Home Archive by category Fresh News (Page 875)

ನಟನ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವನಟಿ ಸಿಂಚನಾ ಚಂದ್ರಮೋಹನ್

ನಟನೆ ಎಂಬುವುದು ಒಂದು ಕಲೆ ಆ ಕಲೆಯನ್ನು ಪ್ರದರ್ಶಿಸುವ ಜಾಣ್ಮೆ ಎಲ್ಲರಲ್ಲಿಯೂ ಇರುವುದಿಲ್ಲ, ಇನ್ನೂ ಕೆಲವರಿಗೆ ಅವಕಾಶ ದೊರೆಯುವುದಿಲ್ಲ, ಅದರೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು ಉತ್ತಮ ನಟನಾಗಬಹುದು. ನಟನೆ ಎಂಬುವುದು ಜೀವವಿಲ್ಲದ ಪಾತ್ರಕ್ಕೆ ಜೀವ ತುಂಬುವುದು. ತನನ್ನು ತಾನು ಆ ಪಾತ್ರಕ್ಕೆ ಅರ್ಪಿಸಿಕೊಳ್ಳಬೇಕಾಗುತ್ತದೆ. ಎಂತಹ ಪಾತ್ರವಾದರು

ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ನಡೆಯಿತು.ಪ್ರತಿಭಟನೆ ನಿರತ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸಬೇಕೆಂದು

ಸೆ. 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಣೆ: ಯುವ ಜನರ ಆಕ್ರೋಶ ಪ್ರಧಾನಿವರೆಗೆ ಮುಟ್ಟಿಸುತ್ತೇವೆ – ರಕ್ಷಾ ರಾಮಯ್ಯ

ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದ್ದು, ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಸೆಪ್ಟೆಂಬರ್ 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ

ಮಹಿಳಾ ಸುರಕ್ಷತಾ ಜಾಗೃತಿ ಅಭಿಯಾನ: ಮಹಿಳೆಯರ ಸುರಕ್ಷತೆ ದೇಶದ ಹೊಣೆ

ನಮ್ಮ ದೇಶದ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇಂದು ಮಹಿಳೆಯರು ಹಲವಾರು ರಂಗಗಳಲ್ಲಿ, ವಿವಿಧ ವ್ಯವಹಾರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮನ್ನು ರಾಜಕೀಯ ರಂಗದಲ್ಲಿಯೂ ಪ್ರತಿನಿಧಿಸುತ್ತಿದ್ದಾರೆ. ಹಾಗಿದ್ದರೂ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ದಿನೇ ದಿನೇ ಹೆಚ್ಚುತ್ತಿರುವ ಆತಂಕಕಾರಿ ಘಟನೆಗಳು, ಅವರ ಮೇಲೆ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯಗಳು ನಮ್ಮ ಸಭ್ಯ ಸಮಾಜವನ್ನು ಕಂಗೆಡಿಸಿದೆ. ನಮ್ಮ

ಪುತ್ತೂರಿನಲ್ಲಿಂದು ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ

 ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಎತ್ತಿನ ಬಂಡಿ ಆಂದೋಲನ

ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಆಗಿರುವ ತೊಂದರೆ ಕುರಿತು ಸಾಂಕೇತಿಕವಾಗಿ ಪ್ರತಿಭಟನೆ ವ್ಯಕ್ತಪಡಿಸಲು ಕಾಂಗ್ರೆಸ್ ನಾಯಕರು

ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ,

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಲಬುರಗಿ ಪಾಲಿಕೆಯ ಮೇಯರ್ ಆಗ್ತಾರೆ: ಶಾಸಕ ಖಾದರ್ ವಿಶ್ವಾಸ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ

ಹರೇಕಳದಲ್ಲಿ DYFI ಯುವಜನರ ಗ್ರಾಮ ಸಮಾವೇಶ

ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡ ಪಾಲು ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಅದ್ಯತೆ ನೀಡಿ ಎಂಬ ಘೋಷಣೆಯಲ್ಲಿ ಹರೇಕಳ ಗ್ರಾಮದಲ್ಲಿ ಯುವಜರ ಸಮಾವೇಶ ನಡೆಯಿತು. ಸಮಾವೇಶದ ಉಧ್ಘಾಟನೆಯನ್ನು ಮಾಡಿ ಮಾತನಾಡಿದ ಮಾಜಿ DYFI ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಯುವಜನತೆಯನ್ನ ಗಂಭೀರವಾಗಿ ಕಾಡುತ್ತಿರುವ ನಿರದ್ಯೋಗ ಸಮಸ್ಯೆಯ ವಿರುದ್ದ, ಉದ್ಯೋಗದ ಹಕ್ಕಿಗಾಗಿ ಯುವಕರು ಹೋರಾಟ ನಡೆಸಬೇಕು ಎಂದು ಕರೆನೀಡಿದರು. ಸಭೆಯಲ್ಲಿ ಪ್ರಮುಖ

ಮಂಗಳೂರಲ್ಲಿ ಹಾಡುಹಗಲೇ ಮಹಿಳೆಯ ಸರಕಳ್ಳತನ: ವೀಡಿಯೋ ವೈರಲ್

 ಮಂಗಳೂರಿನ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ರಿಟ್ಸ್ ಕಾರಿನಲ್ಲಿ ಬಂದ ಮೂವರು ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಯಿಂದ ಸರ ಕಿತ್ತು ಓಡಿದ್ದಾರೆ. ರಿಟ್ಸ್ ಕಾರಿನಿಂದ ಮೊದಲು ಮೂವರು ಇಳಿದಿದ್ದು ಇಬ್ಬರು ಬಾಗಿಲು