Home Archive by category Fresh News (Page 609)

ಜೋಸ್ ಆಲುಕ್ಕಾಸ್ : ಸಂತ ಜೋಸೆಫ್ ಪ್ರಶಾಂತ್ ನಿವಾಸ್ ವೃದ್ದಾಶ್ರಮಕ್ಕೆ ಬೊಲೆರೋ ವಾಹನ ಕೊಡುಗೆ

ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್‍ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್‍ರಾವ್ ರಸ್ತೆಯಲ್ಲಿರುವ ಶೋರೂಂನಲ್ಲಿ ಕೊಡುಗೆಯಾಗಿ ನೀಡಲಾಯಿತು. ಉತ್ತರ ಪೊಲೀಸ್ ಠಾಣಾ ವೃತ್ತ

ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನ ಜ.28ರಿಂದ 30ರ ವರೆಗೆ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ 30ರ ವರೆಗೆ ನಡೆಯಲಿದೆ. ಜನವರಿ 28ರ ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ನವಕಲಶಾಭಿಷೇಕ, ಗಣಹೋಮ, ಚಪ್ಪರ ಮುಹೂರ್ತ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 5ಕ್ಕೆ ಶ್ರೀ ಕಂಬೇರ್ಲು ದರ್ಶನ ನಂತರ ಭಂಡಾರ ಏರುವುದು. ಸಂಜೆ 7

ಕುಂದಾಪುರದಲ್ಲಿ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ

ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ

ಅತ್ತೂರು ಸಂತ ಲಾರೆನ್ಸ್ ಚರ್ಚ್‍ನ ಜಾತ್ರಾ ಮಹೋತ್ಸವ ಪ್ರಾರಂಭ

ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ

ಮೂಡುಬಿದರೆ : 6 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಅವರು 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ ಅವುಗಳನ್ನು ಗ್ರಂಥಾಲಯವಾಗಿ ಪರಿವರ್ತಿಸಲು ಈಗಾಗಲೇ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ

ಕನ್ನಡದ ಖ್ಯಾತ ನಟ ಇನ್ನಿಲ್ಲ ..! !

ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ

ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರ 2022 ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಈ ವರ್ಷದಿಂದ ಎರಡು ಹೊಸ ಪ್ರಶಸ್ತಿಗಳನ್ನು ದಾನಿ ಡಾ. ಪಿ. ದಯಾನಂದ ಪೈ ಇವರ ಹೆಸರಿನಲ್ಲಿ ಸ್ಥಾಪಿಸಿದೆ. ಜ್ಯೂರಿ ಸಮಿತಿಗಳ ಶಿಫಾರಸಿನ ಮೇರೆಗೆ ಇದೀಗ ವಿಶ್ವ ಕೊಂಕಣಿ ಕೇಂದ್ರವು ಈ ಪ್ರಶಸ್ತಿಗಳ ವಿಜೇತರ ಹೆಸರುಗಳನ್ನು ಪ್ರಕಟಿಸಿದೆ. ಸಾರ್ವಜನಿಕರಿಂದ ಆನ್ ಲೈನ್ ಮುಖಾಂತರ ಆಹ್ವಾನಿಸಲಾದ ನಾಮ ನಿರ್ದೇಶನಗಳ ಆಧಾರದಲ್ಲಿ ಜ್ಯೂರಿ ಸಮಿತಿಯ ಸದಸ್ಯರ ಮೌಲ್ಯಮಾಪನದ ಬಳಿಕ ಪ್ರಶಸ್ತಿಗಾಗಿ ಆಯ್ಕೆಗಳನ್ನು ಪ್ರಕಟಿಸಲಾಗಿದೆ.ಗೋವಾದ ಹೆಸರಾಂತ

ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ  ಬದುಕಿದವರು ಸಾರಾ ಅಬೂಬಕ್ಕರ್ : ಮುದ್ದು ಮೂಡುಬೆಳ್ಳೆ

‘ಲೇಖಕಿ ಸಾರಾ ಅಬೂಬಕ್ಕರ್ ಅವರು ತನ್ನ ಧರ್ಮಕ್ಕೆ ನಿಷ್ಠರಾಗಿದ್ದರು ಮತ್ತು ಬೇರೆ ಧರ್ಮಗಳ ಜೊತೆಗೂ ಒಳ್ಳೆಯ ಒಡನಾಟ ಇಟ್ಟು ಕೊಂಡಿದ್ದರು. ಮುಸ್ಲಿಂ ಸಮುದಾಯದ ಆಚಾರಗಳು ಮತ್ತು ಆಚರಣೆಯ ಸಂಧಿಗ್ಧತೆಗಳ ತುಂಬಾ ಅಧ್ಯಯನ ಮಾಡಿ ತಮ್ಮ ಕಾದಂಬರಿಗಳಲ್ಲಿ ಕಣ್ಣಿಗೆ ಕಟ್ಟುವಂತೆ ಬರೆಯುತ್ತಿದ್ದರು. ಸ್ತ್ರೀವಾದಿಯಾಗಿದ್ದ ಸಾರಾ ಅವರು ಮಾನವತಾವಾದಿಯೂ ಆಗಿದ್ದರು. ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ  ಬದುಕಿದ ಗಟ್ಟಿ ಮನಸಿನ

ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಪ್ರಹ್ಲಾದ ಮೂರ್ತಿ ಆಯ್ಕೆ

ಮೂಡುಬಿದಿರೆ: ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ.ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜನವರಿ 27ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.ಈತ ಕಡಂದಲೆಯ ಸ್ಕಂದ ಪ್ರಸಾದ್ ಭಟ್-

ಕಡಬ: ತೆಪ್ಪ ಮಗುಚಿ ಮಹಿಳೆ ನೀರು ಪಾಲು

ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ  ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು  ಏಣಿತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ (47) ಎಂದು ಗುರುತಿಸಲಾಗಿದೆ. ದನಗಳಿಗೆ ಮೇವಿನ ಹುಲ್ಲು ತರುವುದಕ್ಕಾಗಿ ಏಣಿತಡ್ಕ ಭಾಗದಿಂದ ನದಿಯ ಇನ್ನೊಂದು ಭಾಗ ಆರೆಲ್ತಡಿ ಎಂಬಲ್ಲಿಗೆ ತೆಪ್ಪದಲ್ಲಿ ತೆರಳಿ