ಕುಂದಾಪುರ: ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ನಿಮಿಷಕ್ಕೆ ಐನೂರು ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಈಗಾಗಲೇ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುತ್ತಾರೆಂಬ ಮಾಹಿತಿ ಇದೆ. ಹೀಗಾಗಿ ಸ್ವಲ್ಪ ದಿನದ ಬಳಿಕ ಈ ಘಟಕವನ್ನು ಉದ್ಘಾಟನೆ ಮಾಡುತ್ತೇವೆ ಎಂದು
ಕುಂದಾಪುರ: ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದವರು ನೂತನ ಸಚಿವರ ಪರಿಚಯಕ್ಕೂ ಅವಕಾಶ ನೀಡದೆ ಗದ್ದಲ ಎಬ್ಬಿಸಿದ್ದರಿಂದ ನಮ್ಮನ್ನು ನಾವು ಪರಿಚಯಿಸಿಕೊಳ್ಳಲು ಜನಾಶೀರ್ವಾದ ಯಾತ್ರೆ ಆರಂಭಿಸಿದ್ದೇವೆ. ನರೇಂದ್ರ ಮೋದೀಜಿಯವರ ಸರ್ಕಾರಕ್ಕೆ ಚಿಕ್ಕ ಕಪ್ಪು ಚುಕ್ಕೆಯೂ ಬಾರದಂತೆ ಅತ್ಯಂತ ಪಾರದರ್ಶಕವಾಗಿ ಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವೆಯಾಗಿ ಆಯ್ಕೆಗೊಂಡ ಬಳಿಕ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೋಗೋ”ವನ್ನು ಬಿಡುಗಡೆ ಮಾಡಿದರು. ತುಳುಭಾಷೆಯನ್ನು ಕರ್ನಾಟಕ ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಲಾಯಿತು ಹಾಗೂ “ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮುಖ್ಯಮಂತ್ರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು
ಕು. ಅಮನ, 8 ನೇ ತರಗತಿ, ಬಿಷಪ್ ಕಾಟನ್ ಗಲ್ರ್ಸ್ ಸ್ಕೂಲ್, ಬೆಂಗಳೂರಿನಲ್ಲಿ ಓದುತ್ತಿದ್ದು, ಪ್ರತಿಷ್ಠಿತ ‘ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್’ ನಲ್ಲಿ “ಕಿರಿಯ ಕವಯಿತ್ರಿ” ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಗ್ರ್ಯಾಂಡ್ ಮಾಸ್ಟರ್” ಆಗಿ ದಾಖಲಾಗಿದೆ. ವಿವರಗಳು ಹೀಗಿವೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್: ಅತ್ಯಂತ ಕಿರಿಯ ಕವಯಿತ್ರಿ ಎಂಬ ದಾಖಲೆಯನ್ನು ಬೆಂಗಳೂರಿನ ಕು. ಅಮನ (ಜನನ ಜೂನ್ 20, 2008 ರಂದು) ಮಾಡಿದ್ದಾರೆ. ಅವರು 61 ಕವನಗಳ
ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಕನ್ನಡ ಮತ್ತು
ಉದ್ಯಾವರ ಸೇತುವೆಯಲ್ಲಿ ಲಾರಿ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬಹಳಷ್ಟು ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾರು ಬಹುತೇಕ ಜಖಂಗೊಂಡು ಚಲಿಸದ ಕಾರಣ ಸ್ಥಳಕ್ಕೆ ಬಂದ ಕಾಪು ಪೊಲೀಸರು ಬಾರ ಎತ್ತುವ ಯಂತ್ರ ತರಿಸಿ ಕಾರನ್ನು ಸೇತುವೆ ಮೇಲಿಂದ ತೆರವುಗೊಳಿಸಲಾಯಿತು.
ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು
ಕುಂದಾಪುರ: ಮೆಕ್ಕಾದ ಕುರಿತು ಅವಹೇಳನಕಾರಿ ಬರೆಹ ಪ್ರಕಟಿಸಿದ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲುಪಾಲಾಗಿದ್ದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಕೊನೆಗೂ ಬಿಡುಗಡೆಗೊಂಡು ಗುರುವಾರ ಕುಟುಂಬ ಸಮೇತರಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜನಸೇವಾ ಟ್ರಸ್ಟ್ ಹಾಗೂ ಟೀಮ್ ಅಭಿಮತ ನೇತೃತ್ವದಲ್ಲಿ ಕೋಟೇಶ್ವರ ದೇವಸ್ಥಾನದವರೆಗೆ ಗುರುವಾರ ಮುಂಜಾನೆ ಕಾಲ್ನಡಿಗೆಯಲ್ಲಿ ಸಾಗಿ ಅಲ್ಲಿಯೂ ಪೂಜೆ ಸಲ್ಲಿಸಿ ಮನೆಗೆ ತೆರಳಿದರು. ತಾವು ವಾಸವಿದ್ದ
ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ.ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ.
ಬಿಐಎಸ್ ಹಾಲ್ಮಾರ್ಕ್ ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವರಾಗಿರುವ ಶ್ರೀ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ಚಿನ್ನದ ಕೆಲಸಗಾರರ ಸಂಘ ಹಾಗೂ ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಮುಖೇನ ಮನವಿಯನ್ನು ಸಲ್ಲಿಸಲಾಯಿತು.ಸಭೆಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಚಿನ್ನಾಭರಣ


















