Home Archive by category Fresh News (Page 618)

ಕೋವಿಡ್ ಸಂದರ್ಭದಲ್ಲಿ ರೈತರಿಗೆ ನೆರವಾದ ಯು. ಸೋಮಶೇಖರ್ ಗೆ ಎನ್.ಎಸ್.ಎಸ್ ರಾಷ್ಟ್ರೀಯ ಸ್ವಯಂ ಸೇವಕ ಪುರಸ್ಕಾರ

ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಅತ್ಯುತ್ತಮ ಸ್ವಯಂ ಸೇವಕ [ರಾಷ್ಟ್ರೀಯ ಬೆಸ್ಟ್ ವಾಲೇಂಟರ್] ಪ್ರಶಸ್ತಿ ಸಂದಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ನಡೆಯುತ್ತಿರುವ

ಯುವ ಜನೋತ್ಸವದಲ್ಲಿ “ನೋ ಯುವರ್ ಆರ್ಮಿ” ವಿಶೇಷ ಮಳಿಗೆ

ಧಾರವಾಡ, ಜ, 13; ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ “ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” [ನೋ ಯುವರ್ ಆರ್ಮಿ] ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ ‘ಭಾರತೀಯ ಸೈನ್ಯದ ಕುರಿತು ಒಂದು ಸ್ಟಾಲ್ ನಿರ್ಮಿಸಲಾಗಿದೆ’ ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ಈ ಪಡೆಗಳು ಬಳಸುವ

ಯುವ ಜನೋತ್ಸವದಲ್ಲಿ ಮುಂಜಾನೆ ಯೋಗ ಮತ್ತು ಧ್ಯಾನ ಶಿಬಿರ

ಧಾರವಾಡ, ಜ.13; ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಪ್ರತಿದಿನ ಮುಂಜಾನೆ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಯುವ ಸಮೂಹದಲ್ಲಿ ನವೋಲ್ಲಾಸ ಮೂಡಿಸುತ್ತಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಕೆ.ಸಿ.ಡಿ ಕಾಲೇಜು ಮೈದಾನದಲ್ಲಿ ಪ್ರತಿದಿನ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಯೋಗ ಮತ್ತು ಧ್ಯಾನ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆಯ ಪರಿಣಿತರು ಯೋಗ ಮತ್ತು ಧ್ಯಾನದ ಮಹತ್ವ ಕುರಿತು ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ : ಕೆಪಿಸಿಸಿ ವಕ್ತಾರ ಅಮಲಾ ರಾಮಚಂದ್ರ

ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಲಾ ರಾಮಚಂದ್ರ ಹೇಳಿದರು. ಈ ಹಿಂದೆ ಇದ್ದ ಯಾವ ಶಾಸಕರ ಅವಧಿಯಲ್ಲೂ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಅಕ್ರಮ ಸಕ್ರಮ ಮಂಜೂರಾತಿಯಲ್ಲಿ

ಬೈಂದೂರಿನ ಬಡಾಕೆರೆಯಲ್ಲಿ ಚಿರತೆ ಪ್ರತ್ಯಕ್ಷ, ಜಾನುವಾರುಗಳ ಮೇಲೆ ದಾಳಿ

ಬೈಂದೂರ: ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆಯಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬಡಾಕೆರೆ ಗ್ರಾಮದ ಆಚಾರಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 8.30ರ ಹೊತ್ತಿಗೆ ಚಿರತೆ ರಸ್ತೆಯಲ್ಲಿ ಓಡಾಡುತ್ತಿರುವುದು ವಾಹನ ಸವಾರರು ಗಮನಿಸಿ ಚಿತ್ರ ಸಹಿತ ಸರೆಹಿಡಿದ್ದಾರೆ.ಕೆಲವು ದಿನಗಳಿಂದ ಆಚಾರಬೆಟ್ಟು ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ

ಜ.17ರಂದು ಪದವಿನಂಗಡಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಆಶ್ರಯ ಬಳಗ ಪದವಿನಂಗಡಿ ಕಟ್ಟೆ ಮಂಗಳೂರು ಹಾಗೂ ಊರ ಹತ್ತು ಸಮಸ್ತರು ಇವರ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಶ್ರೀ ಪಟ್ಲ ಸತೀಶ್ ಶೆಟ್ಟಿವರ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಆಡಿತೋರಿಸಲಿದ್ದಾರೆ. ಪದವಿನಂಗಡಿಯ ಬೆನಕಾ ಸಭಾಂಗಣದಲ್ಲಿ ಜನವರಿ 17ರಂದು ಮಂಗಳವಾರ ಸಂಜೆ 6.30ಕ್ಕೆ ಚೌಕಿ ಪೂಜೆ ರಾತ್ರಿ 8 ಗಂಟೆಗೆ

ತುಳು ಎಂ.ಎ. : ಚಂದ್ರಹಾಸ ಕಣಂತೂರು ಪ್ರಥಮ ರ್‍ಯಾಂಕ್

ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ತುಳು ಎಂ.ಎ. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಚಂದ್ರಹಾಸ ಕಣಂತೂರು ಅವರು ಪ್ರಥಮ ರ್‍ಯಾಂಕ್ ಪಡೆದಿರುತ್ತಾರೆ. ಹಂಪನಕಟ್ಟೆಯ ಮಂಗಳೂರು ವಿ.ವಿ.ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಚಂದ್ರಹಾಸ ಕಣಂತೂರು ಅವರು ತುಳು ಬರಹಗಾರರಾಗಿ , ವಾಗ್ಮಿಯಾಗಿ ಖ್ಯಾತಿ ಪಡೆದವರು. ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಲೆಕ್ಕಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಚಂದ್ರಹಾಸ ಕಣಂತೂರು ಅವರು

ಬುರ್ದುಗೋಳಿ ಗುಳಿಗಜ್ಜ ಕ್ಷೇತ್ರಕ್ಕೆ ಕರಿ ಹೈದ ಕರಿಯಜ್ಜ ಚಿತ್ರತಂಡದಿಂದ ಹುಂಜ ಹರಕೆ

ಉಳ್ಳಾಲ: ಕೊರಗಜ್ಜನ ಕುರಿತಾದ ಬಹು ಬಾಷಾ ಚಿತ್ರ “ಕರಿ ಹೈದ ಕರಿಯಜ್ಜ” ದ ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ ,ಶೃತಿ ಮತ್ತು ಚಿತ್ರ ತಂಡವು ಗುಳಿಗನಿಗೆ ಹರಕೆಯ ಹುಂಜವನ್ನ ಸಮರ್ಪಿಸಿದ್ದಾರೆ. ತ್ರಿವಿಕ್ರಮ ಸಪಲ್ಯ ಅವರು 5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ” ಕರಿ ಹೈದ ಕರಿಯಜ್ಜ” ಚಿತ್ರದ ಚಿತ್ರೀಕರಣದ ಆರಂಭದಲ್ಲೇ ನಿರ್ದೇಶಕರಾದ ಸುಧೀರ್ ರಾಜ್ ಉರ್ವ

ಆಪ್ ರಾಜ್ಯ, ಜಿಲ್ಲಾ ಸಮಿತಿ ಬರ್ಕಾಸ್ತು

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಘಟಕದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಯವರು, ಕರ್ನಾಟಕ ರಾಜ್ಯ, ಜಿಲ್ಲೆಗಳಲ್ಲಿನ ಎಲ್ಲಾ ಪದಾಧಿಕಾರಿಗಳು, ಘಟಕಗಳನ್ನು ಅನ್ವಯಿಸುವಂತೆ ವಿಸರ್ಜಿಸಿರುತ್ತಾರೆ. ಎಲ್ಲಾ ವಿಧಾನಸಭಾ ಅಭ್ಯರ್ಥಿ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪೂರ್ಣಪ್ರಮಾಣದಲ್ಲಿ ಸಕ್ರಿಯವಾಗಿ ಪಕ್ಷದ ನಾಯಕರು, ಕಾರ್ಯಕರ್ತರ ಸಮನ್ಚಯದಲ್ಲಿ ಪಕ್ಷದ ಪ್ರಚಾರ ಅಭಿಯಾನದಲ್ಲಿ ಭಾಗವಹಿಸುತ್ತಾ, ಶೀಘ್ರದಲ್ಲೇ ಹೊಸದಾಗಿ, ರಾಜ್ಯ ಚುನಾವಣಾ ಉಸ್ತುವಾರಿ

ಮಾಜಿ ಕೇಂದ್ರ ಸಚಿವ, RJD ಹಿರಿಯ ನಾಯಕ ಶರದ್ ಯಾದವ್ ನಿಧನ

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.