Home Archive by category Fresh News (Page 89)

ಕುಂದಾಪುರ: ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ

ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ ರಾಘವೇಂದ್ರ ಜೋಗಿ S/O ಸುಬ್ರಾಯ ಜೋಗಿ ಇವರ ಮನೆ ಹಾನಿಯಾಗಿದೆ. ಮನೆಯು ಸಂಪೂರ್ಣ ಕುಸಿಯುವ ಹಂತದಲ್ಲಿದ್ದು, ಬಹಳಷ್ಟು ಹಾನಿಯಾಗಿ ನಷ್ಟ ಸಂಭವಿಸಿದೆ. ಕುಂದಬಾರಂದಾಡಿ ಗ್ರಾಮದ

ಕುಂದಾಪುರ : ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿಗಳಿಂದ ಅಭಿನಂದನೆ

ಕುಂದಾಪುರ :ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಹೈನುಗಾರಿಕೆ, ಸಹಕಾರ, ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಳು ಮಾದರಿಯಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹೇಳಿದರು. ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ವತಿಯಿಂದ 2024-25ನೇ ಸಾಲಿನ ಕರ್ನಾಟಕ ಸರ್ಕಾರ

ಸುಳ್ಯ:ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ ನಡೆಯಿತು.ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ,ಮಂಡಲದ ಒಬಿಸಿ ಅಧ್ಯಕ್ಷರು ಗಿರೀಶ್ ಐನೇಕಿದು, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕಸ್ತುರ್ಬಾ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ|ಶ್ವೇತ ಸಿನ್ಹರವರು ಮಾತನಾಡಿ ರೋಗಿಯ ರಕ್ಷಣೆಯಲ್ಲಿ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ಪಾತ್ರ ಮಹತ್ತರವಾಗಿದೆ ಎಂದರು. ಇನ್ನೊರ್ವ ಅತಿಥಿ ಉಡುಪಿ ಜಿಲ್ಲಾ ಆಸ್ಪತ್ರೆಯ ಅರಿವಳಿಕೆ

ದುಬೈ: ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ ವಾರ್ಷಿಕ ಆರೋಗ್ಯ ಪ್ರಶಸ್ತಿಗೆ ನಾಮಿನೇಷನ್ ಪ್ರಾರಂಭ

ದುಬೈ: – ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ವಾರ್ಷಿಕ ಆರೋಗ್ಯ ಪ್ರಶಸ್ತಿಗಳು 2025 ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ಯುಎಇಯಲ್ಲಿ ಆರೋಗ್ಯ ಕ್ಷೇತ್ರದ ಅತ್ಯುನ್ನತ ಗೌರವ ಈ ಪ್ರಶಸ್ತಿಗಳು. ಈ ವರ್ಷದ ವಿಶೇಷತೆ. 15 ಯುಎಇ ನಾಗರೀಕರು ಮತ್ತು ಇನ್ನೂ 46 ವಿಭಿನ್ನ ವಿಭಾಗಗಳಲ್ಲಿ ಸಾಧನೆ ಗೈದವರನ್ನು ಗೌರವಿಸಲಾಗುತ್ತದೆ. ಈ ಸಮಾರಂಭ ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ದುಬೈನ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ ನಡೆಯಲಿದೆ.

ಪುತ್ತೂರು: ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು 8ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್‌ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್ ವಿಡಿಯೋ ಮಿಕ್ಸಿಂಗ್, ಇಂಡಸ್ಟ್ರೀಯಲ್ ಅರ್ತಿಂಗ್, ಜನರೇಟರ್ ಅರ್ತಿಂಗ್, ಸೋಲಾರ್ ಅರ್ತಿಂಗ್, ಡಿಜಿಟಲ್ ಅರ್ತಿಂಗ್ ವ್ಯವಸ್ಥೆಯೂ ಲಭ್ಯವಿದೆ. ಈ ಹಿಂದೆ

ಸುಳ್ಯ: ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮ

ಹೆಚ್ಚು ಹೆಚ್ಚು ತಲೆಎತ್ತುತ್ತಿರುವ ಕೈಗಾರಿಕೆಗಳು ನಮ್ಮ ಪರಿಸರದ ನಾಶಕ್ಕೆ ಕಾರಣವಾಗಿದೆ. ಅಂದು ಶ್ರೀಮಂತ ಪರಿಸರವಾಗಿದ ನಮ್ಮ ಪ್ರದೇಶ ಇಂದು ಪ್ರಸ್ತುತತೆಯ ಜೀವನ ಶೈಲಿಗೆ ಪರಿಸರ ವಿನಾಶದ ಅಂಚಿಗೆ ತೆರಳುತಿದೆ. ಪರಿಸರವನ್ನು ಸಂರಕ್ಷಿಸೋಣ ಎಂದು ಪರಿಸರ ಪ್ರೇಮಿ, ಬಂಟಮಲೆ ಅಕಾಡೆಮಿ ಅಧ್ಯಕ್ಷ ಶ್ರೀ. ಎ. ಕೆ. ಹಿಮಕರ ಹೇಳಿದರು.ಅವರು ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸಂಸ್ಥೆಯ ಇಕೋ ಕ್ಲಬ್ ನ

ಮಂಗಳೂರು : ಕುಸಿದುಬಿದ್ದ ಆವರಣ ಗೋಡೆ – ಹಲವು ದ್ವಿಚಕ್ರ ವಾಹನಗಳು ಜಖಂ

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ನಗರದ ಮೇರಿಹಿಲ್ ಸಮೀಪದಲ್ಲಿ ತಡೆಗೋಡೆ ಕುಸಿದ ಪರಿಣಾಮ ಪಕ್ಕದಲ್ಲಿದ್ದ ಬೈಕ್ ಹಾಗೂ ಕಾರು ಜಖಂಗೊಂಡಿದೆ. ಸಮೀಪದಲ್ಲಿಯೇ ಗ್ಯಾರೇಜ್ ನ ವಾಹನಗಳನ್ನ ತಡೆಗೋಡೆ ಪಕ್ಕದಲ್ಲಿಯೇ ನಿಲ್ಲಿಸಲಾಗಿದ್ದು, ಮಳೆ ಪರಿಣಾಮ ತಡೆಗೋಡೆ

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳಿಗೆ ಹೈಕೋರ್ಟಿನಲ್ಲಿ ಹಿನ್ನಡೆ, ಜಾಮೀನು ಅರ್ಜಿ ವಜಾ

ಪುತ್ತೂರು : ಪುತ್ತೂರಿನಲ್ಲಿ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್