Home Archive by category Fresh News (Page 8)

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್

ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ

ಪಾರ್ಕಿನ್‍ಸನ್ಸ್ ಎಂಬ ನಡುಕದ ಖಾಯಿಲೆ

ಪಾರ್ಕಿನ್‍ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್‍ಸನ್ಸ್” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು, ಚಲನವಲನೆಗೆ ತೊಂದರೆ ಮತ್ತು ಸಂವಹನದ ತೊಂದರೆ ಉಂಟಾಗಬಹುದು. ಪುರುಷರಲ್ಲಿ ಜಾಸಿಕಂಡು ಬರುವ ಈ ರೋಗ,

ಗೋಳಿತ್ತೊಟ್ಟು: ಕಾಡಾನೆ ದಾಳಿ-ಕೃಷಿ ನಾಶ

ನೆಲ್ಯಾಡಿ: ಗೋಳಿತ್ತೊಟ್ಟು ಪರಿಸರದಲ್ಲಿ ಕಳೆದ 1 ವಾರದಿಂದ ಕಾಡಾನೆಯೊಂದು ಕೃಷಿ ತೋಟಗಳಿಗೆ ದಾಳಿ ನಡೆಸಿ ಅಪಾರ ಕೃಷಿ ನಾಶಗೊಳಿಸಿರುವುದಾಗಿ ವರದಿಯಾಗಿದೆ. ಗೋಳಿತ್ತೊಟ್ಟು ಗ್ರಾಮದ ಚೆನ್ನಪ್ಪ ಗೌಡ ಕುದ್ಕೋಳಿ, ಚಿದಾನಂದ ಗೌಡ ಅನಿಲ, ಪಿಲಿಫ್ ಬಳಕ ಹಾಗೂ ಪರಿಸರದ ನಿವಾಸಿಗಳ ತೋಟಗಳಿಗೆ ಕಾಡಾನೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕೃಷಿ ನಾಶಗೊಳಿಸಿದೆ. ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಎ.11ರಂದು ಪರಿಸರಕ್ಕೆ ಭೇಟಿ ನೀಡಿದ್ದು ಅರಣ್ಯದಂಚಿನಲ್ಲಿ

ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೋಪಾಲ ಪೂಜಾರಿ ಅವರ ಮಾತಿಗೆ ತಿರುಗೇಟು

ಮೂಡುಬಿದಿರೆ: ವಾಲ್ಪಾಡಿಯಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ,‌ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್ ನಲ್ಲಿ ದುಡಿಯುತ್ತಿರುವ ಕೂಲಿಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.‌ವೆಂಕಟಾಚಲಪತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮತದಾನ‌ದ ಮಹತ್ವವನ್ನು ತಿಳಿಸಿ

ಪುತ್ತೂರು:ಪದ್ಮರಾಜ್ ಪರಿವಾರ ವಾಟ್ಸ್‌ಆಪ್ ಗ್ರೂಪ್ ವಿವಾದ: ನಾರಾಯಣ್ ಪ್ರಲಾಪಕ್ಕೆ ಅಮಳ ರಾಮಚಂದ್ರ ಕಿಡಿ

ಪುತ್ತೂರು: ಕೋತಿ ಬೆಣ್ಣೆ ತಿಂದು ಬೆಕ್ಕಿನ ಮುಖಕ್ಕೆ ಒರೆಸಿದ ಹಾಗೆ ತಮ್ಮ ಮುಖ ಉಳಿಸಿಕೊಳ್ಳಲು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. “ಪದ್ಮರಾಜ್ ಪರಿವಾರ” ವಾಟ್ಸ್‌ಆಪ್ ಗ್ರೂಪ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಲ ರಾಮಚಂದ್ರ ಮಾತನಾಡಿ ನಾನು

ಜನಪರ ಜ್ಯೋತಿ ಫುಲೆ ದಂಪತಿ

ಬಿಎಪಿಎಸ್‍ಎ ಇಲ್ಲವೇ ಬಾಪ್ಸಾ ಅರ್ಥಾತ್ ಬಿರ್ಸ ಅಂಬೇಡ್ಕರ್ ಫುಲೆ ಸ್ಟುಡೆಂಟ್ಸ್ ಎಸೋಸಿಯೇಶನ್ ಎಂಬುದು ದಿಲ್ಲಿಯ ಜೆಎನ್‍ಯು- ಜವಾಹರಲಾಲ್ ನೆಹರು ವಿಶ್ವಿವಿದ್ಯಾ ನಿಲಯದ ಒಂದು ವಿದ್ಯಾರ್ಥಿ ಸಂಘಟನೆಯಾಗಿದೆ. ಇದರ ನಾಯಕಿ ಪ್ರಿಯಾಂಸಿಯವರು ಇತ್ತೀಚೆಗೆ ಜೆಎನ್‍ಯು ಕ್ಯಾಂಪಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ನಕಲು ಹೆಸರುಗಳಲ್ಲಿ ಕಳೆದು ಹೋಗುವವರಿಗೆ ನಮಗಾಗಿ ಹೋರಾಡಿದ ನಮ್ಮ ಹಿರಿಯರ ಹೆಸರುಗಳನ್ನು ನೆನಪು ಮಾಡಿದ ವಿದ್ಯಾರ್ಥಿ ಸಂಘಟನೆಯ ಹೆಸರಿದು. ಇದು

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,

ಕಲ್ಪವೃಕ್ಷ ಯೋಜನೆಯ ನೀಲನಕಾಶೆ, ಷೇರು ಬಾಂಡ್ ಬಿಡುಗಡೆ

ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ