Home Archive by category Fresh News (Page 713)

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದರು, ಅಂತೆಯೇ ಅಂಗಾಂಗಗಳನ್ನು ದಾನ ಮಾಡುವ

ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕರ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು

ಅಂತ್ಯ ಸಂಸ್ಕಾರ ಮಾಡಲು ಅಂಗೈಯಷ್ಟು ಜಾಗವಿಲ್ಲದೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಿದ ಜಾಗ ಒತ್ತುವರಿ

ಕಾಲ್ತೋಡು ಗ್ರಾಮದ ಯಡೇರಿ ಎಂಬಲ್ಲಿ ಸರ್ವೇ ನಂಬರ್ 293/* ರಲ್ಲಿ 0.50 ಎಕ್ರೆ ಸ್ಥಳವು 1998 ರಂದು ಮಾನ್ಯ ಸಹಾಯಕ ಕಮೀಷನರ್ ಆದೇಶದಂತೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಲಾಗಿದೆ. ಅದನ್ನು ಖಾಸಾಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಬಡ ಜನರ ಮೃತ ದೇಹವನ್ನು ದಫನ ಮಾಡಲು ಜಾಗವಿಲ್ಲದೆ ಪರದಾಡುವಂತಾಗಿದೆ ಎಂದು ಜನತಾ ಕಾಲೋನಿಯ ಜನರು ಅಳಲು ತೋಡಿಕೊಂಡಿದ್ದಾರೆ ಬೈಂದೂರಿನ ಕಾಲ್ತೋಡಿನ ಯಡೇರಿ ಎಂಬಲ್ಲಿಯ ಜನತಾ ಕಾಲೋನಿಯರು ಜನರು ಹಿಂದೂ ರುದ್ರಭೂಮಿ ಇಲ್ಲದೆ ತೊಂದರೆಗೆ

ಬಿ.ಸಿ. ರೋಡ್‍ನಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿತ

ಬಂಟ್ವಾಳ : ಬಿ ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಗುರುವಾರ ಮಧ್ಯಾಹ್ನ ವೇಳೆ ಹಠಾತ್ ಕುಸಿತಗೊಂಡ ಘಟನೆ ನಡೆದಿದೆ.ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ತೀರಾ

ಪುತ್ತೂರಿನ ಹೊರವಲಯದ ಪೋಳ್ಯ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ.ಆರೋಪಿಯ ಬಂಧನ.

ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ

ಉಪ್ಪಿನಂಗಡಿಯ ಪೊಲೀಸ್ ಠಾಣೆಯ ಎದುರಿನಲ್ಲೇ ಕಳ್ಳರ ಕೈಚಳಕ

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಉಪ್ಪಿನಂಗಡಿಯ ಲಕ್ಷ್ಮೀ ಸ್ಟೋರ್ ನ ಷಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 40 ಸಾವಿರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ದೋಚಿದ್ದಾರೆ. ಬಸ್ ನಿಲ್ದಾಣ ಬಳಿಯ ಸೆಲ್ ಸೈಟ್ ಮೊಬೈಲ್ ಶಾಪ್ ಗೆ ನುಗ್ಗಿದ ಕಳ್ಳರು 5 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಬ್ಯಾಂಕ್ ರಸ್ತೆಯಲ್ಲಿರುವ ಕಾಮತ್ ಕೋಲ್ಡ್ ಹೌಸ್ ಗೆ

ಅ.16ರಂದು ರಾಜ್ಯ ಮಟ್ಟದ ಜೈನ್ ಮಿಲನ್ ವಲಯ ಸಮ್ಮೇಳನ

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ವಲಯ-8 ಆಯೋಜಿಸಿರುವ ಬದುಕು ಹಾಗೂ ಬದುಕಲು ಬಿಡು ಎಂಬ ಘೋಷಣೆಯೊಂದಿಗೆ ರಾಜ್ಯ ಮಟ್ಟದ ಜೈನ್ ಮಿಲನ್ ವಲಯ, ಸಮ್ಮೇಳನವು ಅಕ್ಟೋಬರ್ 16 ರವಿವಾರದಂದು ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದೆ. ಎಂದು ವಲಯಾಧ್ಯಕ್ಷ ವೀರ ಪುಷ್ಪರಾಜ್ ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 9:15ಕ್ಕೆ ಸಾಂಪ್ರದಾಯಿಕ ಮೆರವಣಿಗೆಯೊಂದಿಗೆ ಆರಂಭವಾಗುವ ಈ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|

ಕೊಟ್ಟ ಮಾತಿನಂತೆ ಅಶಕ್ತರಿಗೆ ನೆರವಾದ ದೇವದಾಸ್.!

ಬಂಟ್ವಾಳ: ಕಿಡ್ನಿ ಸಮಸ್ಯೆಯಲ್ಲಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20 ಸಾವಿರ ರೂ.ಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ಸರಪಾಡಿಯ ದೇವದಾಸ್ ನಾಯ್ಕ್ ಅವರಿಗೆ ಸಂಗ್ರಹಗೊಂಡದ್ದು ಬರೋಬ್ಬರಿ 57 ಸಾವಿರ ರೂ.ಅ.12ರಂದು ಅವರು ಮೊತ್ತವನ್ನು ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಸಂಬಂಧಪಟ್ಟ ಕುಟುಂಬಗಳಿಗೆ ಹಸ್ತಾಂತರಿಸಿದರು. ಕ್ಷೇತ್ರದ ಪ್ರಧಾನ

ವಿಟ್ಲದ ದೀಪಕ್ ವಾಚ್‌ವರ್ಕ್ಸ್ ಶಟರ್‌ನಲ್ಲಿ Name jihad ಬರಹ : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು Name jihad ಬರಹ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್‌ನಲ್ಲಿ ನಡೆದಿದೆ. ಅ.11 ರಂದು ರಾತ್ರಿ ವೇಳೆ ಘಟನೆ ನಡೆದಿದ್ದು, ಅ12 ರಂದು ಮುಂಜಾನೆ ಅಂಗಡಿ ಮಾಲೀಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಈ ಬಗ್ಗೆ ಅಂಗಡಿ ಮಾಲೀಕ ಅಬ್ದುಲ್ ವಿಟ್ಲ ಠಾಣೆಗೆ ದೂರು ನೀಡಿದ್ದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಇಬ್ಬರು ಬರುತ್ತಿರುವುದು

ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿ

ಉಳ್ಳಾಲ: ನೂತನವಾಗಿ ನಿರ್ಮಾಣಗೊಂಡ ಉಳ್ಳಾಲ ತಾಲೂಕು ಕಚೇರಿಯ ವಿವಿಧ ಇಲಾಖೆಗಳಿಗೆ ಸರಕಾರಿ ಕಟ್ಟಡಗಳನ್ನು ಒದಗಿಸುವ ಕುರಿತಾಗಿ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ನವೆಂಬರ್ ಮೊದಲ ವಾರದಲ್ಲಿ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ತಾಲೂಕಿನಾದ್ಯಂತ ಇರುವ ಸಮಸ್ಯೆಗಳ ಚರ್ಚೆ ಹಾಗೂ ಅದರ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ. ಅವರು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿಗಳ ಯೋಜನೆಯಲ್ಲಿ ಒಂದಾದ ಜಿಲ್ಲಾಧಿಕಾರಿಗಳ