ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ಇಂದು ನೀಡುವ ಸಾಧ್ಯತೆ ಇದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ವಕ್ಫ್ ಮತ್ತು
ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ. ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು
ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ ವಿರುದ್ಧ ವಿಟ್ಲ – ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಪಂಚಾಯತ್ ವತಿಯಿಂದ
ಭಾರತೀಯ ಮಜ್ದೂರು ಸಂಘದ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಇಲ್ಲದ, ಅನಧಿಕೃತ ಫ್ಲಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅಪಘಾತ ಸಂಭವಿಸಿ ಅಮಾಯಕ ಯುವಕನೊರ್ವ ಬಲಿಯಾದ ಘಟನೆ ದುರದೃಷ್ಟಕರ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಬೆಳ್ತಂಗಡಿ ತಾಲೂಕು ಸಮಿತಿ ಹೇಳಿದೆ. ತಾಲೂಕಿನಾದ್ಯಂತ ಪ್ರಚಾರ, ಪ್ರತಿಷ್ಠೆಗೊಸ್ಕರ ಸ್ಥಳೀಯಾಡಳಿತದ ಅನುಮತಿ ಪಡೆಯದೆ, ಅನಧಿಕೃತವಾಗಿ ಪ್ಲೆಕ್ಸ್ , ಬ್ಯಾನರ್ ಅಳವಡಿಸುವ ಪ್ರಚಾರ ರಾಜಕೀಯದ
ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ ಪುನಾರಂಭಗೊಳ್ಳಲಿದೆ. ಗ್ರಾಹಕರ ಬೇಡಿಕೆಗೆ ಸ್ಪಂದಿಸಿ ಮತ್ತೆ ಒಂದು ತಿಂಗಳ ಕಾಲ ಎಲ್ಲಾ ವಯೋಮಾನದ ಜನರ ಮನಕೊಪ್ಪುವ ಬಟ್ಟೆಗಳ ಮಾರಾಟ ಇಲ್ಲಿ ನಡೆಯಲಿದೆ. ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199 ಆಗಿದ್ದು ಅತ್ಯಂತ ಉತ್ತಮ
ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ ದೇವಾಲಯ , ಅನಂತ ಶಯನ ದೇವಾಲಯ, ಮುಖ್ಯಪ್ರಾಣ ದೇವಾಲಯ, ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ , ಹೆಬ್ರಿಯ ಅನಂತ ಪದ್ಮನಾಭ ದೇವಾಲಯ , ಅಜೆಕಾರು ವಿಷ್ಣುಮೂರ್ತಿ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯಗಳು ನಡೆದು ದೇವರಿಗೆ
ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್ಗೇಟ್ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ
ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಡಬಲ್ ಇಂಜಿನ್
ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದು (ನವೆಂಬರ್ 8) ಅವರು ಕೊನೆಯುಸಿರು ಎಳೆದಿದ್ದಾರೆ. ಲೋಹಿತಾಶ್ವ ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಇನ್ಫೆಕ್ಷನ್ ಆಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನೇನು ಗುಣಮುಖರಾಗುತ್ತಾರೆ
ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ ಯುವಕ. ಅದ್ರಾಮ ಸಲಿಂಗಕಾಮಿಯಾಗಿದ್ದು, ಮಂಚಿ-ಇರಾ-ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ




























