Home Archive by category Fresh News (Page 774)

ಮಂಗಳೂರು: ದ.ಕ. ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಆದೇಶದಲ್ಲಿ ಸಡಿಲಿಕೆ

ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ

ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾಪುವಿನ ಉದ್ಯಾವರದಲ್ಲಿ ತೆರೆದ ಬಾವಿಗೆ ಬಿದ್ದ ದನವನ್ನು ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ಈ ದನ ಬಿದ್ದಿತ್ತು.ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಉಪಾಯದಿಂದ ದನವನ್ನು ಮೇಲೆ ಹಾಕುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ದನ ಆರೋಗ್ಯವಾಗಿದ್ದು ಆರೈಕೆ

ಮಂಗಳೂರು : ದ್ವಿಚಕ್ರ ವಾಹನ ಪುರುಷ ಹಿಂಬದಿ ಸವಾರಿ ನಿಷೇಧ

ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಕಮಿಷನರ್

ಕೊಯನಾಡು ಬಳಿಯ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಬಿರುಕು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಪರಿಶೀಲನೆ

ಮೂಡುಬಿದರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ

ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ. ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ

ಮೂಡುಬಿದರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ

ಬೆಳಪು : ಸಾವಿನಲ್ಲೂ ಒಂದಾದ ದಂಪತಿ

ಮದುವೆಯಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಸಿಹಿ ಕಹಿ, ನೋವು ನಲಿವು ಸವಾಲುಗಳನ್ನು ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕಾಪುವಿನ ಬೆಳಪುವಿನಲ್ಲಿ ನಡೆದಿದೆ. ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಒಂದಾದ ದಂಪತಿ.ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತಪಟ್ಟಿದ್ದು ಮಕ್ಕಳು

ಕಾರ್ಕಳದ ಭಾರಿ ಮಳೆ : ತುಂಬಿ ಹರಿದ ಸುವರ್ಣ ನದಿ

ಕಾರ್ಕಳ: ಪಶ್ಚಿಮ ಘಟ್ಟ ಪ್ರದೇಶ ಕುದುರೆ ಮುಖ ಅಭಯಾರಣ್ಯ ವ್ಯಾಪ್ತಿಯ ನಾರಾವಿ ಭಾಗದಲ್ಲಿ ನಿನ್ನೆ ಸಂಜೆ ವೇಳೆಗೆ ಭಾರಿ ಸ್ಪೋಟದ ಸದ್ದು ಕೇಳಿ ಬಂದಿದ್ದು, ಸತತವಾಗಿ ಮಳೆ ಸುರಿದಿದೆ. ಇದರ ಜೊತೆ ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತಿತ್ತು ಎನ್ನಲಾಗಿದೆ.ಸ್ಥಳೀಯರು ಹೇಳುವಂತೆ ಜಲಸ್ಪೋಟ ವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಕುದುರೆಮುಖ ಅಭಯಾರಣ್ಯ ವ್ಯಾಪ್ತಿ ಯಲ್ಲಿ ನದಿಯಲ್ಲಿ ಏಕಾಏಕಿ ಭಾರಿ ಕೆಸರು ನೀರಿನಿಂದ ನೀರಿನ ಹರಿವು ಉಂಟಾದ

 ಕುಲಶೇಖರದ:   ಶ್ರೀ ವೀರನಾರಾಯಣ  ದೇವಸ್ಥಾನದಲ್ಲಿ ಜೀರ್ಣೋದ್ಧಾರ  ಪ್ರಯುಕ್ತಉತ್ತರಾರೋಹಣ ಪೂಜೆ

ಮಂಗಳೂರು: ಕುಲಶೇಖರದ ಪರಿಸರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನದ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರದ ಕಾರ್ಯದ ಪ್ರಯುಕ್ತ ಇಂದು ಉತ್ತರಾರೋಹಣ ಕಾರ್ಯಕ್ರಮವು ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವಸ್ಥಾನದ ತಂತ್ರಿಗಳಾದ ವಾಮಂಜೂರು ಅನಂತ ಉಪಧ್ಯಾಯ ಅವರ ಮಾರ್ಗದರ್ಶನದಲ್ಲಿ  ಪ್ರಧಾನ ಅರ್ಚಕ ಜನಾರ್ಧನ್ ಭಟ್ ಅವರ ಪೌರೋಹಿತ್ಯದಲ್ಲಿ ದಾರು ಶಿಲ್ಪಿ ಸುಂದರ್ ಆಚಾರ್ಯ ಕೋಟೆಕಾರು ಅವರು ಗರ್ಭಗುಡಿಯ ಮೇಲ್ಚಾವಡಿಯ ಮಾಡಿನ ಕೆಲಸ