Home Archive by category Fresh News (Page 638)

ಜೈನರಪವಿತ್ರ ಸ್ಥಳ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣ ಮಾಡದಂತೆ ಪ್ರಧಾನ ಮಂತ್ರಿಯವರಿಗೆ ಅಂತರ್ದೇಶೀಯ ಪತ್ರ ಬರೆಯುವ ಕಾರ್ಯಕ್ರಮ

ಜೈನರಿಗೆ ಅತ್ಯಂತ ಪವಿತ್ರ ಸ್ಥಳವಾದ ಸಮ್ಮೇದ ಶಿಖರ್ಜಿಯನ್ನು ಜಾರ್ಖಂಡ್ ರಾಜ್ಯ ಸರಕಾರ ಪವಾಸಿ ತಾಣ ಮಾಡಲು ಆದೇಶಿಸಿದ್ದು,ಇದು ಜೈನ ಪಾವಿತ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಿರುವುದನ್ನ ಖಂಡಿಸಿ, ಡಿಸೆಂಬರ್ 28ರಂದು ಮೂಡಬಿದ್ರೆಯಲ್ಲಿ ಹಕ್ಕೋತ್ತಾಯ ಚಳುವಳಿಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಜೈನ ಸಮುದಾಯದ ಮುಖಂಡರಾದ ಕೆ.ಅಭಯಚಂದ್ರ ಜೈನ್ ಹೇಳಿದ್ದಾರೆ.

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು: ಕುಂಬಾರ ಸಂಘದ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹೋರಾಟ ಮಾಡುತ್ತಿರುವ ಬಿ.ಎಸ್. ಬದ್ರಿ ಪ್ರಸಾದ್ ಎಂಬುವರ ಮೇಲೆ ಕುಂಬಾರ ಸಂಘದ ಕೆಲವು ಆಡಳಿತ ಮಂಡಳಿಯ ಪಟ್ಟಭದ್ರರು ಎರಡು ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. 48 ಗಂಟೆಗಳಲ್ಲಿ ಹಲ್ಲೆಕೋರರನ್ನು ಬಂಧನವಾಗದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಉಗ್ರ ಪ್ರತಿಭನೆ ನಡೆಸುವುದಾಗಿ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಜಲೀಲ್ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗಾಗಿ 8ಅಧಿಕಾರಿಗಳ ತಂಡ ರಚನೆ

ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ 8 ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಹೇಳಿದ್ದಾರೆ. ಜಲೀಲ್ ಹತ್ಯೆಗೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಹೇಳಿದರು. ಜಲೀಲ್

ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಂಭ್ರಮ, ಸಡಗರ

ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ. ನಗರದ ಪ್ರಮುಖ ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆಯಿತು.  ದೀಪಾಲಂಕಾರಗೊಂಡ ಚರ್ಚ್‌ಗಳು ಮನೆಮನೆಯಲ್ಲಿ ನಕ್ಷತ್ರಗಳು, ಪ್ರಾರ್ಥನಾ ಮಂದಿರ, ಮನೆ ಮುಂಭಾಗ ಆಕರ್ಷಣೀಯ ಗೋದಲಿಗಳು, ಕ್ರಿಸ್ಮಸ್ ಟ್ರಿ, ಅದರಲ್ಲೂ ಕತ್ತಲಾಗುತ್ತಿದ್ದಂತೆ ಝಗಮಗಿಸುವ ಬೆಳಕಿನ ಮಧ್ಯೆ ಕ್ರಿಸ್ಮಸ್ ವೈಭವವನ್ನು ಕಣ್ತುಂಬಿಕೊಳ್ಳುವುದೇ ಎಲ್ಲಿಲ್ಲದ ಸಂಭ್ರಮ. ಶನಿವಾರ ಸಂಜೆ 7ರಿಂದ ನಗರದ ಮಿಲಾಗ್ರಿಸ್,

ಕಾರ್ಕಳದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಲೋಕಾರ್ಪಣೆ

ಕಾರ್ಕಳ: ರಾಷ್ಟ್ರೀಯ ನಾಯಕರೆನಿಸಿಕೊಂಡವರು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿದ್ದರೆ ಅದು ಮಾಜಿ ಉಪ ಪ್ರಧಾನಿ ಎಲ್ ಕೆ. ಅಡ್ವಾಣಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇವರಿಬ್ಬರು ಮಾತ್ರ. ಅಜಾತಶತ್ರು ಆಗಿ ದಕ್ಷ ಆಡಳಿತ ನೀಡಿ ಶುಶಾಸನ ಆಡಳಿತ ನೀಡಿದ ಅಟಲ್  ಹೆಸರಿನಲ್ಲಿ ಪಾರ್ಕ್ ಸ್ಥಾಪಿಸುವ ಮೂಲಕ ಜ್ಞಾನಿಯ ಸ್ಮರಣೆ ಜೊತೆಗೆ ಅವರ ಆಡಳಿತ ಅನುಸರಿಸಿ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ತಾಲೂಕು ಕಚೇರಿ

ಮೂಡುಬಿದಿರೆ: ಜಾಂಬೂರಿಯಲ್ಲಿ ನರೇಗಾ ಯೋಜನೆಯ ಮಾದರಿಯ ಪ್ರದರ್ಶನ

ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ  ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ ಯೋಜನೆಯ ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿರುವುದು ಅತ್ಯಾಕರ್ಷಕವಾಗಿದೆ. ಟಿ.ವಿ. ಮೂಲಕ

ಮೂಡುಬಿದಿರೆ: ಭಾಷೆ, ಪರಂಪರೆಯನ್ನು ತುಳುನಾಡಿನ ಜನತೆ ಮರೆತಿಲ್ಲ: ಅರಗ ಜ್ಞಾನೇಂದ್ರ

ಮೂಡುಬಿದಿರೆ:  ಕಂಬಳವು ಕರಾವಳಿ ಭಾಗದ ಜನರ ಜನಪದ ಕಲೆಯಾಗಿದೆ. ಈ ಭಾಗದ ಜನರು ಪ್ರಪಂಚದ ಯಾವ ಮೂಲೆಗೆ ಹೋದರೂ  ಇಲ್ಲಿನ ಭಾಷೆ, ಆಚರಣೆ, ಸಾವಿರಾರು ವರ್ಷಗಳ ಪರಂಪರೆಗಳನ್ನು ತುಳುನಾಡಿನ ಜನತೆ ಮರೆತಿಲ್ಲ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ  ೨೦ ನೇ ವರ್ಷದ

ಮೂಡುಬಿದ್ರೆ: ಜಾಂಬೂರಿ ವೀಕ್ಷಿಸಿ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಮೆಚ್ಚುಗೆ

ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಮಿಳುನಾಡು ಸರ್ಕಾರ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರು ಅನಾರೋಗ್ಯದಿಂದ ಡಿ.24 ರಂದು ನಿಧನರಾದರು.ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು..23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಡಿ.24ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ

ಗ್ರಾಮೀಣ ಭಾಗದಲ್ಲಿ ಚರ್ಚ್ ಫಾದರ್ ನೇತೃತ್ವದಲ್ಲಿ ಗ್ರಾಮದ ಮನೆಗಳಿಗೆ ಭೇಟಿ

ಕ್ರಿಸ್ ಮಸ್ ಏಸುಕ್ರಿಸ್ತನ ಜನ್ಮದಿನ. ಪ್ರಪಂಚದಾದ್ಯಂತ ಕ್ರೈಸ್ತರು ಈ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸ್ತಾರೆ. ಅದ್ರಲ್ಲೂ ಕರಾವಳಿಯಲ್ಲಿ ಕ್ರಿಸ್ ಮಸ್ ಹಬ್ಬ ಅಂದ್ರೆ ಮತ್ತಷ್ಟು ವಿಭಿನ್ನ. ಮಂಗಳೂರಿನ ಗ್ರಾಮೀಣ ಭಾಗಗಳಲ್ಲಿ ಕ್ರಿಸ್ ಮಸ್ ಹಬ್ಬದ ತಯಾರಿ ಸಂದೇಶ ಹೇಗಿರುತ್ತೆ ಅಂತಾ ತಿಳ್ಕೋಬೇಕಾ. ಹಾಗಾದ್ರೆ ಈ ಸ್ಟೋರಿ ನೋಡಿ. ನಕ್ಷತ್ರಗಳಿಂದ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಶೃಂಗಾರಗೊಂಡ ಮನೆಗಳು. ಎಲ್ಲರ ಮುಖದಲ್ಲೂ ಹಬ್ಬದ ಸಂಭ್ರಮದ ಕಳೆ. ಗ್ರಾಮದ ಚರ್ಚ್