Home Archive by category karavali (Page 23)

ಇಂದಿರಾ ಹೆಗ್ಗಡೆ ಅವರ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ.ಆಶಾಲತಾ ಸುವರ್ಣ

ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಅವರು

ಎನ್ನೆಂಸಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಪ್ರಯುಕ್ತ ನಾಲ್ಕನೇ ದಿನದ ಕಾರ್ಯಕ್ರಮ

ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ ಕಾಲೇಜುಗಳಲ್ಲಾಗಬೇಕು ಲೀಲಾ ದಾಮೋದರ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಾಗೂ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ನವೆಂಬರ್ 4 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯದ ಸಾಹಿತಿ ಲೀಲಾ ದಾಮೋದರ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ – ಕಾಲೇಜುಗಳಲ್ಲಾಗಬೇಕು. ಆ

ಪುತ್ತೂರು: ದೇವದಾಸ್ ಗೌಡ ನಿಧನ

ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ ನಿಧನ. ಪುತ್ತೂರು: ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ(74ವ) ನ.4ರಂದು ನಿಧನರಾದರು. ದೇವದಾಸ್ ಗೌಡ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ.4ರಂದು ಅವರು ನಿಧನರಾದರು. ಮೃತರು

ಡಾ.ಡಿ.ಎ.ಶಂಕರ್ ಮೈಸೂರು ಅವರಿಗೆ ೨೦೨೫ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ‌ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ

ಚಿಕಿತ್ಸೆಗೆ ಮಾನವೀಯ ನೆರವು ನೀಡಲು ಮನವಿ

ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ

ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ

ನ. 28 : ಪ್ರಧಾನಿ ಮೋದಿ ಉಡುಪಿ ಮಠಕ್ಕೆ ಭೇಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಶಿಸ್ತಿನೊಂದಿಗೆ ಸಕಾರಾತ್ಮಕ ಮನೋಭಾವವೇ ಯಶಸ್ಸಿನ ಕೀಲಿಕೈ: ವಿವೇಕ್ ಆಳ್ವ

ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆಳ್ವಾಸ್‌ಗೆ 20ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು