ಮೂಡುಬಿದಿರೆ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶೇಕಡ 75.78 ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 128 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ
ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ
ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ವತಿಯಿಂದ ಫೆ.5ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಸ್ವರ್ಣ ಬಿಂದು ಪ್ರಾಶನವನ್ನು ನೀಡಲಾಗುತ್ತಿದೆ. ನಗರದ ವೆಲೇನ್ಸಿಯಾ ಮತ್ತು ಕದ್ರಿ ಶಾಖೆಯಲ್ಲಿ ಸ್ವರ್ಣ ಬಿಂದು ಪ್ರಾಶನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಕ್ಕಳಿಗಾಗಿ ಈ ಲಸಿಕೆಯನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0824 2434 666, 9632008444, 9632007444 ಗೆ ಸಂಪರ್ಕಿಸಬಹುದು.
ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುತ್ತಿರುವ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವು ಉದಯರಾಗದೊಂದಿಗೆ ಆರಂಭಗೊಂಡಿತು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಲಾವಿದರು ಕರ್ನಾಟಕ ಸಂಗೀತದ ರಸಧಾರೆಯೊಂದಿಗೆ ಭಕ್ತಿಸುಧೆಯನ್ನು ಹರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧವಾಗಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆಗೂಂಡ ಕೃತಿಗಳನ್ನು ಆಧರಿಸಿ ಬೆಂಗಳೂರಿನ ಅದಿತಿ ಪ್ರಹ್ಲಾದ ಹಾಗೂ ಮಂಗಳೂರಿನ ಮೇಧಾ ಉಡುಪ ಗಾಯನ
ಉಜಿರೆ: ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾ.ರಾ. ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಎರಡನೆಯ ದಿನ ‘ದೈವಾರಾಧನೆ ಮತ್ತು ತುಳುನಾಡು’ ಎಂಬ ವಿಷಯದ ಕುರಿತು ತುಳು ಜಾನಪದ ವಿದ್ವಾಂಸ ಮತ್ತು ವಿಜ್ಞಾನ ಶಿಕ್ಷಕ ಕೆ.ಕೆ. ಪೇಜಾವರ ಅವರು ವಿಶೇಷ ಉಪನ್ಯಾಸ ನೀಡಿದರು. ದ್ರಾವಿಡ ಭಾಷಾ ವರ್ಗಗಳಲ್ಲಿ ತುಳು ಪ್ರಮುಖ ಭಾಷೆಯಾಗಿದೆ. ಇಂದಿನ ಕಾಲದಲ್ಲಿ ತುಳು ಭಾಷೆ ಮಹತ್ತರ ಭಾಷೆಯಾಗಿ ಬೆಳೆದು ಬಂದಿದೆ.
ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ‘ಹರಿಕಥೆ’ ನೆರೆದಿದ್ದವರ ಗಮನ ಸೆಳೆಯಿತು. ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರು ‘ಜಗಜ್ಯೋತಿ ಬಸವಣ್ಣ’ ಕಥಾಕೀರ್ತನ ಪ್ರಸ್ತುತಪಡಿಸಿದರು. ಬಸವಣ್ಣನವರ
ಉಜಿರೆ, ಫೆ.4: ಸಂವೇದನಾಶೀಲತೆಯಿಲ್ಲದೆ ಸಾಹಿತ್ಯವಿಲ್ಲ. ವೇದನೆಗಳು ಸಾಹಿತ್ಯದಲ್ಲಿ ಸಂವೇದನೆಯನ್ನು ಸೃಷ್ಟಿ ಮಾಡುತ್ತವೆ. ಈ ಸಂವೇದನೆಗಳು ಸಾಹಿತ್ಯ ಹಾಗೂ ಕಾವ್ಯಗಳ ಸೃಷ್ಟಿ ಮಾಡುತ್ತವೆ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಮಟ್ಟದ 25ನೇ ಸಾಹಿತ್ಯ ಸಮ್ಮೇಳನದ ಎರಡನೇ ದಿನ ನಡೆದ ‘ಜಿಲ್ಲೆಯ ಸಾಹಿತ್ಯ ಪರಂಪರೆ’ ಕುರಿತ ಗೋಷ್ಠಿಯಲ್ಲಿ ಲೌಕಿಕ
ಶಿಕ್ಷಣದ ಸುಧಾರಣೆಗಾಗಿ ಭಾರತ ಸರಕಾರವು 2020ರಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಳಿತನ್ನುಂಟು ಮಾಡಿದೆಯೇ? ಇದುವರೆಗಿನ ಸಾಧನೆಗಳೇನು? ಬಾಧಕಗಳೇನು? – ಇತ್ಯಾದಿ ಜಿಜ್ಞಾಸೆಗಳು ಶೈಕ್ಷಣಿ ವಲಯದಲ್ಲಿ ಮೂಡಿದ್ದು, ಇದರ ಸಲುವಾಗಿ ಚರ್ಚಿಸಲು ಉಪನ್ಯಾಸ ಮತ್ತು ಮುಕ್ತ ಸಂವಾದವನ್ನು ಮೇಲಿನ ಮೂರು ಸಂಘಟನೆಗಳ ಆಶಯದಲ್ಲಿ ಹಮ್ಮಿಕೊಳ್ಳಲಾಗಿದೆ. 5-2-2023 ಬೆಳಿಗ್ಗೆ 9-30ರಿಂದ ದಿನಪೂರ್ತಿ ಜರಗುವ ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಣ
ಕಿನ್ನಿಗೋಳಿ: ಕಂಬಳವು ಕರಾವಳಿ ಭಾಗದ ಒಂದು ಅಚ್ಚುಮೆಚ್ಚಿನ ಜಾನಪದ ಕ್ರೀಡೆಯಾಗಿದ್ದು ಇದು ಜನರ ಜೀವನದ ಅಂಗವಾಗಿದೆ. ನಮ್ಮ ತುಳುನಾಡಿನ ಕೃಷಿ ಮತ್ತು ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಭಾಗವಾಗಿದ್ದು ಕಂಬಳದಿಂದ ನಮ್ಮ ಸಂಸ್ಕೃತಿ ಉಳಿಯುವುದರ ಜತೆಗೆ ಪ್ರಾಣಿ ಪ್ರೀತಿಯೂ ಹೆಚ್ಚಾಗುತ್ತದೆ. ಎಂದು ಆಧ್ಯಾತ್ಮ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಹೇಳಿದರು. ಅವರು ಕಿನ್ನಿಗೋಳಿ ಸಮೀಪದ ಐಕಳದಲ್ಲಿ ನಡೆಯುವ
ಮಂಗಳೂರಿನ ರುದ್ರ ಥೇಟರ್ ಅರ್ಪಿಸುವ “ಶೂದ್ರಶಿವ” ಕನ್ನಡ ನಾಟಕ ಫೆ.5ರ ಭಾನುವಾರ ಸಂಜೆ 5.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ಈ ನಾಟಕ ಸಿದ್ದಗೊಂಡಿದೆ. ಲೇಖಕ ಬಾಬು ಶಿವ ಪೂಜಾರಿ ಅವರ ‘ಶ್ರೀ ನಾರಾಯಣ ಗುರು ವಿಜಯ ದರ್ಶನ” ಪುಸ್ತಕವನ್ನು ಪ್ರೇರಣಾ ಪಠ್ಯವಾಗಿಟ್ಟುಕೊಂಡು ಜೊತೆಗೆ ನಾರಾಯಣ ಗುರುಗಳ



























