Home Archive by category Fresh News (Page 798)

ಬಜ್ಪೆಯ ಅದ್ಯಪಾಡಿಯಲ್ಲಿ ಗುಡ್ಡ ಕುಸಿತ , ರಸ್ತೆ ಕುಸಿತದಿಂದ ಆದ್ಯಪಾಡಿ-ಕೈಕಂಬ ಸಂಪರ್ಕ ಕಡಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ ಇದು ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಸ್ಪಷ್ಟನೆ

ಜುಲೈ 9ರಂದು ಪಡುಬಿದ್ರಿ ಸೊಸೈಟಿಯ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿಯಲ್ಲಿ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನಾ ಸಮಾರಂಭ ಹಾಗೂ ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭವು ಜು. 9 ರಂದು ನಡೆಯಲಿದೆ.ಗ್ರಾಹಕರಿಗೆ ಹವಾನಿಯಂತ್ರಿತ ಶಾಖೆಯೊಂದಿಗೆ ಸೊಸೈಟಿಯಲ್ಲಿ ದೊರಕುತ್ತಿರುವ ವಿವಿಧ ಸೇವೆಗಳನ್ನು ಆಧುನೀಕರಣ ಗೊಳಿಸುವ ಸಲುವಾಗಿ ಪಡುಬಿದ್ರಿ ಸೊಸೈಟಿಯ ಹೃದಯ ಶಾಖೆಯಾದÀ ಸಿಟಿ ಶಾಖೆಯನ್ನು ಸಂಪೂರ್ಣ ಹವಾನಿಯಂತ್ರಿತ ಶಾಖೆಯನ್ನಾಗಿ ನವೀಕೃತ ಗೊಳಿಸಿ ಇದರೊಂದಿಗೆ ಕೃಷಿ ಸಲಕರಣೆ ಮಾರಾಟ ವಿಭಾಗದ ಉದ್ಘಾಟನೆಯನ್ನು

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ, ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

ಉಡುಪಿ: ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ,ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. 27 ವರ್ಷದ ಅಂಕೋಲ ಮೂಲದ ಸುನೀತಾ ಎನ್ನುವ ಮಹಿಳೆಗೆ ಸಿಸೇರಿಯನ್ ಹೆರಿಗೆ ಮಾಡಿಸಲಾಗಿದ್ದು ತಾಯಿ ಮಕ್ಕಳು ಅರೋಗ್ಯವಂತರಾಗಿದ್ದಾರೆ.ಮಹಿಳೆಗೆ ಇದು ಪ್ರಥಮ ಹೆರಿಗೆಯಾಗಿದ್ದು,ತ್ರಿವಳಿ ಮಕ್ಕಳನ್ನು ಕಂಡು ಸುನೀತಾ ದಂಪತಿಗಳು ಸಂಭ್ರಮಿಸಿದ್ದಾರೆ. ಸರಕಾರಿ ಮಹಿಳಾ ಮತ್ತು ಮಕ್ಕಳ ಅಸ್ಪತ್ರೆಯ ಡಾ.ಕವಿಶಾಭಟ್

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6

ಜೈನ ಮನೆತನದ ವಾರಸುದಾರ ರಾಹುಲ್ ಬಲ್ಲಾಳ್ ನಿಧನ

ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್ ಕಾನೂನು ಪಧವೀಧರರು. ತನ್ನ ಕುಟುಂಬದ ಕೃಷಿ ಹಾಗೂ ಹೋಟೇಲ್ ಉದ್ಯಮವನ್ನು ಮುನ್ನಡೆಸಲು ರಾಹುಲ್ ಅವರು

ಬಂಟ್ವಾಳ: ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೃತಪಟ್ಟವರ ಸಂಖ್ಯೆ 3ಕ್ಕೇರಿಕೆ

ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ

ಕಾಡಮಲ್ಲಿಗೆ ಖ್ಯಾತಿಯ : ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ

ಸುಳ್ಯ ತಾಲೂಕಿನ ನಾಗೇಶ್ ಬೆಳ್ಳಾರೆ ಇವರಿಗೆ ಯುವ ರತ್ನ ಅಪ್ಪು ಪ್ರಶಸ್ತಿ

ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ವ್ಯಕ್ತಿಗಳು. ಡಾ. ಆಂಜನಪ್ಪ MBBS_MS, General surgery gastroenterologist, ಶಶಿಧರ್ ಕೋಟೆ ಚಲನಚಿತ್ರ ನಟರು ಮತ್ತು

ಬೈಂದೂರು: ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರ ಆರೋಪಿಗಳ ಬಂಧನ

ಬೈಂದೂರು: ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರಿಗೆ ಬಂದ ಖಚಿತ ಮಾಹಿತಿಯಂತೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಉಪಸ್ಥಿತಿಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಬೈಂದೂರು ರಾಹುತನಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಭಟ್ಕಳ ನಿವಾಸಿ ಅಬ್ದುಲ್ ರೆಹಮಾನ್ (31), ಶಿರ್ವ ನಿವಾಸಿ ಅಬ್ದುಲ್ ಸಮದ್ (30) ಬಂಧಿತರಾಗಿದ್ದು, ಇವರಿಬ್ಬರು ಮಾದಕ ವಸ್ತುವನ್ನು ಸಲೀಮ್ ಮಂಚಿ ಎಂಬಾತನಿಂದ ಖರೀದಿಸಿ

ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತ : ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿ ಸಂಭವಿಸಿದೆ. ಇನ್ನು ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಅಪಾಯದಂಚಿನಲ್ಲಿದೆ. ಸ್ಥಳಕ್ಕೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.