Home Archive by category Fresh News (Page 902)

ಹಕ್ಕಿಗಾಗಿ ಮಾತ್ರವಲ್ಲ; ಕರ್ತವ್ಯಕ್ಕಾಗಿಯೂ ಹೋರಾಡೋಣ: ಉದಯ್ ನಾಯಕ್

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ.

ಟೀಮ್ ಬಿ-ಹ್ಯೂಮನ್, ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ : ಸ್ವಾತಂತ್ರ್ಯೋತ್ಸವ- ರಕ್ತದಾನದ ಶಿಬಿರ

ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ ಭಾರತದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಈ ಮಹತ್ವಪೂರ್ಣ ಗಳಿಗೆಯನ್ನು ಬಹಳ ಅರ್ಥವತ್ತಾಗಿ

ತೆಂಕನಿಡಿಯೂರು ಕಾಲೇಜು : ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ ನಾಗರಿಕರ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕು. ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಅಗತ್ಯವಾಗಿ

ನೆಹರೂರನ್ನು ಅವಮಾನಿಸಿದ ಸಿ.ಟಿ ರವಿ ದೇಶದ್ರೋಹಿ: ಮಾಜಿ ಸಚಿವ ರಮಾನಾಥ್ ರೈ ಕಿಡಿ

ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ

ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮುಂದುವರಿಯಲಿದೆ: ಸಚಿವ ಕೆ ಗೋಪಾಲಯ್ಯ

ಹಾಸನ :ಮುಂದಿನ ಅವಧಿಯ 21 ತಿಂಗಳು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಮುಂದುವರಿಯಲಿದೆ ಇದರಲ್ಲಿ ಯಾವುದೇ ಗೊಂದಲ ಬೇಡ  ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರದಲ್ಲಿ ಇರಲಿದ್ದಾರೆ . ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿಯ

ತೆಂಕ ಗ್ರಾ.ಪಂ.ನಲ್ಲಿ ಲಿಂಕ್ ರಸ್ತೆ ಕಾಮಗಾರಿ ಮುಗಿಸುವಂತೆ ಸಾರ್ವಜನಿಕರಿಂದ ಒತ್ತಾಯ

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಲಿಂಕ್ ರಸ್ತೆಗಳ ಆರಂಭಿಕ ಐವತ್ತು ಮೀಟರ್ ರಸ್ತೆ ಹೆದ್ದಾರಿ ಇಲಾಖೆ ನಡೆಸಬೇಕಾಗಿದ್ದರೂ ನಿರ್ಲಕ್ಷ್ಯ ಮಾಡಿದ ಇಲಾಖೆಯ ವಿರುದ್ಧ ಆಕ್ರೋಶ ಗೊಂಡ ಗಾ.ಪಂ. ಪ್ರತಿನಿಧಿಗಳು ಸಹಿತ ಸಾರ್ವಜನಿಕರು ಹೆದ್ದಾರಿ ಕಾಮಗಾರಿಗೆ ತಡೆಯೊಡ್ಡಿ, ಲಿಂಕ್ ರೋಡ್ ಕಾಮಗಾರಿ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯ ನಿವಾಸಿ ಸುರೇಶ್ ಪೂಜಾರಿ, ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂಧಿಸುತ್ತಾರೆ ಎಂಬ ನಿಟ್ಟಿನಲ್ಲಿ ನಾವು

ಕಬಕ ಗ್ರಾ.ಪ.ನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ: ಗುಂಪು ಚದುರಿಸಿದ ಪೊಲೀಸರು

ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ನಡೆದಿದೆ.   ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ

‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ-ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು

ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವೆಲ್ಲರೂ, ಪ್ರಕೃತಿಯ ಮುಂದೆ ನಮ್ಮ ಸೀಮಿತ ಸಾಮರ್ಥ್ಯ ಮತ್ತೆ ಮತ್ತೆ ಸಾಬೀತಾಗಿರುವುದನ್ನು ಮನಗಂಡು, ‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ. ಕರಾವಳಿಯ ನೆಲ- ಜಲದ ಸಂರಕ್ಷಣೆಯೊಂದಿಗೆ ಕೃಷಿ – ಪ್ರವಾಸೋದ್ಯಮ, ಯುವಜನ ಸಬಲೀಕರಣ – ಕೌಶಲಾಭಿವೃದ್ಧಿಯ ಕ್ಷೇತ್ರಗಳಿಗೆ ಆದ್ಯತೆ ನೀಡಲು ಆಡಳಿತ ಬದ್ಧ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ

ಬಿ.ಸಿ ರೋಡ್‌ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಬಂಟ್ವಾಳ ಪೋಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗೃಹರಕ್ಷಕದಳ

ಬೈಂದೂರಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್‌ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೈಂದೂರು ತಾಲೂಕಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾವಳಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ ಸರಳ ರೀತಿಯಲ್ಲಿ ನೆರವೇರಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಯುವ ಉದ್ಯಮಿ ಕಿರಣ್ ಲೋಬೊ ಮಾತನಾಡುತ್ತಾ ನಮಗೆ ಸ್ವಾತಂತ್ರ್ಯ ಸಿಗಲು ಅದೆಷ್ಟೋ ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಅವರನ್ನು ಸ್ಮರಿಸ ಬೇಕಾದುದ್ದು ನಮ್ಮೇಲ್ಲರ ಕರ್ತವ್ಯವಾಗಿದೆ.ಇವತ್ತಿನ ಯುವ