Home Archive by category Fresh News (Page 816)

ಕಡಬ: ಮದರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚು ನಾಯಿ ಕಡಿತ

ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ

ಹೊಸ ಪೀಳಿಗೆಯ ಮತದಾರರನ್ನು ಪರಿಚಯಿಸಲು ವಿನೂತನ ಆ್ಯಪ್- ಡಾ. ಯತೀಶ್ ಉಳ್ಳಾಲ್

ಉಜಿರೆ : ಭಾರತದಂತಹ ಬೃಹತ್  ಜನಸಂಖ್ಯೆ ಇರುವ  ರಾಷ್ಟ್ರದಲ್ಲಿ ಯಶಸ್ವಿ ಮತದಾನದ ಪ್ರಕ್ರಿಯೆ ನಡೆಯುತ್ತಿರುವುದು ಜಗತ್ತಿನ ಉಳಿದ ರಾಷ್ಟ್ರದವರಿಗೆ ಅಚ್ಚರಿಯನ್ನು ಮೂಡಿಸುತ್ತಿದೆ, ಆ ಮೂಲಕ ಭಾರತದ ಸಾಂವಿಧಾನಿಕ ವ್ಯವಸ್ಥೆ ಅಗ್ರಮಾನ್ಯವೆನಿಸಿದೆ ಎಂದು ಪುತ್ತೂರಿನ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅಭಿಪ್ರಾಯಪಟ್ಟರು. ಬೆಳ್ತಂಗಡಿಯ ಚುನಾವಣಾ ಆಯೋಗದ ಸ್ವೀಪ್ ಸಮಿತಿ ಮತ್ತು ತಾಲೂಕು ಆಡಳಿತದ ಸಹಯೋಗದೊಂದಿಗೆ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ

SRINIVAS UNIVERSITY CONDUCTED THROW BALL FOR GIRLS ON 12TH NOVEMBER

Throw ball for girls was conducted on 12th November 2021 by the College of Commerce and Management, Srinivas University. Students from MBA, M.Com ,MCA , BCA,  B.Com and BBA have  participated in this  tournament actively. The event was organized by Prof. Sagar Srinivas and the PD of the University Mrs. SupriyaAdiga. The Dean of College […]

ಪಡುಬಿದ್ರಿ: ಅಕ್ಕಿ ಸಾಗಾಟ ಪಿಕಪ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದರ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದು ಕೊಂಡು ಪಲ್ಟಿಯಾಗಿದ್ದು ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಟೈಗರ್ ಬ್ರಾಂಡ್ ಅಕ್ಕಿ ಹೇರಿಕೊಂಡು ಬರುತ್ತಿದ್ದು ಇದ್ದಕ್ಕಿದಂತೆ ಟಯರ್ ಸ್ಫೋಟಗೊಂಡು ರಸ್ತೆಗೆ ಉರುಳಿ ಬಿದ್ದಿದೆ. ಆ ಸಂದರ್ಭ ಹೆದ್ದಾರಿಯಲ್ಲಿ ಯಾವುದೇ ವಾಹನಗಳು ಸಂಚರಿಸದಿರುವುದರಿಂದ ಬಾರೀ ದುರಂತವೊಂದು ತಪ್ಪಿದೆ ಎನ್ನುತ್ತಾರೆ ಅಪಘಾತಕ್ಕೊಳಗಾದ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚಿಸಲಿ : ಪ್ರದೀಪ್ ಕುಮಾರ್ ಕಲ್ಕೂರ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ಇಲ್ಲಸಲ್ಲದ ಹೇಳಿಕೆ ಸಮಾಜದ ಭಾವನೆಗಳ ಮೇಲೆ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾದಲ್ಲಿ ಜಿಲ್ಲೆಗೆ ಕನ್ನಡ ಭವನ ನಿರ್ಮಾಣ : ಎಂ.ಆರ್ ವಾಸುದೇವ

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕನಾಗಿ 15 ವರ್ಷಗಳಿಗೂ ಮೇಲ್ಪಟ್ಟು

ವಿಟ್ಲದ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ : ಸಹೋದರತ್ವದ ಭಾನುವಾರ ಕಾರ್ಯಕ್ರಮ

ವಿಟ್ಲ: ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ “ಸಹೋದರತ್ವದ ಭಾನುವಾರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿ ಪ್ರಬೋದನೆ ನೀಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಎಲ್ಲರಿಗೂ ಆಶೀರ್ವಚನ ನೀಡಿದ ಮಂಗಳೂರು ಧರ್ಮ ಪ್ರಾಂತ್ಯದ ಜುಡೀಶಿಯಲ್ ವಿಕಾರ್ ರವರಾದ ಅತೀ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ಅವರು ನಿತ್ಯ ಜೀವನದಲ್ಲೂ ಬೈಬಲ್ ನ ಆದರ್ಶಗಳನ್ನು ಪಾಲಿಸಬೇಕು, ಆಗ ಮಾತ್ರ ಸಹೋದರತ್ವದ ಭಾನುವಾರದ ಆಚರಣೆಗೆ

ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಸದಸ್ಯ ಎ.ಕೆ.ಗಿರೀಶ್ ಶೆಟ್ಟಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಂ ಶೇಖ, ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಗೋವಿಂದ ಶೆಣೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ

ವಿಟ್ಲ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ: ಇಬ್ಬರ ಬಂಧನ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಹಳೀರಾದಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 20ರಿಂದ 30 ಜನರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸೂರಿಕುಮೇರಿ ನಿವಾಸಿ ಮಹಮ್ಮದ್ ಹನೀಫ್ (43), ಹಳಿರಾ ನಿವಾಸಿ ಜಗದೀಶ್ (25) ಬಂಧಿತರು. ನ.೧೨ರಂದು ಬೆಂಗಳೂರು ಕಡೆಯ ಶಿಫ್ಟ್ ಕಾರು ಹಾಗೂ ಉಪ್ಪಿನಂಗಡಿ ಕಡೆಯ ಇನ್ನೋವಾ ನಡುವೆ ಅಪಘಾತವಾಗಿ,

ಪುತ್ತೂರಿನ ಕಬಕದಲ್ಲಿ ಸರಣಿ ಕಳ್ಳತನ

ಪುತ್ತೂರು : ಕಬಕ ಪೇಟೆಯಲ್ಲಿ ನ.15 ರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಬಕ ರೋಟರಿ ಕಟ್ಟಡ ದಲ್ಲಿರುವ ಹೋಟೆಲ್ ವಿಜಿ ಹಾಗೂ ಬ್ರೈಟ್ ಕಾಂಪ್ಲೆಕ್ಸ್ ನಲ್ಲಿರುವ ಕಬಕ ಜನರಲ್ ಸ್ಟೋರ್ ನಿಂದ ನಗದು ಮತ್ತು ಸೊತ್ತುಗಳು ಕಳವಾಗಿದೆ. ರೋಲಿಂಗ್ ಶಟರ್ ನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಾಗೂ ಚಿಲ್ಲರೆ ಸಾಮಗ್ರಿಗಳನ್ನು ಕಳವು ಗೈದಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಗ್ಯಾರೇಜಿಗೂ ಕಳ್ಳರು ನುಗ್ಗಿದ್ದಾರೆಂದು ತಿಳಿದು ಬಂದಿದೆ. ಪುತ್ತೂರು ನಗರ ಠಾಣಾ ಪೊಲೀಸರು