Home Archive by category karavali (Page 36)

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು. 4:30 ಕ್ಕೆ ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಕೋಣೆಯಲ್ಲಿ ತಮ್ಮ ಹೆಂಡತಿ ಮತ್ತು ಅತ್ತಿಗೆ

ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ತೀರ್ಪುಗಾರರಾಗಿ
ವೀರೇಶ್ ಮಠಪತಿ ಆಯ್ಕೆ

ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವೀರೇಶ್ ಮಠಪತಿ ಅವರು ಅಂತರ್ ರಾಷ್ಟ್ರೀಯ ಟೇಬಲ್ ಟೆನ್ನಿಸ್ ತೀರ್ಪುಗಾರರಾಗಿ ಅಯ್ಕೆಯಾಗಿದ್ದಾರೆ. ಅವರು ಮಾರ್ಚ್ 20ರಿಂದ 27ರ ವರಗೆ ಜಮ್ಮುವಿನಲ್ಲಿ ನಡೆಯಲಿರುವ 84ನೇ ಹಿರಿಯ ರಾಷ್ಟ್ರೀಯ ಮತ್ತು ಅಂತರ್ –ರಾಜ್ಯ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್‍ಗೆ ತೀರ್ಪುಗಾರರಾಗಿ ಆಯ್ಕೆಯಾಗಿರುತ್ತಾರೆ. ವೀರೇಶ್ ಮಠಪತಿ ಅವರಿಗೆ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆ

ಅನಂತಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಅವರು ಅನಂತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 1.50 ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ ನೆರವೇರಿಸಿ ಬಳಿಕ ಮಂದಿರದಲ್ಲಿ

ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ : ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣುಕು ಶವ ಯಾತ್ರೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ, ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ `ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೂ ಕೂಡ ಬಿಜೆಪಿಗರು ತಲೆ

ಮಾ.11ಕ್ಕೆ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿಕೆ

ಪುತ್ತೂರು: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಯಾತ್ರೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಬೆಳಿಗ್ಗೆ ಉಪ್ಪಿನಂಗಡಿ, ವಿಟ್ಲ, ಮಧ್ಯಾಹ್ನ ಕುಂಬ್ರ ಜಂಕ್ಷನ್ ಸಂಜೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಅವರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಬೇರೆ ಬೇರೆ ಆಶ್ವಾಸನೆಗಳಿಂದ ಕೋಮು ಭಾವನೆ

ಮೂಲಭೂತ ಸೌಕರ್ಯ ವಂಚಿತ ಮಲೆಕುಡಿಯ ಆದಿವಾಸಿಗಳು : ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ

ಕುದುರೆಮುಖ ರಾಷ್ಟ್ರೀಯ ಅರಣ್ಯ ಮೀಸಲು ಪ್ರದೇಶದಲ್ಲಿನ ಮಲೆಕುಡಿಯ ಆದಿವಾಸಿಗಳು 100 ವರ್ಷಕ್ಕೂ ಹೆಚ್ಚು, ಈ ಕಾಡಿನಲ್ಲಿ ಪ್ರಸ್ತುತ ಜೀವನ ಪರಿಸ್ಥಿತಿಯನ್ನು ತಿಳಿಯಲು ಅನ್ವೇಷಣೆಗಾಗಿ ಬೆಳ್ತಂಗಡಿ ತಾಲೂಕಿನ ಮಲೆಕುಡಿಯ ಬುಡಕಟ್ಟು ಗ್ರಾಮ ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ ನೀಡಿತ್ತು. ಮಲಿಕುಡಿಯ ಆದಿವಾಸಿಗಳು ಈ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತವು ಅವರ ಮೂಲಭೂತ ಹಕ್ಕುಗಳಾದ ವಿದ್ಯುತ್, ನೀರಾವರಿ

ಕಾಂಗ್ರೆಸ್ ಹೇಳಿಕೆಗೆ ಶಾಸಕ ಹರೀಶ್ ಪೂಂಜಾ ತಿರುಗೇಟು

ಚುನಾವಣೆ ಬಂದಾಗ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುತ್ತಾರೆ ಎಂದು ಹೇಳಿದ ಕಾಂಗ್ರೆಸ್ ನಾಯಕರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.ಕಳೆದ ನಾಲ್ಕೂವರೆ ವರ್ಷದ ಹಿಂದೆ ಇಲ್ಲಿನ ನಾಯಕರೊಬ್ಬರು ತಾಲೂಕಿನ ಹಲವಾರು ಕಡೆ ತೆಂಗಿನ ಕಾಯಿ ಒಡೆದು ಜನರನ್ನು ಮರುಳು ಮಾಡಿದ ಹಾಗೆ ನಾವು ಮಾಡಲಿಲ್ಲ. ಇಡೀ ತಾಲೂಕಿನಲ್ಲಿ ಅಭಿವೃದ್ದಿ ಮಾಡುವ ಮೂಲಕ ನಮ್ಮ ಪ್ರಣಾಳಿಕೆಯಲ್ಲಿ ಏನು ಹೇಳಿದ್ದೇವೆಯೋ ಅದನ್ನು ಚಾಚೂ ತಪ್ಪದೇ

ಮೂಡುಬಿದಿರೆ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ ಅಸಹಾಯಕ ಜನರಿಗೆ ವಾಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಚಂದ್ರ ಕೆಂಬಾರೆ ಆಗ್ರಹಿಸಿದರು ಅವರು ಎಸ್