Home Archive by category Fresh News (Page 768)

ಗೃಹಿಣಿಯ ಚಿನ್ನಾಭರಣ ಎಗರಿಸಿದ ಪ್ರಕರಣ ಆರೋಪಿ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿ

ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್‍ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ ಓರ್ವ ,ಮೃತ್ಯು, ಇನ್ನೋರ್ವನಿಗೆ ಗಾಯ

ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೊರಜಿಲ್ಲೆಯ ಕಾರ್ಮಿಕರಾಗಿದ್ದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ

ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗುವಿರಾ…… ?

ಸಾನ್ವಿ ನಾಯ್ಕ್ ಎನ್ನುವ ಹತ್ತು ವರುಷದ ಪುಟ್ಟ ಹುಡುಗಿ.ಈಗಷ್ಟೇ ಮೊಗ್ಗು ಹೂ ವಾಗಿ ಅರಳಿ ಎಲ್ಲಾ ಮಕ್ಕಳಂತೆ ಆಟವಾಡುತ್ತಾ ತನ್ನದೇ ಲೋಕದಲ್ಲಿ  ಸಂಭ್ರಮಿಸಬೇಕಾದ  ಪುಟ್ಟ  ಹುಡುಗಿ . ನಮ್ಮ ನಿಮ್ಮಂತೆ  ಭವಿಷ್ಯದ ಕನಸುಗಳನ್ನು  ಕಾಣುತ್ತಾ ನಲಿದಾಡುತ್ತಿದ್ದ ಸಾನ್ವಿ   ಮೇಲೆ  ವಿಧಿಯ ಕ್ರೂರ ದೃಷ್ಟಿ  ಬಿದ್ದಿದೆ . ಮಗಳ‌ ಭವಿಷ್ಯದ ಬಗ್ಗೆ  ನೂರಾರು  ಕನಸುಗಳನ್ನು ಹೊಂದಿದ್ದ   ಹೆತ್ತವರು

ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಗೆಳೆಯನ ಸಾವಿಗೆ ನ್ಯಾಯ ಸಿಗುವಂತೆ ಪ್ರತಿಭಟನೆ

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ

ಕುಂದಾಪುರ: ಲಕ್ಷಾಂತರ ರೂ. ಮೌಲ್ಯದ ಚಿನ್ನ ಕದ್ದ ಆರೋಪಿ ಅಂದರ್

ಕುಂದಾಪುರ: ಕಟುಂಬಿಕರೆಲ್ಲರೂ ತೀರ್ಥ ಯಾತ್ರೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬದಿಯ ಬಾಗಿಲು ಒಡೆದು ಚಿನ್ನಾಭರಣ ಹಾಗೂ ನಗದು ಕಳವುಗೈದು ಪರಾರಿಯಾದ ಕಳ್ಳನನ್ನು ಸೆರೆ ಹಿಡಿಯುವಲ್ಲಿ ಕುಂದಾಪುರ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮರವಂತೆ ನಿವಾಸಿ, ಪ್ರಸ್ತುತ ಕುಂಭಾಶಿ ವಿನಾಯಕ ನಗರಲ್ಲಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. 8 ಗ್ರಾಂ ತೂಕದ ಚಿನ್ನದ ಬ್ರಾಸ್ಲೈಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ, 3 ಗ್ರಾಂ

”ಹರ್ ಘರ್ ತಿರಂಗಾ” ಅಭಿಯಾನ: ಉಡುಪಿ ಸಣ್ಣ ಕೈಗಾರಿಕಾ ಸಂಘದಿಂದ ರಾಷ್ಟ್ರಧ್ವಜ ಹಸ್ತಾಂತರ

ಅಜಾದಿ ಕೀ ಅಮೃತ್ ಮಹೋತ್ಸವ್” ಆಚರಿಸುತ್ತಿರುವ ಸಂದರ್ಭದಲ್ಲಿ ದಿನಾಂಕ: 13-08-2022 ರಿಂದ 15-08-2022 ರವರೆಗೆ ದೇಶದಲ್ಲಿ ಹಮ್ಮಿಕೊಂಡಿರುವ ”ಹರ್ ಘರ್ ತಿರಂಗಾ” ಅಭಿಯಾನದಡಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಮಣಿಪಾಲ, ಉಡುಪಿಯ ವತಿಯಿಂದ 13000 ರಾಷ್ಟ್ರ ಧ್ವಜಗಳನ್ನು ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ವೀಣಾ ಬಿ.ಎನ್ ಅವರಿಗೆ ಹಸ್ತಾಂತರಿಸಿದರು.ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾದ ಶ್ರೀ ಕೆ. ಪ್ರಶಾಂತ್

ಪ್ರವೀಣ್ ನೆಟ್ಟಾರು ಹತ್ಯೆ ಮೂವರು ಆರೋಪಿಗಳ ಬಂಧನ

ಕೇರಳ ಗಡಿಭಾಗ ತಲಪಾಡಿಯ ಚೆಕ್‍ಪೋಸ್ಟ್ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಲಾಯಿತು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರ ನೀಡಿದರು. ಬಂಧಿತರನ್ನು ಸುಳ್ಯದ ಶಿಹಾಬುದ್ದೀನ್ (33), ರಿಯಾಜ್ ಅಂಕತ್ತಡ್ಕ (27), ಬಶೀರ್ ಎಲಿಮಲೆ (28) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಶಿಹಾಬ್ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಪೂರೈಕೆ ಮಾಡುವ ವೃತ್ತಿಯಲ್ಲಿದ್ದ. ರಿಯಾಜ್ ಎಂಬಾತ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಚಿಕನ್ ಸಪ್ಲೈ ಕೆಲಸ ಮಾಡುತ್ತಿದ್ದ, ಇನ್ನೋರ್ವ ಬಂಧಿತ

ಕಾಲುಸಂಕದಿಂದ ಬಿದ್ದ ಬಾಲಕಿಯ ಮೃತದೇಹ ಪತ್ತೆ

ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಶಾಲೆಯಿಂದ ಮನೆಗೆ ವಾಪಾಸಾಗುವ ವೇಳೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯತಪ್ಪಿ ಹರಿಯುವ ನದಿಗೆ ಬಿದ್ದು ನೀರುಪಾಲಾದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ ಪ್ರದೀಪ್ ಪೂಜಾರಿಯವರ ಪುತ್ರಿ, 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಕೊನೆಗೂ 48 ಗಂಟೆಯ ಸತತ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು.

ಸ್ಕೂಟರ್‍ಗೆ ಟ್ಯಾಂಕರ್ ಢಿಕ್ಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಕಾಪು ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಜಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಮೇಲೆ ನಡೆದಿದೆ. ಸ್ಕೂಟರ್ ಸವಾರ ಮಲ್ಲಾರು ಕೋಟೆ ರೋಡ್ ನಿವಾಸಿ ಜಾಫರ್ ಎಂಬವರ ಪುತ್ರ ಕಟಪಾಡಿ ಚಪ್ಪಲಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ಅಲ್ಪಾಜ್ (17). ಈತ ತನ್ನ ಸಹಪಾಠಿಯೊಂದಿಗೆ ಉಡುಪಿ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ವೇಳೆ ಹಿಂಬದಿ ಸವಾರ ಸ್ಕೂಟರಿಂದ

ರಕ್ಷಾ ಬಂಧನ ಹಬ್ಬದ ಹಿಂದಿರುವ ಪೌರಾಣಿಕ ಕಥೆಯನ್ನು ಬಲ್ಲಿರಾ?

ಸಹೋದರ ಹಾಗೂ ಸಹೋದರಿಯ ನಡುವಿನ ಬಾಂಧವ್ಯ ಅತ್ಯಂತ ಅಮೂಲ್ಯವಾದದ್ದು. ಹಿಂದೂ ಧರ್ಮದಲ್ಲಿಯೂ ಈ ಸಂಬಂಧಕ್ಕೆಂದೇ ವಿಶೇಷ ಸ್ಥಾನಮಾನಗಳನ್ನು ನೀಡಲಾಗಿದೆ. ಪ್ರತಿ ವರ್ಷ ಹಿಂದೂ ಜನತೆ ಅತ್ಯಂತ ಉತ್ಸಾಹದಿಂದ ರಕ್ಷಾ ಬಂಧನವನ್ನು ಆಚರಿಸುತ್ತಾರೆ.ಸಹೋದರಿಯರು ತಮ್ಮ ಸಹೋದರನ ಕೈಗೆ ರಾಖಿಯನ್ನು ಕಟ್ಟುವ ಮೂಲಕ ಆತನ ಆರೋಗ್ಯ ಹಾಗೂ ಆಯಸ್ಸಿಗಾಗಿ ಪ್ರಾರ್ಥಿಸುತ್ತಾರೆ. ಇದಕ್ಕೆ ಪ್ರತಿಯಾಗಿ ಸಹೋದರರು ಜೀವಮಾನವಿಡೀ ಸಹೋದರಿಗೆ ರಕ್ಷಣೆಯಾಗಿ ನಿಲ್ಲುವ ಪ್ರತಿಜ್ಞೆಯನ್ನು ಮಾಡುತ್ತಾರೆ.