Home Archive by category Fresh News (Page 43)

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಭಾರಿಗಳಾದ

ರಾಜ್ಯ ಮಟ್ಟದ ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್ ಬಾಲಕರು, ಜೂನಿಯರ್ ಬಾಲಕಿಯರು, ಸಬ್ ಜೂನಿಯರ್ ಬಾಲಕರು, ಸಬ್ ಜೂನಿಯರ್ ಬಾಲಕಿಯರು, ಸೀನಿಯರ್

‘ಬಲೆ ತುಳು ಓದುಗ’ ;ನ.12 ರಂದು ಅಕಾಡೆಮಿಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೆರಡನೇ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬುಧವಾರದಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ 30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು. ಕಾರ್ಯಕ್ರಮವನ್ನು

ಬೆಳ್ಳೆ ಗ್ರಾಮ ಪಂಚಾಯತ್ ಸಂತೃಪ್ತಿ ನಗರದಲ್ಲಿ “ಹೈ- ಮಾಸ್ಟ್ ದೀಪ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಕಾಪು:ಬೆಳ್ಳೆ ಗ್ರಾಮ ಪಂಚಾಯತ್ ಮತ್ತು ಹೃದಯಂ ಫೌಂಡೇಶನ್ ಸಹಯೋಗದೊಂದಿಗೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೃಪ್ತಿ ನಗರದ ಬಳಿ ಅಳವಡಿಸಲಾದ “ಹೈ- ಮಾಸ್ಟ್ ದೀಪದ ಎಂದರು ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಹೈ ಮಾಸ್ಟ್ ದೀಪದವನ್ನು ಕೊಡಮಾಡಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ,

ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅರಿಯಡ್ಕ ವಲಯದ ಕರ್ನುರೂ ಕಾರ್ಯಕ್ಷೇತ್ರದಲ್ಲಿ ದಾರಿದೀಪ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕರ್ನುರೂ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ರೈ ಇವರು ಉದ್ಘಾಟಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮ ಸದುಪಯೋಗವನ್ನು ಎಲ್ಲರೂ ಪಡೆಯುವಂತೆ ಹಾಗೂ ನಮ್ಮ ಸಂಸ್ಕೃತಿ

ಸೇವಾರ್ಥ ಏಕಾದಶೋತ್ತರ ಶತಾಧಿಕ ಸಹಸ್ರ ನಾಳೀಕೇರ ಮಹಾಗಣಪತಿ ಯಾಗ

ಶ್ರೀ ಆದಿಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ವಂಡಾರು ಇಲ್ಲಿ ವೇದಮೂರ್ತಿ ಶ್ರೀ ರಮೇಶ ಬಾಯರಿ ವಂಡಾರು ಇವರ ನೇತೃತ್ವದಲ್ಲಿ ಶ್ರೀ ಜಯಕುಮಾರ ಅಳಗುಂಡಗಿ ಶ್ರೀಮತಿ ಶ್ವೇತಾ ಜಯಕುಮಾರ ಇವರ ಸೇವಾರ್ಥ ಏಕಾದಶೋತ್ತರ ಶತಾಧಿಕ ಸಹಸ್ರ ನಾಳೀಕೇರ ಮಹಾಗಣಪತಿ ಯಾಗ ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಸಾನಿಧ್ಯದಲ್ಲಿ ಸಂಪನ್ನಗೊಂಡಿತು. ವೇದಮೂರ್ತಿ ರಮೇಶ್ ಬಾಯರಿ ಮಾತನಾಡಿ ಮಹಾಗಣಪತಿಯನ್ನು ಪರಮಾತ್ಮನ ಮತ್ತು ಸೃಷ್ಟಿಕರ್ತನ ರೂಪವಾಗಿ ಪರಿಗಣಿಸಲಾಗುತ್ತದೆ. ಬ್ರಹ್ಮಾಂಡದ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಕುತ್ಯಾರು ಇಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾಸಂಸ್ಥಾನ್ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ, 18 ನೇ ವರ್ಷದ ಜಿಲ್ಲಾ ಶೈಕ್ಷಣಿಕ ಸಹಮಿಲನ – 2025 ಪರಮಪೂಜ್ಯ ಜಗದ್ಗುರುಗಳಾದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಗಳ ದಿವ್ಯ ಹಸ್ತದಿಂದ ದೀಪ ಪ್ರಜ್ವಲಿಸಿ ಅರ್ಚನೆಯೊಂದಿಗೆ ಸರಸ್ವತಿ ವಂದನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಶ್ರೀ.

ಪ. ಪೂ. ಕಾಲೇಜುಗಳ ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್: ಆಳ್ವಾಸ್ ಗೆ 11 ಪದಕ

ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್ ವಿ ಪದವಿಪೂರ್ವ ಕಾಲೇಜು, ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ಪಿಯು ಕಾಲೇಜು ಒಟ್ಟು 7 ಚಿನ್ನ, 3 ಬೆಳ್ಳಿ ಮತ್ತು 01 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕಗಳನ್ನು ಪಡೆದುಕೊಂಡಿತು. ಜೊತೆಯಲ್ಲಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ 8 ಕ್ರೀಡಾಪಟುಗಳು

ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಎಂದು ಗುರುತಿಸಲಾಗಿದೆ. ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ

ತುಳುನಾಡಿನ ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಶ್ರೇಷ್ಠ ನಿರ್ಧಾರ :ಡಾ.ಗಣನಾಥ ಎಕ್ಕಾರ್

ಮಂಗಳೂರು: ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರಕಾರದ ನಡೆ ಶ್ಲಾಘನೀಯವಾದದ್ದು ಎಂದು ಜಾನಪದ ವಿದ್ವಾಂಸ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರು ತಾಲೂಕು