Home Archive by category karavali (Page 4)

ಸಮಸ್ಯೆಗಳ ಕೂಪವಾಗಿ ಮಾರ್ಪಟ್ಟ ವಿಟ್ಲ ಪಟ್ಟಣ

ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ

ಸುರತ್ಕಲ್‌ ಟೋಲ್‌ಗೇಟ್‌ ತೆರವುಗೊಳಿಸಲು ಸಾಧ್ಯವಾಗದ ಸಂಸದರು ಜನಪ್ರತಿನಿಧಿಯಾಗಲು ಅರ್ಹರಲ್ಲ: ಐವನ್‌ ಡಿಸೋಜಾ

ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ

ಮಂಗಳೂರು : ರಾಜ್ಯ ಸರ್ಕಾರದ ಜನಸಂಕಲ್ಪ ಯಾತ್ರೆ ಅಲ್ಲ, ಇದು ಜನ ಸಂಕಟ ಯಾತ್ರೆ-ಮಂಗಳೂರಿನಲ್ಲಿ ಶಾಸಕ ಯು.ಟಿ. ಖಾದರ್ ವಾಗ್ದಾಳಿ

ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಡಬಲ್ ಇಂಜಿನ್

ಪುತ್ತೂರು: ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ -ನ.14 : ಡಾ.ಶಿವರಾಮ ಕಾರಂತ ಬಾಲವನದಲ್ಲಿ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ “ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ 9 ರಿಂದ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ

ವಿಟ್ಲ :ಶಿಥಿಲಾವಸ್ಥೆಯಲ್ಲಿ ಕುಳಾಲು ಸರ್ಕಾರಿ ಶಾಲೆಯ ಕಟ್ಟಡ-ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳು -ಶಾಸಕರಿಗೆ ಮನವಿ ನೀಡಿದರೂ ಸ್ಪಂದಿಸಿಲ್ಲ

ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ

ಕುಂದಾಪುರ : ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೊಲ್ಲಮೊಗ್ರದಲ್ಲಿ ಮದ್ಯಮುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ

ಬಿ.ಸಿ ರೋಡ್‌ನಲ್ಲಿ ತುಳು ನಾಟಕೋತ್ಸವ-2022 ಕಾರ್ಯಕ್ರಮ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ 2022ನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಯೋಜನೆ

ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾಗತಿಸಿ, ಬಳಿಕ ನಟರಾಜ ವೇದಿಕೆಯಲ್ಲಿ ನಡೆದ ಸಭಾ

ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣ

ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು