ಮಂಗಳೂರಿನ ಕೂಳೂರು ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ನೂತನವಾಗಿ ನಿರ್ಮಿಸಿದ ಇಂಟರ್ಲಾಕ್ ಸುಸಜ್ಜಿತ ಪಾರ್ಕಿಂಗ್ ಜಾಗದ ಮೊದಲನೆಯ ಹಂತದ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು.ಮಂಗಳೂರು ರಾಮಕೃಷ್ಣ ಮಠದ ಏಕಗಮ್ಯಾನಂದ ಮಹಾರಾಜ್ ಸ್ವಾಮೀಜಿ , ಕುಳೂರು ಚರ್ಚ್ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ ಡಿಸೋಜಾ
ಪೊಲೀಸರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿ ಭ್ರಷ್ಟಾಚಾರ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಮತ್ತು ನಿಖರ, ಪ್ರಾಮಾಣಿಕ ಮಾಹಿತಿಯೊಂದಿಗೆ ದೂರು ನೀಡಿದಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಲೋಕ್ ಕುಮಾರ್ ಹೇಳಿದ್ದಾರೆ.ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಬಗ್ಗೆ ಮಾಧ್ಯಮದಿಂದ ಗಮನ ಸೆಳೆದಾಗ, ಯಾವುದೇ ಆರೋಪಗಳಿದ್ದರೂ ನಿಖರ
ಕಡಬ: ಐತ್ತೂರು ಗ್ರಾ.ಪಂ.ನ ಅಧ್ಯಕ್ಷಯಾಗಿದ್ದ ಶ್ಯಾಮಲಾ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಿಗೊಳಿಸಿದ ಬಿಜೆಪಿಯ ಮಹಿಳಾ ವಿರೋಧಿ ಕುಟಿಲ ರಾಜಕಾರಣ ನಾಚಿಕೆಗೇಡು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿದ್ದ ತನ್ನ ಅಪರೇಶನ್ ಕಮಲ ಕಾರ್ಯಾಚರಣೆಯನ್ನು ಗ್ರಾಮ ಮಟ್ಟಕ್ಕೂ ಇಳಿಸಿರುವ ಬಿಜೆಪಿ ಪಕ್ಷವು ಕಾಂಗ್ರೆಸ್ ಬೆಂಬಲಿತರನ್ನು
ಗ್ರಾಮದಲ್ಲಿ ಸೌಹಾರ್ಧಯುತ ವಾತಾವರಣದೊಂದಿಗೆ ನಮ್ಮ ಸಂಸ್ಕøತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗ್ರಾಮೋತ್ಸವಗಳು ಪೂರಕವಾಗಿದ್ದು, ಬೆಳ್ಮ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಎಲ್ಲ ಸಂಘ ಸಂಸ್ಥೆಗಳು, ಎಲ್ಲಾ ಧರ್ಮದ ಸಂಘಟನೆಗಳನ್ನು, ಪಕ್ಷದ ಮುಖಂಡರನ್ನು ಒಟ್ಟು ಸೇರಿಸಿ ಐದು ದಿನಗಳ ಕಾಲ ನಡೆಸುವ ಬೆಳ್ಮ ಉತ್ಸವ ಕಾರ್ಯಕ್ರಮ ಇತರ ಗ್ರಾಮಗಳಿಗೆ ಮಾದರಿ ಕಾರ್ಯಕ್ರಮವಾಗಲಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್
ಇಕ್ಕಟ್ಟಾದ ಕಟಪಾಡಿ ಪೇಟೆಭಾಗದಲ್ಲಿ ಹೆದ್ದಾರಿ ದುರಸ್ಥಿ ಕಾರ್ಯ ಹಗಲಲ್ಲೇ ನಡೆಸಿದ್ದರ ಪರಿಣಾಮ ಮೈಲುದ್ಧ ವಾಹನಗಳು ಬ್ಲಾಕ್ ಆಗಿ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತ್ತಾಗಿದೆ. ಬ್ಲಾಕ್ನಲ್ಲಿ ಅಗ್ನಿಶಾಮಕ ವಾಹನ ಕೂಡಾ ಸಿಲುಕಿಕೊಂಡಿತ್ತು. ಈ ದಿನ ಬಹಳಷ್ಟು ಕಾರ್ಯಕ್ರಮಗಳು ಇದ್ದು ವಾಹನ ದಟ್ಟಣೆ ಅತಿಯಾಗಿದ್ದು ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಕಟಪಾಡಿ ಪೇಟೆಯಲ್ಲಿ ಅಂಡರ್ ಪಾಸ್ ಬೇಡಿಕೆ ಇದ್ದರೂ ಜನಪ್ರತಿನಿಧಿಗಳ
ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) “ಭಾರತ್ ರಂಗ್ ಮಹೋತ್ಸವ್” ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಪ್ರದರ್ಶಿಸಲು 960 ನಾಟಕಗಳಿಂದ, ಕೇವಲ 77 ನಾಟಕಗಳನ್ನು ಪ್ರಸಕ್ತ ವರ್ಷದಲ್ಲಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅಸ್ತಿತ್ವ ® ಮಂಗಳೂರು ತಂಡದ
ಹಿಮಾಲಯದಲ್ಲಿ ವಾಸಿಸುತ್ತಿರುವ ನಾಥ ಸಂಪ್ರದಾಯದ ಅವಧೂತ ಮಹಾಸಭಾದ ಬಾಬಾ ಶ್ರೀ ಸೋಮರನಾಥ ಬಾಬಜಿ ಇವರು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪೂರ್ವ ತಯಾರಿಯನ್ನು ನೋಡಿ ಈ ಮಹಾಕಾರ್ಯ ಆ ಶಿವನ ಪ್ರೇರಣೆ ಮತ್ತು ಅನುಗ್ರಹದಿಂದ ನೆರವೇರುತ್ತಿದೆ. ಶಿವನನ್ನು ಇಲ್ಲಿ ಭಜಿಸುವುದರಿಂದ ಈ ಪ್ರದೇಶ ಪಾವನ ತಾಣವಾಗಿ ಪರಿವರ್ತಿತವಾಗುತ್ತದೆ. ಅತಿರುದ್ರ ಮಹಾಯಾಗ ಯಶಸ್ವಿಯಾಗಲಿ, ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ
ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಫೆ.11ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ಕೆ.ಯು ನೀಲೇಶ್ವರ
ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಡಾ. ಚಾಂದಿನಿ ವಿಕ್ರಂ ಶೆಟ್ಟಿ ಎಚ್ ಒ ಡಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್,ಇವರಿಂದ ದಂತ ನೈರ್ಮಲ್ಯದ ಬಗ್ಗೆ ಉಪನ್ಯಾಸ ಮಾಡಲಿದ್ಧಾರೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯ ಬೇಕಾಗಿ ವಿನಂತಿ.
ಉಡುಪಿ: ನಿವೃತ್ತ ಪ್ರಾಂಶುಪಾಲ ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ವತಿಯಿಂದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಎಸ್. ನಾಡಗೌಡ ಅಪ್ಪಾಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಕಾಲಜ್ಞಾನ ಮಠದ ಶ್ರೀ ಅಪ್ಪಯ್ಯ



























