Home Archive by category Fresh News (Page 720)

ನಿಡ್ಡೋಡಿಯಲ್ಲಿ ಮತ್ತೆ ಅನಧಿಕೃತ ಸರ್ವೇಗೆ ಯತ್ನ- ಹಿಮ್ಮೆಟ್ಟಿಸಿದ ಗ್ರಾಮಸ್ಥರು

ಮೂಡುಬಿದಿರೆ : ಪಡುಬಿದ್ರಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್ ಪ್ರಸರಣಕ್ಕಾಗಿ ಸರ್ವೇ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಅನಧಿಕೃತವಾಗಿ ನಿಡ್ಡೋಡಿ ಪರಿಸರದಲ್ಲಿ ಸರ್ವೇ ಕಾರ್ಯಕ್ಕಾಗಿ ಆಗಮಿಸಿದ ಅನಧಿಕೃತ ವ್ಯಕ್ತಿಗಳನ್ನು ಮಾತೃಭೂಮಿ ಸಂರಕ್ಷಣಾ ಸಮಿತಿ ಸೇರಿದಂತೆ ಗ್ರಾಮಸ್ಥರು ಹಿಮ್ಮೆಟ್ಟಿಸಿದ ಘಟನೆ ಶುಕ್ರವಾರ ನಡೆದಿದೆ.ಜಿಲ್ಲಾಡಳಿತವಾಗಲೀ

ತೊಕ್ಕೊಟ್ಟು : ಒಂದು ದಿನದ ಗಂಡುಮಗು ರಸ್ತೆ ಬದಿಯಲ್ಲಿ ಪತ್ತೆ

ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ

ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭ

ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್‍ಗಳು ಸಿಮ್ ಕಾರ್ಡ್‍ಗಳು, ಗ್ರಾಹಕರಿಗೆ ಪಾನ್ ಕಾರ್ಡ್, ಲ್ಯಾಂಡ್ ಲಿಂಕ್ಸ್, ವಿವಿಧ ಕಂಪನಿಯ ಮೋಟಾರ್ ಸೈಕಲ್‍ಗಳು, ಮಿನಿ ಎಟಿಎಂ ಇನ್ನಿತರ ಎಲ್ಲಾ ಗ್ರಾಹಕರಿಗೆ ಬೇಕಾಗುವ ಸೌಲಭ್ಯಗಳು ಸಿಗುತ್ತದೆ

ಗೇಟು ಮೈಮೇಲೆ ಬಿದ್ದು ಬಾಲಕ ಸಾವು

ಮಂಗಳೂರು ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ ಮಗು ಮೃತ ದುರ್ದೈವಿ. ಹಮ್ದಾನ್ ನಿನ್ನೆ ಆಟವಾಡುವಾಗ ಮೈಮೇಲೆ ಗೇಟು ಬಿದ್ದಿತ್ತು. ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು :ಎನ್. ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

“ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಂದ ಕೇವಲ ಕೆಲಸ ಮಾಡಿಸಲು ಇರುವುದಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸಾಮಾಜಿಕವಾಗಿ ತಾವು ಹೇಗೆ ಬದುಕಬೇಕು, ಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಮೆಟ್ಟಿ ನಿಲ್ಲುವುದು, ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು, ಸಹಬಾಳ್ವೆಯ ಮಹತ್ವ ಮೊದಲಾದವುಗಳನ್ನು ತಿಳಿಸಿಕೊಡುತ್ತದೆ. ಒಟ್ಟಿನಲ್ಲಿ ವಿದ್ಯಾರ್ಥಿಯ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಗೆ ಎನ್‍ಎಸ್‍ಎಸ್ ದಾರಿದೀಪವಾಗಬಲ್ಲ ಜೀವನ

ಬೈಂದೂರು ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಶರನ್ನವರಾತ್ರಿ ಉತ್ಸವ

ಬೈಂದೂರು ತಾಲೂಕಿನ ಸುಪ್ರಸಿದ್ಧ ದೇವಸ್ಥಾನ ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಇಂದು ವಿಜಯ ದಶಮಿ ಪ್ರಯುಕ್ತ ಮಂಜುನಾಥ್ ಅಡಿಗ ಬಡಾಕೆರೆ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನದ ಮೂಲಕ ಇಂದು ದೇವಿಯ ಸನ್ನಿಧಾನದಲ್ಲಿ ದುರ್ಗಾ ಹೋಮ ವಿಶೇಷ ಮಹಾಪೂಜೆ ಅನ್ನದಾನ ಸೇವೆ ಸಂಪನ್ನಗೊಂಡಿದೆ. ಸಂಜೆ 6:00 ರಿಂದ 8.30 ರವರೆಗೆ ಶ್ರೀ ರಾಮ ಭಜನಾ ಮಂಡಳಿ ಬಡಾಕೆರೆ ಇವರಿಂದ ಭಜನಾ ಕಾರ್ಯಕ್ರಮವು ಅದ್ದೂರಿನಿಂದ ನಡೆದಿದೆ. ಈ ಸಂದರ್ಭದಲ್ಲಿ ಸಂತೋಷ್ ಮೊಗವೀರ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪದಲ್ಲಿ ಪ್ರತೀ ವರ್ಷದಂತೆ ಶಾರದಾ ಹುಲಿವೇಷಧಾರಿಗಳಿಂದ ಹುಲಿವೇಷ ಕುಣಿತ ನಡೆಯಿತು. ರಾತ್ರಿ ಮಹಾಮಂಗಳಾರತಿ ಆಗಿ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ನಡೆಯಿತು. ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆಯೂ

ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ನಿಧನ

ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಜ್ಞ ವೈದ್ಯರಾಗಿ ಜಿಲ್ಲೆಯಲ್ಲಿಯೇ ಪ್ರಸಿದ್ಧ ರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಜೀವನದ ಹಂಗು ತೊರೆದು ಅನೇಕ ಮಂದಿಗೆ ಚಿಕಿತ್ಸೆ ನೀಡಿ ಮಾದರಿಯಾಗಿದ್ದರು. ಅವರು ಸುರತ್ಕಲ್‍ನಲ್ಲಿ ತನ್ನ ತಾಯಿಯ ಹೆಸರಿನಲ್ಲಿ ಆರಂಭಿಸಿದ್ದ ಸುಸಜ್ಜಿತ ಪುಷ್ಪಾ ಕ್ಲಿನಿಕ್ ಮತ್ತು ಡಯಾಗ್ನೋಸಿಸ್ ಸೆಂಟರ್ ಆರಂಭಿಸಿ ಸುಮಾರು 5 ದಶಕಗಳಿಂದ ಅದನ್ನು

ಪಿಲಿಕುಳ‌ : ಇರುವೆಗಳಿಂದ ಹಾನಿಗೊಳಗಾಗಿದ್ದ ಹಾವು ಸುರಕ್ಷಿತ

ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ ನಿರ್ದೇಶಕರೇ ಸ್ಪಷ್ಟನೆ ನೀಡಿದ್ದು, ‘ಇರುವೆಯ ಕಿರುಕುಳಕ್ಕೊಳಗಾಗಿದ್ದ ಹಾವು ಸುರಕ್ಷಿತವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಪಿಲಿಕುಳ‌ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಮಾತನಾಡಿ ವಿಡಿಯೋ ವೈರಲ್ ಆಗಿರುವ ಬಗ್ಗೆ

ಉತ್ತರಕಾಶಿ : ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತ

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು