Home Archive by category Fresh News (Page 849)

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು

ಸಂಬಳ ಸಿಗದೆ ಪರದಾಡುತ್ತಿರುವ ಕೆ ಎಸ್ ಆರ್ ಟಿ ಸಿ ನೌಕರರು : ಬಿಎಂಎಸ್ ಸಂಘಟನೆಯಿಂದ ಧರಣಿಗೆ ನಿರ್ಧಾರ

ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು

ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು: ನಾವುಂದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಕುಂದಾಪುರ: ಸರಕಾರದ ಅನೇಕ ವರ್ಷಗಳ ಪ್ರಯತ್ನದಿಂದ ಶಿಕ್ಷಣ ಇಲಾಖೆ ಒಂದು ಹಂತಕ್ಕೆ ಬಂದು ತಲುಪಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಪರಿಪೂರ್ಣತೆ ಕಂಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು. ಅನೇಕ ಮಕ್ಕಳಿಗೆ ತಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಳ್ಳಲು ಇನ್ನೂ ಕೂಡ ಸ್ವಾತಂತ್ರ್ಯ ದೊರೆತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಅವರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋ.ರೂ. ವೆಚ್ಚದಲ್ಲಿ

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,

ಹೆಚ್‌ಡಿಕೆ ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ

ತೊಕ್ಕೊಟ್ಟಿನಿಂದ ಕೊಣಾಜೆಗೆ ಮುಖ್ಯ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ DYFI ನೇತ್ರತ್ವದಲ್ಲಿ ರಸ್ತೆ ತಡೆ ಪ್ರತಿಭಟನಾ ಪ್ರದರ್ಶನ

ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿ ವೈ ಎಫ್ಐ ಜಿಲ್ಲಾ ಅಧ್ಯಕ್ಷರು B K ಇಮ್ತಿಯಾಜ್ ತೊಕ್ಕೋಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ , ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ಬಹು ದೊಡ್ಡ ಗುಂಡಿಗಳಿಂದ

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು. ಆದರೆ

ಶೂಟೌಟ್ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ

ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು ಆತನ ಪುತ್ರನಿಗೆ ತಗುಲಿದ ಪ್ರಕರಣವನ್ನು ನಗರದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ. ರಾಜೇಶ್ ಪ್ರಭು ಮಾಲಕತ್ವದ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯಲ್ಲಿ