Home Archive by category karavali (Page 35)

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ನೋಟೀಸು

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್ ಅರ್ಚಕರಾಗಿರುವ ಆಲಯದ ವಾರ್ಷಿಕ ಆದಾಯ ಕೊನೆ ದರ್ಜೆ ದೇವಾಲಯದ ಆದಾಯಕ್ಕಿಂತಲೂ ಕಡಿಮೆ ಇದೆ.

ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ

ಜನವರಿ 24 ಸಮಾಜವಾದಿ ಕರ್ಪೂರಿ ಠಾಕೂರ್ ಬದುಕಿದ್ದರೆ ನೂರು ವರುಷ. ಅದರ ಮೊದಲ ದಿನ ಜನವರಿ 23ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದರು. 1954ರ ಜನವರಿ 2ರಲ್ಲಿ ಆರಂಭವಾದುದು ಭಾರತ ರತ್ನ ಪ್ರಶಸ್ತಿ. ಇದು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆಗಿದೆ. 1966ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡುವುದು ಆರಂಭವಾಗಿ ಕರ್ಪೂರಿ ಠಾಕೂರ್ ಸೇರಿ 15 ಮಂದಿಗೆ

ಉಡುಪಿ: ಬನ್ನಂಜೆ ಬಿಲ್ಲವ ಸಂಘಕ್ಕೆ ನಿಂದನೆ: ಕ್ರಮಕ್ಕೆ ಒತ್ತಾಯಿಸಿ ಎಸ್‍ಪಿಗೆ ಮನವಿ

ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಭಾಜೋನ್ಯಾಯಾ ಅಸ್ಸಾಂ ಯಾತ್ರೆ ರಾಹುಲ್‍ ಗಾಂಧಿಯಿಂದ ಮತ್ತೆ ಬಿಜೆಪಿ ಖಂಡನೆ

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್‍ಪೇಟ್‍ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ ಹಿಂಸೆಗೆ ಪ್ರಚೋದನೆ, ಉದ್ದೇಶಪೂರ್ವಕ ಟ್ರಾಫಿಕ್ ಜಾಮ್, ಸಾರ್ವಜನಿಕ ಆಸ್ತಿಗೆ ಹಾನಿ ಎಂದೆಲ್ಲ ಅಸ್ಸಾಂ

ಅಯೋಧ್ಯೆ:ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಆರಂಭ

ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ,ವಿಷ್ಣುಮೂರ್ತಿ

ಕಾರ್ಕಳ: ಅತ್ತೂರು ಬಸಿಲಿಕದ ವಾರ್ಷಿಕೋತ್ಸವ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್

ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು ಪ್ರಭೇದನೆಗಳಿಗೆ ಒಳಗಾಗದಂತೆ ಪ್ರಾರ್ಥಿಸೋಣ ಎಂಬ ವಿಷಯದ ಬಗ್ಗೆ ಭಕ್ತಾದಿಗಳಿಗೆ ದೇವರ ವಿಶೇಷ ಸಂದೇಶ ನೀಡಿದರು. ಪ್ರಭೇದನಿಗೆ ಒಳಗಾಗದಂತೆ ಒಂದು ದಿನದ ವಿಷಯವನ್ನು ಧ್ಯಾನಿಸಿ ಅವರು ಗಾಯನ ಬಲಿ ಪೂಜೆ ನೆರವೇರಿಸಿ

ಗುಜರಾತ್ ಪೋಲೀಸರಿಗೆ ಜೈಲೇ ಗತಿ

ಜನರನ್ನು ಕಂಬಕ್ಕೆ ಕಟ್ಟಿ ಹೊಡೆಯಲು ನಿಮಗೆ ಅಧಿಕಾರ ಇದೆಯೇ? ಹೋಗಿ ಜೈಲು ಸಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯಿಯವರು ಕೋಪದಿಂದ ಹೇಳಿದರು. ಅಲ್ಲದೆ ಸರ್ವೋಚ್ಚ ನ್ಯಾಯಾಲಯವು ಶಿಕ್ಷಿತ ಪೋಲೀಸರಿಗೆ ಛೀಮಾರಿ ಹಾಕಿತು. ಇನ್ಸ್‍ಪೆಕ್ಟರ್ ಎ. ವಿ. ಪರ್ಮಾರ್, ಸಬ್ ಇನ್ಸ್‍ಪೆಕ್ಟರ್ ಡಿ. ಬಿ. ಕುಮಾವತ್ ಮತ್ತು ಇಬ್ಬರು ಕಾನ್‍ಸ್ಟೇಬಲ್‍ಗಳು ಶಿಕ್ಷಿತ ಪೋಲೀಸರು. ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ, ಸಂದೀಪ್

ಮಿಜೋರಾಂನ ಲೆಂಗ್‍ಪುಯಿಯಲ್ಲಿ ಬಿದ್ದ ವಿಮಾನ

ಮ್ಯಾನ್ಮಾರ್ ಮಿಲಿಟರಿ ವಿಮಾನವೊಂದು ಭಾರತದ ಮಿಜೋರಾಂನ ಲೆಂಗ್‍ಪುಯಿಯಲ್ಲಿ ನೆಲಕ್ಕೆ ವೇಗವಾಗಿ ಒರೆಸಿದ್ದು ಅದರಲ್ಲಿದ್ದ ಗಾಯಗೊಂಡ 14 ಜನರನ್ನು ಲೆಂಗ್‍ಪುಯಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಡಿಜಿಪಿ ಹೇಳಿದ್ದಾರೆ. ಮಂಗಳವಾರ ಮ್ಯಾನ್ಮಾರ್ ವಿಮಾನವು ಲೆಂಗ್‍ಪುಯಿ ವಿಮಾನ ನಿಲ್ದಾಣಕ್ಕೆ ಬಡಿದು ಕೆಳಗಿಳಿದಿದೆ. ಪೈಲಟ್ ಸಹಿತ ಅದರಲ್ಲಿದ್ದ 14 ಮಂದಿ ಗಾಯಗೊಂಡಿದ್ದಾರೆ. ಕೂಡಲೆ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ

ಅಖಿಲ ಭಾರತ ವಕೀಲೆಯರ ರಾಜ್ಯ ಸಮಾವೇಶ

ಭ್ರಷ್ಟಾಚಾರದ ಕಾರಣಕ್ಕೆ ಭಾರತದ ಶಾಸಕಾಂಗ, ಕಾರ್ಯಾಂಗಗಳು ಜನರ ವಿಶ್ವಾಸ ಕಳೆದುಕೊಂಡಿದ್ದರೂ ನ್ಯಾಯಾಂಗವು ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ಜಿ. ಉಮಾ ಹೇಳಿದರು. ಅವರು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಹಾಲ್‍ನಲ್ಲಿ ನಡೆದ ಮಹಿಳಾ ವಕೀಲರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗವು ಬಲವಾಗಿದ್ದರೆ ಪ್ರಜಾಪ್ರಭುತ್ವವೂ ಗಟ್ಟಿ. ಭಾರತದ ನ್ಯಾಯಾಂಗ ಅಚಲವಾಗಿದೆ. ಆದರೆ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ