Home Archive by category karavali (Page 2)

ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF THE MAHABHARATA) ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ

ಕಾಪು ಪುರಸಭೆ ವ್ಯಾಪ್ತಿಯ 15 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ

ಮೂಡುಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿ, ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಕನಸುಗಳು, ಹೊಸ ಆಶಯಗಳು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಬಿಗ್ ಬಾಸ್- 12 ರ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರನ್ನು ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ

ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಮಟ್ಟದ ಭಾವೈಕ್ಯತಾ ಶಿಬಿರ ಆರಂಭ

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ ಆರಂಭಗೊಂಡಿತು. ಮಂಗಳೂರು ಪೊಲೀಸ್ ಉಪ ಆಯುಕ್ತರಾದ ನಜ್ಮಾ ಫರೂಕಿ ಶಿಬಿರವನ್ನು ಉದ್ಘಾಟಿಸಿ ಶುಭ

ಬೆಳ್ತಂಗಡಿ: ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಏಂಡ್ ಗೈಡ್ ALT ಅರ್ಹತೆ

ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್‌ ಸ್ಕೌಟ್ ಏಂಡ್ ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನ : ಎರಡು ತಿಂಗಳಲ್ಲಿ 15 ಕೋಟಿಗೂ ಮಿಕ್ಕಿ ಆದಾಯ

ಸುಬ್ರಹ್ಮಣ್ಯ ಜನವರಿ 21 : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವಂಬರ್ ಹಾಗೂ ಡಿಸೆಂಬರ್ ನ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ.ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,5621739 ಕೋಟಿರೂಪಾಯಿ ಹುಂಡಿಯಿಂದ 1,0976957 ಕೋಟಿ ರೂಪಾಯಿ ಹಾಗೂ ಅನ್ನದಾನ ನಿಧಿಯಿಂದ 8357769 ಲಕ್ಷ ರೂಪಾಯಿ ಆದಾಯ ಬಂದಿರುತ್ತದೆ. ಹಾಗೆಯೇ ಡಿಸೆಂಬರ್ ತಿಂಗಳ ವಿವಿಧ

​ಹಾಸನ: ಅಪ್ರಾಪ್ತ ಬಾಲಕಿಯ ಮೇಲೆ ಲೈಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಪೋಕ್ಸೊ ಕಾರಾಗೃಹ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲೆ ಲೈಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಇಲ್ಲಿನ ಪೋಕ್ಸೊ (P0CSO) ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಗುರುವಾರ ಮಹತ್ವದ ತೀರ್ಪು ನೀಡಿದೆ. ​ಬಾಲಕಿಯ ಮೇಲೆ ನಡೆದಿದ್ದ ಈ ಘೋರ ಕೃತ್ಯದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದ್ದಾರೆ. ದಂಡದ ಮೊತ್ತದ ಜೊತೆಗೆ, ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 7

ಮಲ್ಲಿಕಟ್ಟೆ ಶಿವಭಾಗ್ ವಾರ್ಡ್‌ನ ಪಾರ್ಕ್ ಅವ್ಯವಸ್ಥೆ – ನಾಗರಿಕರ ನಿರ್ಲಕ್ಷ್ಯದ ಪ್ರತಿಬಿಂಬ

ಪಾರ್ಕ್ ಉಳಿಸುವ ಹೊಣೆ ಯಾರದು ? ನಗರದ ಮಲ್ಲಿಕಟ್ಟೆ ಶಿವಭಾಗ್ ವಾರ್ಡ್ ಸಂಖ್ಯೆ 34 ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಇಂದು ಸಂಪೂರ್ಣ ಅವ್ಯವಸ್ಥೆಯ ಗೂಡಾಗಿದೆ. ಮಕ್ಕಳ ಆಟ, ಹಿರಿಯರ ವಾಕಿಂಗ್‌, ಸಾರ್ವಜನಿಕರ ವಿಶ್ರಾಂತಿಗಾಗಿ ನಿರ್ಮಿಸಲಾಗಿದ್ದ ಈ ಪಾರ್ಕ್‌ ಈಗ ಅಸ್ತವ್ಯಸ್ತ ಸ್ಥಿತಿಯಲ್ಲಿ ಕಂಡುಬರುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದ ಕಾರಣ ಪಾರ್ಕ್‌ಗೆ ಬರುವ ನಾಗರಿಕರು ಅನೇಕ ಅನಾನುಕೂಲಗಳನ್ನು ಅನುಭವಿಸಬೇಕಾಗಿದ್ದು, ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ವಾಕಿಂಗ್‌ಗೆ

ಯೇನೇಪೋಯದಲ್ಲಿ ರಾಷ್ಟ್ರೀಯ ಯುವದಿನಾಚರಣೆ – ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರ

ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿಆಚರಿಸಲಾದ ರಾಷ್ಟ್ರೀಯ ಯುವದಿನ 2026ಅನ್ನುಅನುಸಂಧಾನಿಸಿ, ಯೇನೇಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತುಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು. ಕಾರ್ಯಕ್ರಮವು19 ಜನವರಿ 2026, ಬೆಳಿಗ್ಗೆ10:30 ರಿಂದ ಮಧ್ಯಾಹ್ನ 12:30ರವರೆಗೆ ಕಾಲೇಜು ಸಭಾಂಗಣದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಂಗಳೂರು ಮೂಲದ ORESO ಸಂಸ್ಥೆಯ ಸ್ಥಾಪಕಿ ಮತ್ತು