Home Archive by category karavali (Page 41)

ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ

ಮಂಗಳೂರು : ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮ

ಡಿವೈಎಫ್‌ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ

ಮೂಡಬಿದಿರೆ : ವಿಶ್ವ ಹಿಂದೂ ಪರಿಷತ್ ಬಜರಂಗದಳದಿoದ ಗೋಪೂಜೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ

ಮೂಡುಬಿದಿರೆ ತಾಲೂಕು ವತಿಯಿಂದ ಧನಲಕ್ಷ್ಮೀ ಪೂಜೆ

ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಿಕ್ಷಾ ಚಾಲಕರು ಆಪತ್ಬಾಂಧವರು. ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸುರಕ್ಷಿತವಾಗಿ

ರಿವೋಲ್ಟ್ ಕಂಪನಿಯ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ ಲಗ್ಗೆ

ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿದಿನ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದೆ. ಅಂತೆಯೇ ದ್ವಿಚಕ್ರವಾಹನಗಳ ಮಾರಾಟ ಕ್ಷೇತ್ರದಲ್ಲಿಯೇ ಹೆಸ್ರು ಪಡೆದುಕೊಂಡಿರುವ ರಿವೋಲ್ಟ್ ಕಂಪನಿಯು

ಬಂಟ್ವಾಳ : ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋ ಪೂಜಾ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಗೋ ಪೂಜೆ ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಇವರ ಮನೆಯಲ್ಲಿ ನಡೆಯಿತು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಶಣೈ,ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆ ಮoಗಳೂರು ಬ್ಲಾಕ್ ಕಾಂಗ್ರೆಸ್

ದಕ್ಷಿಣ ಕನ್ನಡ : ತುಳು ನಾಟಕೋತ್ಸವದ ಆಮಂತ್ರಣ ಪ್ರತಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಾ ಹಾರೈಸಿದ್ರು. ಈ ವೇಳೆ ಬಂಟ್ವಾಳ ಸಂಚಾಲಕರಾದ ಸುಭಾಶ್ಚಂದ್ರ ಜೈನ್, ಸಮಿತಿ ಸದಸ್ಯರಾದ ಮಂಜುವಿಟ್ಲ, ದಿವಾಕರದಾಸ್, ಸಂಪತ್ ಬಿ.ಆರ್. ಅಂಚನ್ ಶಶಿಧರ್

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಡಾ|ಧರ್ಮಪಾಲನಾ ಸ್ವಾಮೀಜಿ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಇಂತಹ ಒಂದು ಕಾರ್ಯಕ್ರಮ ಮಾಡ್ತಿರೋದು

ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ-ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ ಭಜನಾ ಸಂಕೀರ್ತನೆ 

ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ. ಇವರಿಂದ ಭಜನಾ ಸೇವೆ ನಡೆಯಿತು.

ಮಂಜೇಶ್ವರ : ತಲಪಾಡಿ ಟೋಲ್ ಗೇಟ್ ವಿಚಾರವಾಗಿ ಗಡಿನಾಡ ಕನ್ನಡಿಗರು ಗರಂ

ಮಂಜೇಶ್ವರ: ತಲಪಾಡಿ ಟೋಲ್ ಗೇಟಿನಲ್ಲಿ ಕರ್ನಾಟಕದ 5 ಕಿ.ಮೀ. ವ್ಯಾಪ್ತಿಯ ಸ್ಥಳೀಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಯನ್ನು ನೀಡಿದ ರೀತಿಯಲ್ಲಿ ಗಡಿನಾಡ ಕನ್ನಡಿಗರು ವಾಸವಾಗಿರುವ ಕೇರಳದ 5 ಕಿ.ಲೋ. ಮೀಟರ್ ವ್ಯಾಪ್ತಿಯಲ್ಲಿರುವವರಿಗೂ ಉಚಿತ ಪ್ರಯಾಣಕ್ಕೆ ಅನುಮತಿ ಕೋರಿ ಮಂಜೇಶ್ವರ ಗ್ರಾ.ಪಂ. ಅಧ್ಯಕ್ಷರು ಎಲ್ಲಾ ಸದಸ್ಯರು ಹಾಗೂ ಪೀಪಲ್ಸ್ ಯೂನಿಯನ್ ಆಫ್ ಮಂಜೇಶ್ವರ ಸಂಘಟನಾ ಕಾರ್ಯಕರ್ತತರು ವಿವಿಧ ರಾಜಕೀಯ ಪಕ್ಷಗಳ ನೇತಾರರು ಜೊತೆಯಾಗಿ ತಲಪಾಡಿ ಟೋಲ್ ಗೇಟಿಗೆ ತೆರಳಿ