Home Archive by category Fresh News (Page 596)

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ

ಸಾಹಿತ್ಯ ಸಮ್ಮೇಳನ: ಸನ್ಮಾನ ಕಾರ್ಯಕ್ರಮ

ಉಜಿರೆ, ಫೆ.4: ಸಾಹಿತ್ಯ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿವಿಧ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸಮ್ಮಾನಿಸುವುದರಿಂದ ಅವರ ಸಾಧನೆಗೆ ಇನ್ನಷ್ಟು ಸ್ಫೂರ್ತಿ ನೀಡಿದಂತಾಗುತ್ತದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು. ಅವರು ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾರಾ ಅಬೂಬಕ್ಕರ್

ವಿಶೇಷ ಉಪನ್ಯಾಸ: ‘ಮಂಕುತಿಮ್ಮನ ಕಗ್ಗ-ಜೀವನ ಮೌಲ್ಯ’

ಉಜಿರೆ, ಫೆ.5: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ

ವೈವಿಧ್ಯಮಯ ವಸ್ತು-ವಿಷಯಗಳಿಗೆ ಸಾಕ್ಷಿಯಾದ ‘ಕವಿಗೋಷ್ಠಿ’

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ನಡೆದ ‘ಕವಿಗೋಷ್ಠಿ’ಯು ವೈವಿಧ್ಯಮಯ ವಸ್ತು-ವಿಷಯಗಳ ಕವನ ವಾಚನಕ್ಕೆ ವೇದಿಕೆಯಾಯಿತು.  ಜಿಲ್ಲೆಯ 20 ಪ್ರಸಿದ್ಧ ಕವಿಗಳು ಹಾಗೂ ಕವಯತ್ರಿಯರು ಭಾಗವಹಿಸಿದ್ದರು. ಪ್ರಸಕ್ತ ರಾಜಕೀಯ

ಸಾಹಿತ್ಯ ಸಮ್ಮೇಳನದಲ್ಲಿ 16ಕ್ಕೂ ಅಧಿಕ ಕನ್ನಡ ಪುಸ್ತಕಗಳ ಲೋಕಾರ್ಪಣೆ

ಉಜಿರೆ, ಫೆ.4: ಸಾಹಿತ್ಯವು ಭಾಷೆ ಮತ್ತು ಅಕ್ಷರದ ಸಮ್ಮಿಶ್ರಣ. ಪತ್ರಕರ್ತರು ಮತ್ತು ಸಾಹಿತಿಗಳು ಸಮಾಜದ ಎರಡು ಕಣ್ಣುಗಳಿದ್ದಂತೆ. ಪತ್ರಕರ್ತರ ಗುರುತಿಸುವಿಕೆ ಒಂದು ದಿನಕ್ಕೆ ಮುಗಿದರೂ ಸಾಹಿತಿಗಳ ಗುರುತಿಸುವಿಕೆ ತುಂಬಾ ದಿನ ಇರುತ್ತದೆ ಎಂದು ಅಮರಸುಳ್ಯ ಅಧ್ಯಯನ ಕೇಂದ್ರ ಸುಳ್ಯದ ನಿರ್ದೇಶಕ ಡಾ. ಬಿ. ಪ್ರಭಾಕರ ಶಿಶಿಲ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ

ಕನ್ನಡ ಸಾಹಿತ್ಯ ಸಮ್ಮೇಳನ : ಬಹಿರಂಗ ಅಧಿವೇಶನ; ನಿರ್ಣಯ (ಠರಾವು) ಮಂಡನೆ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು.  ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ. ಐತಪ್ಪನಾಯ್ಕ ಹತ್ತು ನಿರ್ಣಯಗಳನ್ನು ಮಂಡಿಸಿದರು: ಜಿಲ್ಲೆಯಲ್ಲಿ ಮಂಜೂರಾದ ಕನ್ನಡ ಭವನಗಳ

ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ‘ನಗೆಹಬ್ಬ’

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಖ್ಯಾತ ಹಾಸ್ಯ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರು ನಡೆಸಿಕೊಟ್ಟ ನಗೆಹಬ್ಬ ಕಾರ್ಯಕ್ರಮವು ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು. ತಮ್ಮ ಅದ್ಭುತವಾದ ಮಿಮಿಕ್ರಿ ಕಲೆಯ ಮೂಲಕ ಹಾಸ್ಯಲೋಕಕ್ಕೆ ಕರೆದೊಯ್ದರು. ದೈನಂದಿನ ಜೀವನದಲ್ಲಿ ಕೇಳಿಬರುವ ಸೈರನ್ ಸದ್ದು, ಆ್ಯಂಬುಲೆನ್ಸ್, ವಿಮಾನ

ಸಾಹಿತ್ಯ ವೇದಿಕೆಯಲ್ಲಿ ‘ಗಮಕ’ ವೈಭವ

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಗಮಕ ವಾಚನ ನಡೆಯಿತು. ಮಂಗಳೂರಿನಲ್ಲಿ ಗಮಕಕ್ಕೆ ಹೆಚ್ಚು ಮನ್ನಣೆ ನೀಡಿದ ಯಜ್ಞೇಶ್‌ ಎಸ್. ಸುರತ್ಕಲ್‌ ಅವರು ಗಮಕ ವಾಚನ ನಡೆಸಿದರು. ‘ಆದಿನಾಥನ ಪೂರ್ವವೃತ್ತಾಂತ’ದಿಂದ ಪ್ರಾರಂಭಗೊಂಡು ದುರ್ಯೋಧನ

‘ಜ್ಞಾನವಿಕಾಸ’ಕ್ಕೆ ವೇದಿಕೆಯಾದ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಅಭಿಮಾನಿಗಳ ಗಮನ ಸೆಳೆದದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮಹಿಳಾ ಸ್ವ-ಸಹಾಯ ಸಂಘದ ಜ್ಞಾನವಿಕಾಸ ಮಾಹಿತಿ ಕೇಂದ್ರ. ಜ್ಞಾನವಿಕಾಸ ಯೋಜನೆಯ ಕಾರ್ಯರೂಪಗಳನ್ನು ಮರದ ರೂಪದಲ್ಲಿ ವಿನ್ಯಾಸಗೊಳಿಸಿ ಇದರ ಕಾರ್ಯಚಟುವಟಿಕೆಗಳನ್ನು ರೆಂಬೆಕೊಂಬೆಗಳ ರೂಪದಲ್ಲಿ

ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಮಿನಿ ವಸ್ತು ಸಂಗ್ರಹಾಲಯ

ಉಜಿರೆ: ಇಲ್ಲಿನ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ 25ನೆಯ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯಲಾಗಿದ್ದ ಮಂಜೂಷಾ ವಸ್ತುಸಂಗ್ರಹಾಲಯದ ಪ್ರದರ್ಶನ ಮಳಿಗೆ (ಮಿನಿ ವಸ್ತು ಸಂಗ್ರಹಾಲಯ) ಸಾಹಿತ್ಯ ಪ್ರೇಮಿಗಳ ಜೊತೆಗೆ ಎಲ್ಲ ಪ್ರೇಕ್ಷಕರ ಗಮನ ಸೆಳೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶೇಷ ಆಕರ್ಷಣೆಯಾದ ‘ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಪ್ರಾಚ್ಯ ವಿದ್ಯಾ ಸಂಶೋಧನ ಸಂಸ್ಥೆ’ ಮತ್ತು ‘ಮಂಜೂಷಾ ವಸ್ತು