Home Archive by category Fresh News (Page 68)

ಕರಾವಳಿ ಪ್ರವಾಸೋದ್ಯಮ ಕುರಿತ ಜಿಲ್ಲಾ ಜನ ಪ್ರತಿನಿಧಿಗಳ ಸಭೆ

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ

ಸುಪ್ರೀಂ ಕೋರ್ಟು ತೀರ್ಪು :ಬೀದಿ ನಾಯಿಗಳು ಮತ್ತೆ ಬೀದಿಗೆ ಬರಲಿ! ಬೀದಿಯಲ್ಲಿ ತಿನಿಸು ಕೊಡುವುದು ಅಪರಾಧ

ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ

ಮಧ್ಯ ಪ್ರದೇಶ:ಎಲ್ಲರಿಗೂ ಎರಡು ಲಾಡು, ನನಗೆ ಒಂದು ಮುಖ್ಯಮಂತ್ರಿಗಳಿಗೆ ಸಾಮಾನ್ಯನಿಂದ ದೂರು

ಮಧ್ಯ ಪ್ರದೇಶದಲ್ಲಿ ಹಂಚಿದ ಲಾಡು ಪೊಟ್ಟಣದಲ್ಲಿ ಎಲ್ಲರಿಗೂ ಎರಡು ಲಾಡು ಸಿಕ್ಕರೆ, ಒಬ್ಬ ಸಾಮಾನ್ಯನಿಗೆ ಒಂದು ಲಾಡು ಸಿಕ್ಕಿತ್ತು. ಆತನು ಮುಖ್ಯಮಂತ್ರಿಗಳ ಸಹಾಯವಾಣಿಯಲ್ಲಿ ದೂರು ಸಲ್ಲಿಸಿದ; ಪಂಚಾಯತ್ ಒಂದು ಕಿಲೋ ಸಿಹಿ ತಪ್ಪು ದಂಡ ಕೊಟ್ಟಿತು.ಈ ಘಟನೆಯು ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯಲ್ಲಿಸ್ವಾತಂತ್ರ‍್ಯ ದಿನಾಚರಣೆಯಂದು ನಡೆದಿದೆ. ಕಮಲೇಶ್ ಕುಶ್ವಾಹನಿಗೆ ಮಾತ್ರ ಒಂದು ಲಾಡು ಕೊಡಲಾಗಿತ್ತು ಆತನು ಒಂದಿದೆ, ಎರಡು ಕೊಡಿ ಎಂದರೂ ಸಂಘಟಕರು ಕೊಟ್ಟಿಲ್ಲ. ಆತನು

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ ಮಧ್ಯಾಹ್ನ ಗಂಟೆ 2 ಕ್ಕೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಲಿದೆ. ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಶಶಿಕಲಾ ಯಶೋಧರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಕಣ್ಣಂಗಾರು

ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ

ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು. ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದರೆ ಇವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, 9 ವರ್ಷಗಳಿಂದ ದೊಡ್ಮನೆ ಫ್ರೆಂಡ್ಸ್ ತಂಡವು ಸ್ವಚ್ಛತಾ ಕಾರ್ಯಕ್ರಮ, ಚಂದ್ರಶೇಖರ

ನದಿಗಳು ಇಲ್ಲದ ಪ್ರಪಂಚದ ಅತಿ ದೊಡ್ಡ ದೇಶ

ಜಗತ್ತಿನಲ್ಲಿ ನದಿಗಳು ಇಲ್ಲದ ಅತಿ ದೊಡ್ಡ ದೇಶವಾಗಿದೆ ಸೌದಿ ಅರೇಬಿಯಾ. ಬಾವಿ, ಒಯಸಿಸ್ ಸಾಕಾಗದ ಕಾಲವಿದು.ನದಿಗಳು ಇಲ್ಲದ ದೇಶಗಳು ಈಗ ಕುಡಿಯುವ ನೀರಿಗೆ ಡಿಸಾಲಿನೇಶನ್ ಎಂಬ ಉಪ್ಪುಕಳೆ ತಂತ್ರಜ್ಞಾನವನ್ನು ನಂಬಿವೆ. ಕೆಳಗಿನವುಗಳೆಲ್ಲ ನದಿಗಳು ಇಲ್ಲದ ದೇಶಗಳಾಗಿವೆ.ಸೌದಿ ಅರೇಬಿಯಾ 70 ಶೇಕಡಾ ಕುಡಿಯುವ ನೀರನ್ನು ಉಪ್ಪು ಕಳೆ ಮೂಲಕ ಪಡೆಯುತ್ತದೆ. ಅತಿ ಹೆಚ್ಚು ಎಂದರೆ 70 ಶೇಕಡಾ ಉಪ್ಪು ಕಳೆ ತಂತ್ರಜ್ಞಾನದ ಮೂಲಕ ಕುಡಿಯುವ ನೀರು ಪಡೆಯುವ ದೇಶ ಕತಾರ್.ಯುಎಇ- ಅರಬ್

ಉಳ್ಳಾಲ : ಬೈಕ್ ಢಿಕ್ಕಿ ಹೊಡೆದು ಗಂಭೀರಗೊಂಡಿದ್ದ ಪಾದಚಾರಿ ಸಾವು

ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ. ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48)ಮೃತ ವ್ಯಕ್ತಿ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ

ಹಣ್ಣಿನಲ್ಲಿ ಇಂಡೋನೇಶಿಯಾ ಸೋಲಿಸಿದ ಮಲೇಶಿಯಾ

ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ ಉಷ್ಣವಲಯದ ಹಣ್ಣಿನ ಬೆಳೆ ವಿಸ್ತರಿಸಿದೆ. ದಶಕದ ಹಿಂದಿನವರೆಗೆ ಇಂಡೋನೇಶಿಯಾ ಮುಂದಿತ್ತು. ಕಳೆದೊಂದು

ಬಹರೀಕ್‍ನ ದಾಕಿಯಾ ಗ್ರಾಮ:ಐದರ ಹುಡುಗನ ಹಿಡಿದ ಮೊಸಳೆ ಬಡಿದು ಹೋರಾಡಿದ ಮಹಿಳೆ ಮಗನನ್ನು ಉಳಿಸಿಕೊಂಡ ವನಿತೆ

ಉತ್ತರ ಪ್ರದೇಶ ರಾಜ್ಯದ ಬಹರೀಕ್‍ನ ದಾಕಿಯಾ ಗ್ರಾಮದಲ್ಲಿ ಹುಡುಗನೊಬ್ಬನನ್ನು ಹಿಡಿದ ಮೊಸಳೆಯ ಜೊತೆಗೆ ಹೋರಾಡಿ ಮಹಿಳೆಯೊಬ್ಬಳು ಮಗನನ್ನು ರಕ್ಷಿಸಿಕೊಂಡ ಸಾಹಸಗಾತೆ ನಡೆದಿದೆ.ದಾಕಿಯಾ ಗ್ರಾಮದ ವೀರೂ ಎಂಬ ಬಾಲಕನು ಕಾಲುವೆಯ ಪಕ್ಕದಲ್ಲಿ ಆಟವಾಡುತ್ತಿದ್ದ. ಆಗ ಹಾರಿ ಬಂದ ಮೊಸಳೆಯೊಂದು ಐದರ ಆ ಹುಡುಗನ್ನು ಲಬಕ್ಕ ಹಿಡಿದು ನೀರಿಗೆ ಎಳೆಯಿತು. ಹುಡುಗ ಕೂಗಿಕೊಂಡಾಗ ತಾಯಿ ಮಾಯಾ ಓಡಿ ಬಂದಿದ್ದಾಳೆ. ಏಳು ಅಡಿ ಉದ್ದದ ಮೊಸಳೆಯನ್ನ ಹಿಡಿದು ಗುದ್ದಿದ ಮಹಿಳೆ ಮಾಯಾ ಅದರ

ನಟಿಗೆ ಶಾಸಕರೊಬ್ಬರಿಂದ ಕೆಟ್ಟ ಸಂದೇಶ ಮಲಯಾಳಂ ನಟಿ ರಿನಿ ಜಾರ್ಜ್ ದೂರುಕಾಂಗ್ರೆಸ್ಸನ್ನು ಗುರಿ ಮಾಡಿ ದೂರಿದ ಬಿಜೆಪಿ

ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್‍ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್‍ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ ಆನ್‍ಲೈನ್ ಇಂಟರ್‍ವ್ಯೂ ಪ್ರಕಾರ ಆ ಶಾಸಕ, ತಾರಾ ಹೋಟೆಲಿನಲ್ಲಿ ರೂಮ್ ಕಾದಿರಿಸಿ ಕಾಯುವೆ, ಬರಬೇಕು ಎಂದು ಹೇಳಿರುವುದಾಗಿಯೂ ವಿವರಿಸಲಾಗಿದೆ. ರಿನಿ ಜಾರ್ಜ್ ಆ ಶಾಸಕರ ಹೆಸರು ಇಲ್ಲವೇ ಯಾವ ಪಕ್ಷಕ್ಕೆ ಸೇರಿದವರು ಎಂದು ಹೇಳಲು