ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ
ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್
ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೆಎಲ್ಇ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಎಲ್.ಎಸ್. ಟ್ರೋಫಿ ಹಾಪ್
10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಇಡೀ ದೇಶಾದ್ಯಂತ ಭಾರತ ಬಂದ್ಗೆ ಕರೆ ಕೊಟ್ಟದೆ. ಅದರ ಪ್ರಯುಕ್ತ ನಾವು
ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಚಳುವಳಿಗೆ ಸೆ. 26ನೇ ತಾರೀಖಿಗೆ ಹತ್ತು ತಿಂಗಳು ತುಂಬಲಿರುವ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ ಸೆ.27ರಂದು ಭಾರತ್ ಬಂದ್ಗೆ ಕರೆ ನೀಡಿದ್ದು ಅಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಬಳಿಯಿಂದ
ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ ಅಂತರ ಹಾಗೂ ಆರೋಗ್ಯ ಕೇಂದ್ರ ಇದ್ದರೂ ತುರ್ತು ಸಂದರ್ಭ,ಅಪಾಯಕಾರಿ ಕಂಪನಿಗಳು, ಕಾರ್ಖಾನೆಗಳು ಇರುವ
ಉಡುಪಿ: ಕೊರೊನ 2ನೇ ಲಾಕ್ಡೌನ್ ಪ್ರಾರಂಭದಿಂದ ಅಸಹಾಯಕ ವೃದ್ಧರು ಅಂಗವಿಕಲರು ಮಾನಸಿಕ ರೋಗಿಗಳಿಗೆ ಹಸಿದವರ ಹಸಿವು ನೀಗಿಸಿದ ವಿಶು ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕೃಷ್ಣ ಅಮೀನ್ ಮಧ್ವ ನಗರ ಹೇಳಿದರು. ಇದೀಗ ಸೆಪ್ಟೆಂಬರ್ 23ತಾರೀಕಿನಿಂದ ಕೃಷ್ಣ ಮಠದಲ್ಲಿ ಅನ್ನ ಪ್ರಸಾದ ಪ್ರಾರಂಭವಾದ ಹಿನ್ನೆಲೆಯಲ್ಲಿ ಅನ್ನದಾನ ಕಾರ್ಯಕ್ರಮ ಸಮಾರೋಪಗೊಳಿಸಲಾಯಿತು. ಏಪ್ರಿಲ್ 24ರಂದು ಲಾಕ್ ಡೌನ್ ಪ್ರಾರಂಭವಾದ ದಿನದಿಂದ ಪ್ರತಿದಿನ 500ಕ್ಕೂ ಹೆಚ್ಚು


















