Home Archive by category Fresh News (Page 916)

ಟೋಕಿಯೋ ಒಲಿಂಪಿಕ್ಸ್: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್‍ಗೆ ಕಂಚಿನ ಪದಕ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ

ಇಂದಿನ ನಿಮ್ಮ ರಾಶಿ ಭವಿಷ್ಯ

ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ. ಕೆಲವೊಂದು ಮುನ್ನೆಚ್ಚರಿಕೆ ತೆಗೆದುಕೊಂಡರೆ ಮುಂದೆ ಬರುವ ಅಪಾಯ ತಪ್ಪಿಸಬಹುದು ಅಂತಾರೆ. ಹಾಗೆಯೇ

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ

ಭಾಷಾ ಬಾಂಧವ್ಯದಿಂದ ಸೌಹಾರ್ದತೆ ಸಾಧ್ಯ – ಡಾ. ತಮಿಳ್ ಸೆಲ್ವಿ

ನಾವು ನಮ್ಮದಲ್ಲದ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡರೆ ಆ ಭಾಷೆ ಬಗ್ಗೆ ಅರಿವು ಹೆಚ್ಚಾಗಿ ಸೌಹಾರ್ದತೆ ಸಾಧ್ಯವಾಗುತ್ತದೆ. ತಮಿಳು-ಕನ್ನಡದ ದೃಷ್ಟಿಯಿಂದ ಇದು ಅತೀ ಮುಖ್ಯ. ಇದರಿಂದ ರಾಜ್ಯಗಳ ನಡುವಿನ ಹಲವು ಸಮಸ್ಯೆಗಳು ಪರಿಹಾರ ಕಾಣಬಹುದು ಎಂದು ಖ್ಯಾತ ಭಾಷಾ ವಿದ್ವಾಂಸರು ಮತ್ತು ಮದ್ರಾಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ತಮಿಳ್ ಸೆಲ್ವಿ ಹೇಳಿದ್ದಾರೆ. ತೆಂಕನಿಡಿಯೂರಿನ ಸರಕಾರಿಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ

ರಾಜಧರ್ಮದ ಕುರಿತು ಭಾಷಣ ಮಾಡಿದ್ರೆ ಸಾಲದು, ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಬಿಪಿಎಲ್ ಕಾರ್ಡ್ ರದ್ದುಮಾಡುವುದು, ಅದನ್ನು ಪುನರ್ ವಿಮರ್ಶೆ ಮಾಡಿ ಕೊಡಿಸುತ್ತೇವೆ ಎನ್ನುವುದು ಆಡಳಿತ ಪಕ್ಷದ ಪ್ರಚಾರದ ತಂತ್ರ ಎಂದು ಮಾಜಿ ಸಚಿವ ಬಿ. ರಮನಾಥ ರೈ ಆರೋಪಿಸಿದ್ದಾರೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ರಾಜಧರ್ಮದ ಕುರಿತು ಕೇವಲ ಭಾಷಣ ಮಾಡಿದರೆ ಸಾಲದು ಅದನ್ನು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಆಡಳಿತ ಪಕ್ಷಕ್ಕೆ ಸಂಬಂಧಪಟ್ಟವರೇ ಬಿಪಿಎಲ್ ಕಾರ್ಡ್ ರದ್ದು

ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಬಾವಿಯಲ್ಲಿ ಶವವಾಗಿ ಪತ್ತೆ

ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ನೆರವಾದರು.

ದಾಖಲೆಯತ್ತ ದಾಪುಗಾಲಿಟ್ಟ ಚೊಚ್ಚಲ ‘ಬಿಲ್ಲವಾಸ್ ಕತಾರ್ ಪ್ರತಿಭಾ ಸಪ್ತಾಹ 2021’

ಬಿಲ್ಲವಾಸ್ ಕತಾರ್ ಪ್ರತಿಭಾ ಸಪ್ತಾಹ-2021 ಎಂಬ ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ಆಯೋಜಿಸಿದ್ದು, ವಿಶ್ವದ ಎಲ್ಲಾ ಬಿಲ್ಲವ ಪ್ರತಿಭೆಗಳು ಅರಳುವಂತೆ ಮಾಡಿದೆ ಬಿಲ್ಲವಾಸ್ ಕತ್ತಾರ್. ಕೋವಿಡ್‌ನ ಈ ವಿಷಮ ಸ್ಥಿತಿಯಲ್ಲಿ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯಲ್ಲಿ ಬಿಲ್ಲವಾಸ್ ಕತಾರ್‌ನವರು ಕಲ್ಪಿಸಿಕೊಟ್ಟಿದ್ದಾರೆ. ಅಂತರ ಕಾಪಾಡಿ, ಅಂತರ್ಮುಖಿಯಾಗಿ, ದುಗುಡ ದುಮ್ಮಾನಗಳ ಸರಪಳಿಯಲ್ಲಿ ಸಿಲುಕಿರುವ   ಅದೆಷ್ಟೋ  ಜನರಿಗೆ ತಮ್ಮ ಹಿಂದಿನ ಜೀವನ  ಕನಸಿನ

ವಿಟ್ಲದ ಕೊಡಂಗೆ ಚೆಕ್‌ಪೋಸ್ಟ್‌ಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ: ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ವಿಟ್ಲ: ಕೇರಳದಲ್ಲಿ ಕೋವಿಡ್ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ- ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರಂಭದಲ್ಲಿ ಕೇರಳ- ಕರ್ನಾಟಕ

ನರೇಂದ್ರ ಮೋದಿ ಮತ್ತು ಪಿ.ವಿ.ಸಿಂಧುಗೆ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ: ಪಬ್ಬಾಸ್  ಕೆಫೆ  ಟ್ವೀಟ್

ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ.   ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಪ್ರತಿಭಟನೆ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ