದು, ಸಮುದಾಯದ ಏಳಿಗೆಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ಫೆಬ್ರವರಿ 26ರಂದು ಕಾಂದಿವಲಿ ಪೂರ್ವದ ಠಾಕೂರ್ ವಿಲೇಜ್‌ನಲ್ಲಿ ‘ಸೋರಾ ಬೈ ನೈನ್’ ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಮಾಜಿ ಸಂಸದ ಗೋಪಾಲ್ ಸಿ. ಶೆಟ್ಟಿ ಸಮಕ್ಷಮದಲ್ಲಿ ನಡೆದ ಸಂಧಾನ

ಮಂಗಳೂರು: ಉದ್ಯಮಿ ಲಂಚುಲಾಲ್ ಕೆ.ಎಸ್.ಅವರಿಗೆ ವ್ಯವಹಾರ ಮತ್ತು ಮನೋರಂಜನಾ ವ್ಯಕ್ತಿತ್ವ ಪ್ರಶಸ್ತಿ ಪ್ರದಾನ

ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್‌ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಭಾಗವಹಿಸಿದ್ದರು. ಉದ್ಯಮಿ ಲಂಚುಲಾಲ್ ಅವರು, ಈ ವರ್ಷದ ವ್ಯವಹಾರ ಮತ್ತು

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ: ವಿದ್ಯುತ್ ಕಂಬ ಮುರಿದು ಮೀನುಗಾರಿಕಾ ಕಾರ್ಮಿಕ ಸಾವು

ಕಾಪು:ಮಂಗಳೂರು ನಗರದ ಮೀನುಗಾರಿಕಾ ಧಕ್ಕೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಮೈ ಮೇಲೆ ಬಿದ್ದ ಪರಿಣಾಮ ಮೀನುಗಾರಿಕಾ ಕಾರ್ಮಿಕ, ತಮಿಳುನಾಡು ಮೂಲದ ಮುರುಗನ್ (35) ಭಾನುವಾರದಂದುಮೃತಪಟ್ಟಿದ್ದಾರೆ. ಭಾನುವಾರ ಮುಂಜಾನೆ ಧಕ್ಕೆಯಲ್ಲಿ ಮೀನಿನ ಬಾಕ್ಸ್ ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮುರುಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಮೂವರು