Home Archive by category Fresh News (Page 690)

ನೀರುಮಾರ್ಗದಲ್ಲಿ  ಆಫ್ರಿಕನ್​ ಹಂದಿ ಜ್ವರ ಪತ್ತೆ : ಜನ ಭಯಭೀತರಾಗುವುದು ಬೇಡಾ : ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್

ಮಂಗಳೂರು :  ಮಂಗಳೂರು ನಗರದ ನೀರುಮಾರ್ಗದಲ್ಲಿ  ಆಫ್ರಿಕನ್​ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ. ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ

ಕಾಂತಾರ ಚಿತ್ರದ ವೇಷ ಹಾಕಿ ರೀಲ್ಸ್ : ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ

ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತ. ಎಸ್.ರೆಡ್ಡಿ. ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಂಡಿದ್ದಳು. ತುಳುನಾಡಿನ ಅತ್ಯಂತ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್‌ ಆಗುತ್ತಿದ್ದಂತೆ. ಶ್ವೇತಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಬಂದ ಶ್ವೇತ. ಎಸ್.ರೆಡ್ಡಿ

ಡಿ.1ರಿಂದ ಮಂಗಳೂರು ವಿಮಾನ ನಿಲ್ದಾಣದ ಹೆಸರು ಬದಲಾವಣೆ

ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ. ಆದರೆ, ಮಂಗಳೂರು ನಗರದಲ್ಲಿಯೂ ‘ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ

ನ 5 ರಂದು ಮುಕುಂದ್ ಎಂಜಿಎಂ ರಿಯಾಲ್ಟಿಯ ‘ಕೇದಾರ’ ಐಷಾರಾಮಿ ಅಪಾರ್ಟ್‌ಮೆಂಟ್ ಗೆ ಶಂಕುಸ್ಥಾಪನೆ KEDAR APARTMENT

ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ ನವೆಂಬರ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಕುಂದ್ ಎಂಜಿಎಂ ರಿಯಾಲ್ಟಿ ಸಂಸ್ಥೆ ಮಂಗಳೂರಿನ ಜನತೆಯ ಅವಶ್ಯಕತೆಯನ್ನು ಮನಗೊಂಡು ಆಧುನಿಕ ಸೌಲಭ್ಯಗಳನ್ನೊಳಗೊಂಡ 2BHK ಮನೆಯನ್ನು ರೂ. 5

ಹರೇಕಳ ಹಾಜಬ್ಬ ಅವರ ದಶಕದ ಕನಸು ನನಸು

ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ ಪ್ರೌಢಶಾಲೆ ವರೆಗೆ ಗಳಿಸಿದ್ದರು. ಹಾಜಬ್ಬ ಅನಕ್ಷರಸ್ಥರಾಗಿದ್ದರೂ ತನ್ನೂರಿನ ಎಲ್ಲ ಮಕ್ಕಳೂ ಅಕ್ಷರಸ್ಥರಾಗಿರಬೇಕು ಎಂಬ ಕನಸು ಕಂಡವರು. ಮಂಗಳೂರಿನ ಹಂಪನಕಟ್ಟೆ ಬಳಿ ಬುಟ್ಟಿ ಯಲ್ಲಿ ಕಿತ್ತಳೆ ಹಣ್ಣುಗಳ ಮಾರಾಟ ಮಾಡುತ್ತಿದ್ದ

ಅರಬರ ನಾಡಿನಲ್ಲಿ ಅದ್ಧೂರಿಯ ಕರ್ನಾಟಕ ರಾಜ್ಯೋತ್ಸವ

ಅಬುಧಾಬಿ : ನಾಲ್ಕು ದಶಕಗಳಿಗಿಂತಲೂ ಹೆಚ್ಚಿನ ಶ್ರೀಮಂತ ಇತಿಹಾಸ ಇರುವ ಅಬುಧಾಬಿಯ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸಂಘವು ಇದೀಗ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ರೂಪುರೇಷೆಗಳನ್ನು ಹಾಕಿಕೊಂಡಿದ್ದು ಕಾರ್ಯಕ್ರಮವು ಇದೆ ನವೆಂಬರ್ ತಿಂಗಳ 6ನೇ ತಾರೀಖಿನಂದು ಅಪರಾಹ್ನ 3:30 ಘಂಟೆಗೆ ಸರಿಯಾಗಿ ಅಬುಧಾಬಿಯ ಇಂಡಿಯನ್ ಸೋಶಿಯಲ್ ಆಂಡ್ ಕಲ್ಚರಲ್ ಸೆಂಟರ್ ನಲ್ಲಿ ಜರುಗಲಿದೆ. ಮೂರು ಬಾರಿ ಯಶಸ್ವಿಯಾಗಿ ವಿಶ್ವ ಕನ್ನಡ

ಹಾರಾಡಿ-ರೈಲ್ವೇ ನಿಲ್ದಾಣ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಪುತ್ತೂರು:ಸುಮಾರು 40 ವರ್ಷಗಳ ಜನತೆಯ ಬೇಡಿಕೆಯಾದ ನಗರದ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆಯನ್ನು ಕಾಂಕ್ರಿಟೀಕರಣ ಮಾಡುವ ಮೂಲಕ ಅಭಿವೃದ್ಧಿಪಡಿಸುವ ಕಾರ್ಯ ಪುತ್ತೂರು ನಗರಸಭೆ ವತಿಯಿಂದ ನಡೆದಿದ್ದು, ಡಬಲ್ ಇಂಜಿನ್ ಸರಕಾರ ಇಂತಹಾ ಅಭಿವೃದ್ಧಿ ಕೆಲಸವನ್ನು ಮಾಡುವ ಮೂಲಕ ದೇಶದಲ್ಲಿ ಪರಿವರ್ತನೆ ಯುಗ ಉಂಟು ಮಾಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಗರದ ಹಾರಾಡಿ-ರೈಲ್ವೇ ನಿಲ್ದಾಣ

ಕಿನ್ನಿಗೋಳಿ : ಮಹಿಳೆಗೆ ಕಾರು ಡಿಕ್ಕಿ,ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು

ಚರ್ಚ್ ಸಭಾಂಗಣ ಉದ್ಘಾಟಿಸಿದ ಭಟ್ರು !ತೊಕ್ಕೋಟ್ಟಿನಲ್ಲೊಂದು ಸೌಹಾರ್ದ ಕಾರ್ಯಕ್ರಮ

ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ ಸಾರುವ ರೀತಿಯಲ್ಲಿ ಈ ಸಮಾರಂಭ ಏರ್ಪಟ್ಟಿತ್ತು. ಹಿಂದೂ ಮುಸ್ಲಿಂ ಕ್ರೈಸ್ತ ಸಮುದಾಯದ ಬಾಂಧವರು ವೇದಿಕೆಯಲ್ಲಿ ಆಸನ ಅಲಂಕರಿಸಿದ್ದರು. ಈ ವೇದಿಕೆಯಲ್ಲಿದ್ದವರೆಲ್ಲರೂ ಗಣ್ಯರೇ. ಆ ಪೈಕಿ ಸಭಾಂಗಣವನ್ನು ಉದ್ಘಾಟಿಸಿದ ಡಾ|| ಯು.ಸಿ.

ಬಿ.ಸಿ ರೋಡ್‌ : ತುಳು ನಾಟಕೋತ್ಸವ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ಏಳು ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಲ್ಕನೇ ದಿನವಾದ ಇಂದು ಓಂ ಶ್ರೀ ಕಲಾವಿದೆರ್ ಬಿ.ಸಿ. ರೋಡ್ ಇವರಿಂದ ಅಂದ್‌oಡ ಅಂದ್ ಪನ್ಲೆ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ