Home Archive by category Fresh News (Page 607)

ಆಳ್ವಾಸ್‌ನಲ್ಲಿ ಗಣರಾಜೋತ್ಸವ ಸಂಭ್ರಮ, ತ್ರಿವರ್ಣದಲ್ಲಿ ಮೂಡಿದ `ಇಂಡಿಯಾ’

ಮೂಡುಬಿದಿರೆ: 74ನೇ ಗಣರಾಜ್ಯೊತ್ಸವ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ ಹೆಗ್ಡೆ ಧ್ವಜಾರೋಹಣಗೈದರು. ನಂತರ ಮಾತನಾಡಿದ ಅವರು ನಮ್ಮ ದೇಶದಲ್ಲಿ ಹಲವು ತಿದ್ದುಪಡಿಗಳು ಶಾಸಕಾಂಗದ ಸರಳ ಬಹುಮತದಲ್ಲಿ ಅಂಗೀಕೃತಗೊಳ್ಳುತ್ತಿವೆ. ಆ

ಇಖ್ರಾ ಅರೆಬಿಕ್ ಶಾಲೆ : ಗಣರಾಜ್ಯೋತ್ಸವ

ಮಂಗಳೂರು ನಗರದ ಕಂಕನಾಡಿಯ ಇಖ್ರಾ ಅರೆಬಿಕ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತ ಸಂವಿಧಾನವು ಪ್ರತಿಯೊಬ್ಬರಿಗೂ ಗೌರವದಿಂದ ಬದುಕು ಅವಕಾಶವನ್ನು ಕಲ್ಪಿಸಿದೆ. ಎಲ್ಲಾ ಧರ್ಮೀಯರಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಕಲ್ಪಿಸಿದೆ. ದೇಶದ ಕಾನೂನಿಗೆ ತಲೆಬಾಗಿ ಪ್ರತಿಯೊಬ್ಬರು ಸಂವಿಧಾನ ಮೌಲ್ಯಕ್ಕೆ ತಕ್ಕಂತೆ ಬದುಕು ರೂಪಿಸಬೇಕು ಎಂದು ಯು.ಟಿ.ಖಾದರ್

ಮಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ

ಎಸ್.ಡಿ.ಎಂ ಅಂಗಳದಲ್ಲಿ ಧ್ವಜಾರೋಹಣ: ಸಂಸ್ಕøತಿ ವೈವಿಧ್ಯತೆಯ ಅನಾವರಣ

ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್‍ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.

ಮುಂಡ್ಕೂರು : ಕಾರಿನೊಳಗಡೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ

ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟುವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ . ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ

ಯೋಧ ಮುರಳೀಧರ್ ರೈ ಹೃದಯಾಘಾತದಿಂದ ನಿಧನ

ಸಶಸ್ತ್ರ ಸೀಮಾಬಲ್‍ನಲ್ಲಿ ಭೋಪಾಲ್‍ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‍ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರು

ಕಡಬ ತಹಸೀಲ್ದಾರ್ ಮೇಲೆ ಭೂಹಗರಣ ಆರೋಪ

ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭನೆ : ನೀತಿ ತಂಡ ಎಚ್ಚರಿಕೆಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಹದಿನೈದು ದಿಗಳ ಒಳಗೆ ಹುದ್ದೆಯಿಂದ ತೆರವುಗೊಳಿಸದಿದ್ದೆ ಉಗ್ರ ಪ್ರತಿಭಟನೆ ಎದುರಿಸಬೆಕಾದೀತು ಎಂದು ನೀತಿ ತಂಡ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಎಚ್ಚರಿಸಿದರು.ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ

ಎಲ್ಲೂರು ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ 5 ಮತ್ತು 6ನೇ ವಾರ್ಡ್ ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು ಎಚ್ಚರಿಸಿದ್ದಾರೆ.ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಾರ್ಡ್ 5-6ರಲ್ಲಿ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಶಾಸಕರು ಸಹಿತ ಎಲ್ಲೂರು ಗ್ರಾ.ಪಂ.ಗೆ ಮನವಿ ಸಲ್ಲಿಸಿದರೂ ಯಾವುದೇ

ಎಸ್‍ಡಿಪಿಐ ಕಾರ್ಯಕರ್ತರಿಂದ ಕಾಂಗ್ರೆಸ್ ವಿರುದ್ಧ ಅಪಪ್ರಚಾರ..!!!

ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪ್ರಜಾದ್ವನಿ ಎಂಬ ಬಸ್ ಯಾತ್ರೆ ಮೂಲಕ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ

ಅವ್ಯವಸ್ಥೆಯ ಆಗರವಾದ ಮಡ್ಯಾರು ವಿದ್ಯಾರ್ಥಿನಿ ನಿಲಯ : ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ

ಉಳ್ಳಾಲ: ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ . ಇದು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡಿನ ಮಡ್ಯಾರ್ ಭಾಗದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ