Home Archive by category Fresh News (Page 675)

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ್ಲಿ ಸಕ್ರಿಯಾಗಿರುವ ಸದಶಿವ

ಕನ್ನಡದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದರೆ ಅಸಾಮಾನ್ಯವಾದದನ್ನು ಸಾಧಿಸಬಲ್ಲರು: ಬಿ.ಸಿ‌.ನಾಗೇಶ್

ಮಂಗಳೂರು: ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಮಾತೃ ಭಾಷೆ ಮತ್ತು ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ಅದಾಗಲೇ ಅಡಗಿರುವ ಸೂಪ್ತ ಪ್ರತಿಭೆಯ ಅನಾವರಣಗೊಳಿಸುವ ಪ್ರಯತ್ನವಾಗುತ್ತಿದೆ. ಸರ್ಕಾರದ ಈ ಪ್ರಯತ್ನಗಳ ಜೊತೆಗೆ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕನ್ನಡ ಶಾಲಾ ಮಕ್ಕಳ ಹಬ್ಬದ ಮೂಲಕ ಕನ್ನಡ ಮಾಧ್ಯಮದ ಮಕ್ಕಳಿಗೆ

ಕಾರ್ಕಳ : ಮನೆಗೆ ಬೆಂಕಿ

ಕಾರ್ಕಳ : ಮನೆ ಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ  ಮನೆಯಲ್ಲಿ ಶನಿವಾರ ಬೆಳಿಗ್ಗೆ 9:30ರ ವೇಳೆ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ತುಂಬಾ ವ್ಯಾಪಿಸಿದೆ.  ಬೆಂಕಿಯ ಕೆನ್ನಾಲಿಗೆಗೆ ಮನೆ ಮೇಲ್ಚಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯವರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಂದಾಜು 1 ಲಕ್ಷ ರೂ. ನಷ್ಟವುಂಟಾಗಿದೆ.

ಆಧುನಿಕ ಜ್ಞಾನ – ಭಾರತೀಯ ಸಂಸ್ಕೃತಿಯ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ ವಿದ್ಯಾಲಯ[ಸ್ವಾಯತ್ತ]ದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು,ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ದೇಶದ ಅಖಂಡತೆ, ಸಾರ್ವಭೌಮತೆಯನ್ನು ಎತ್ತಿಹಿಡಿಯುವ

ಶಾಲಾ ಪಠ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ : ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿ ಮಾಡುವ ಜೊತೆಗೆ ಅವರ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಕಾರ್ಯವನ್ನು ಸರಕಾರದ ವತಿಯಿಂದ ಶೀಘ್ರವೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಅನಾವರಣ ಗೊಳಿಸಿದ ಬಳಿಕ ಕರಾವಳಿ ಉತ್ಸದ ಮೈದಾನದಲ್ಲಿ

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022: ಆಂಟಿಬಯೋಟಿಕ್‌ಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ

ಮಣಿಪಾಲ 19ನೇ ನವೆಂಬರ್ 2022:ಆಂಟಿಮೈಕ್ರೊಬಿಯಲ್ (ಸೂಕ್ಷ್ಮಜೀವಿ) ನಿರೋಧಕ ದೋಷಗಳಿಂದ ಯಾರಾದರೂ, ಯಾವುದೇ ವಯಸ್ಸಿನವರು , ಯಾವುದೇ ರಾಷ್ಟ್ರದವರು ಸೋಂಕುಗಳಿಗೆ ಬಲಿಯಾಗಬಹುದು. ಸರಿಯಾದ ಮೇಲ್ವಿಚಾರಣೆ ಮತ್ತು ಸಲಹೆಯಿಲ್ಲದೆ ನೀವು ಹೆಚ್ಚು ಪ್ರತಿಜೀವಕಗಳನ್ನು ತೆಗೆದುಕೊಂಡರೆ, ನಿಮ್ಮ ವೈದ್ಯರಿಗೆ ನಿಮ್ಮ ಸೋಂಕಿಗೆ ಚಿಕಿತ್ಸೆ ನೀಡಲು ಕಷ್ಟವಾಗುತ್ತದೆ ಮತ್ತು ಈ ತೊಂದರೆಗೆ ಕಾರಣವೆಂದರೆ ಆಂಟಿಮೈಕ್ರೊಬಿಯಲ್ ಪ್ರತಿರೋಧದಿಂದಾಗುವ ಪರಿಣಾಮ. ಪ್ರತಿ ವರ್ಷ,

ಬಾವುಟಗುಡ್ಡೆ : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಹಸಿರು ಯೋಜನೆಉತ್ಪಾದನೆಗೆ

ಪೆರುವಾಜೆ : ಗ್ರಾಮವಾಸ್ತವ್ಯ ಕಾರ್ಯಕ್ರಮ

ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್ ರಾದ ಶ್ರೀ. ಅನಿತಲಕ್ಷ್ಮಿ ದೀಪಬೆಳಗಿಸುವ ಮೂಲಕ ಗ್ರಾಮ ಸಭೆಗೆ ಚಾಲನೆ ನೀಡಿದ್ದರು . ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್ ಕೇತ್ರ ಶಿಕ್ಷಣಧಿಕಾರಿ ಮಹದೇವ್ ತಾಲೂಕು ಹೆಲ್ತ್ ಆಫೀಸರ್ ನಂದಕುಮಾರ್,

ಉಳ್ಳಾಲ : ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿ

ಮಂಜೇಶ್ವರ ಮೂಲದ ಪ್ರಪುಲ್‍ರಾಜ್ ಹಲ್ಲೆಗೊಳಗಾದ ಯುವಕ. ಈತ ಮಂಜೇಶ್ವರದಿಂದ ದ್ವಿಚಕ್ರ ವಾಹನದಲ್ಲಿ ಹೊರಟು ತನ್ನ ಕುತ್ತಾರ್‌‌ನಲ್ಲಿರುವ ಅಜ್ಜಿ ಮನೆಗೆಂದು ಬರುತ್ತಿದ್ದಾಗ ರಾತ್ರಿ ವೇಳೆ ಅಂಬಿಕಾರೋಡ್ ತಲುಪಿದಾಗ 3 ಜನ ಅಪರಿಚಿತರು ವಾಹನ ನಿಲ್ಲಿಸಿ ಬಳಿಕ ಪ್ರಪುಲ್‍ರಾಜ್‍ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಪ್ರಫುಲ್ ರಾಜ್ ತೊಕ್ಕೊಟು ಖಾಸಗಿ ಚಿಕಿತ್ಸೆಗೆ