ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ
ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ
ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರನ್ನು ಅದಮಾರಿನ ಕೆಮುಂಡೇಲು ನಿವಾಸಿ ಡ್ಯಾನಿಶ್ ಡಿಸೋಜ (50) ಎಂದು ಗುರುತಿಸಲಾಗಿದೆ. ಇವರು ಅದಮಾರು ಶಿಕ್ಷಣ ಸಂಸ್ಥೆಯ ವಾಹನದ ಚಾಲಕನಾಗಿದ್ದು, ಬೆಳಿಗ್ಗೆ ಪಡುಬಿದ್ರಿಗೆ ದಿನಬಳಕೆ ಸಾಮಗ್ರಿ
ದ.ಕ. ಜಿಲ್ಲಾಡಳಿತ, ಇಂಡಿಯನ್ ರೆಡ್ಕ್ರಾಸ್ ದ.ಕ. ಜಿಲ್ಲಾ ಘಟಕ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ವಾಹನದ ಮೂಲಕ ಅಶಕ್ತರಿಗೆ ಲಸಿಕೆ ನೀಡುವ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದ.ಕ.
College of Aviation Studies, Srinivas University, Pandeshwara Mangaluru will be Organising Nrithyothsava 2021 for UG students (any stream) On June 21st 2021 NRITHYOTHSAVA 2021 is a National Level Classical Dance Competition for students those who are currently pursuing UG (any stream).The competition will be conducted online via zoom. Students can perform Classical and
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್
ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್ನಲ್ಲಿ ಕಾರ್ಕಳ ರಸ್ತೆಗೆ ತಿರುಗುತ್ತಿದ್ದ ವೇಳೆ, ಹಿಂದಿನಿಂದ ಇಂಧನ ಏರಿಕೊಂಡು ಬಂದ ಟ್ಯಾಂಕರ್ ಚಾಲಕ, ಟ್ಯಾಂಕರನ್ನು
ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಕೆ. ಆರ್. ಜಯಾನಂದ ನೆನಪಿನ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು
ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಆ ಬಳಿಕ ಮಣಿಪಾಲದ ಶ್ವಾನ ಪುರ್ವಸತಿ ಕೇಂದ್ರದಲ್ಲಿ ಆಶ್ರಯ ಒದಗಿಸಿದರು. ಬಬಿತಾ ಮಧ್ವರಾಜ್
ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ