Home Archive by category Fresh News (Page 693)

ನವ ಮಂಗಳೂರು ಬಂದರು- ಕರ್ನಾಟಕ ರಾಜ್ಯೋತ್ಸವ ಆಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಹಾಗು ಕೆನರಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರಘು ಇಡ್ಕಿಧು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.ಉಪಾಧ್ಯಕ್ಷರು, ಮುಖ್ಯ

ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ SDPI ವತಿಯಿಂದ ಒಲವಿನ ಕರ್ನಾಟಕ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ

ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ ಯೊಂದಿಗೆ ಒಲವಿನ ಕರ್ನಾಟಕ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವೆಂಬರ್ ಒಂದರಂದು ಬೆಳಿಗ್ಗೆ ಪಕ್ಷದ ಗ್ರಾಮ

ರಾಜ್ಯೋತ್ಸವ ಪ್ರಶಸ್ತಿ- ಹೈಕೋರ್ಟ್ ಆದೇಶ ಪರಿಗಣಿಸದ ಸರ್ಕಾರ :ಹಿರಿಯ ಸಾಹಿತಿ ಬಿ.ವಿ. ಸತ್ಯನಾರಾಯಣ ರಾವ್

ಬೆಂಗಳೂರು, ಅ, 31: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ತಾವು ರಚಿಸಿರುವ 108 ಸಾಹಿತ್ಯ ಕೃತಿಗಳನ್ನು ಮುಂದಿಟ್ಟುಕೊಂಡು ನವೆಂಬರ್ 1 ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರದ ರವೀಂದ್ರ ಕಲಾಕ್ಷೇತ್ರದ ಮುಂಭಾಗ ಪ್ರತಿಭಟನೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆ

ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್‌.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಗಳನ್ನು ಮಾಡಬೇಕು ಎಂದು ರಾಜ್ಯಾಧ್ಯಕ್ಷರು ಕಿವಿಮಾತು ಹೇಳಿದರು. ಜಿಲ್ಲಾ

ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ

5ಕಿ.ಮೀ. ವ್ಯಾಪ್ತಿಗೆ ಟೋಲ್ ಸುಂಕ ವಿಧಿಸಿದ್ದರ ವಿರುದ್ದ ಪ್ರತಿಭಟನೆ

ಮಂಜೇಶ್ವರ: ತಲಪಾಡಿ ಟೋಲ್ ಗೇಟಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ತಲಪಾಡಿ ಗ್ರಾ. ಪಂ. ವ್ಯಾಪ್ತಿಯ ನಾಗರೀಕರಿಗೆ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿರುವ ಟೋಲ್ ಅಧಿಕೃತರು ಕೇರಳದ 5 ಕಿಲೋ ಮೀಟರ್ ವ್ಯಾಪ್ತಿಗೆ ಸುಂಕವನ್ನು ವಿಧಿಸಿರುವ ತಾರತಮ್ಯದ ವಿರುದ್ಧ ನ್ಯಾಯಯುತವಾದ ಹೋರಾಟಕ್ಕೆ ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷರ ನೇತೃತ್ವದಲ್ಲಿ ಚಾಲನೆ ನೀಡಿದ್ದಾರೆ. ಕಾನೂನು ರೀತಿಯ ಹೋರಾಟಕ್ಕೆ ಚಾಲನೆಯನ್ನು ನೀಡಲಿರುವ ಹೋರಾಟ ಸಮಿತಿ ಮಂಜೇಶ್ವರದವರನ್ನು ಕಡೆಗಣಿಸಿದರೆ

ಉದ್ಯಮಿ ಜಯರಾಂ ಬನನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಪ್ರಸ್ತುತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಯರಾಂ ಬನನ್ ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜರಾಗಿದ್ದಾರೆ. ದೆಹಲಿ ಸೇರಿದಂತೆ ದೇಶದ ಉದ್ದಕ್ಕೂ ಹೋಟೆಲ್ ಉದ್ಯಮ ನಡೆಸುತ್ತಿರುವ ಕಾರ್ಕಳದ ಮಠದಬೆಟ್ಟುವಿನ ಹೊಟೇಲ್ ಉದ್ಯಮಿ ಸಮಾಜ ಸೇವಕ ಜಯರಾಂ ಬನನ್ ಅವರಿಗೆ ವಾಣಿಜ್ಯ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. 13ನೇ ವಯಸ್ಸಿನಲ್ಲಿ

ಕಾವೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ

ಅಂಬಿತ್ತಡಿ : ಶೆಡ್‍ನಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕೇಂದ್ರ

ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡಿನ ಅಂಬಿತ್ತಡಿ ಎಂಬಲ್ಲಿ ಶೆಡ್ಡ್‍ನಲ್ಲೇ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ತನಕ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿಲ್ಲ. ಶೀಘ್ರದಲ್ಲೇ ಸುಸಜ್ಜಿತವಾದ ಅಂಗನವಾಡಿ ಕೇಂದ್ರ ನಿರ್ಮಿಸಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈಗಾಗಲೇ ಪಂಚಾಯತಿನಿಂದ ಫಂಡ್ ಮಂಜೂರಾಗಿದ್ದರೂ ಪಂಚಾಯತಿನ ಸ್ಥಳ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಊರವರಿಗೆ ಅಂಗನವಾಡಿಯ ಭಾಗ್ಯ ಲಭ್ಯವಾಗಲಿಲ್ಲ.