Home Archive by category karavali (Page 45)

ಕಡಬ: ಮಕ್ಕಳಿಲ್ಲದ ಚಿಂತೆ: ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ ಗೌಡ (೭೦) ಎಂದು ಗುರಿತಿಸಲಾಗಿದೆ. ಇವರು ರಬ್ಬರ್ ಟ್ಯಾಪರ್ ಆಗಿದ್ದು, ಇತ್ತೀಚೆಗೆ ಕೊಲ್ಯದ ರೊಟ್ಟಿ

ಮೂಡುಬಿದರೆ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪಿತೃ ವಿಯೋಗ

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೂಡುಬಿದಿರೆಯ ಬ್ರಹ್ಮಶ್ರೀ ನಾರಾಯಣ ಗುರು ಪೂಜೆಯ ಅರ್ಚಕರಾಗಿಯೂ, ಮೂಡುಬಿದಿರೆ ಅಯ್ಯಪ್ಪ ದೇವಸ್ಥಾನ ಸ್ಥಾಪಕರಾಗಿಯೂ ಸೇವೆ ಸಲ್ಲಿಸಿದವರು. ಅಯ್ಯಪ್ಪ ಗುರುಸ್ವಾಮಿಯಾಗಿ

ಮೂಡುಬಿದರೆ :ಸ್ವಾಭಿಮಾನದ ಬದುಕಿಗಾಗಿ ಸರಕಾರ ಬದ್ಧ: ಶಾಸಕ ಕೋಟ್ಯಾನ್

ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಡುಬಿದಿರೆ ಕನ್ನಡ ಭವನದಲ್ಲಿ ಸ್ವ ನಿಧಿ ಪರಿಚಯ ಬೋರ್ಡ್ ಹಾಗೂ ಪ್ರಧಾನ ಮಂತ್ರಿಯವರ ಶುಭಾಷಯ ಪತ್ರವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಕೇಂದ್ರ ವಸತಿ ಮತ್ತು

ಮೂಡುಬಿದಿರೆ: ಪಡುಮಾರ್ನಾಡಿನಲ್ಲಿ ಸಿಡಿಲು ಆಘಾತ

ಮೂಡುಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಪಾಡ್ಯಾರ್ ನಿವಾಸಿ ಸುಜಾತ ಎಂಬವರ ಮನೆಗೆ ನಿನ್ನ ರಾತ್ರಿ ಸಿಡಿಲು ಬಡಿದು ಮನೆಯ ಕರೆಂಟ್ ಸ್ವಿಚ್ ಬೋರ್ಡ್, ‘ವಿದ್ಯುತ್ ವಯರ್‌ಗಳು ಸುಟ್ಟು ಸುಮಾರು 50 ಸಾವಿರ ಮೌಲ್ಯದ ವಿದ್ಯುತ್ ಇತರ ಸಲಕರಣೆಗಳು ಹಾನಿಗೀಡಾಗಿವೆ. ಸ್ಥಳಕ್ಕೆ ಮೂಡುಮಾರ್ನಾಡ್ ಪಂಚಾಯತ್ ಪಿಡಿಓ ಅನಿಲ್, ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಸುಜಾತ ಹಾಗು ಅವರ ತಾಯಿ ಮನೆಯೊಳಗಿದ್ದು ಪ್ರಾಣಾಪಾಯದಿಂದ

ಮಂಗಳೂರು : ಶೈಕ್ಷಣಿಕ ಮತ್ತು ಸಂಶೋಧನಾ ಕುರಿತ ಕಾರ್ಯಕ್ರಮಗಳ ಬಗ್ಗೆ ಒಪ್ಪಂದ

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಫಿ ವಿಭಾಗ ಮತ್ತು ಥೀಮ್ ಫಿಸಿಯೋಥೆರಫಿ ಯುನಿವರ್ಸಿಟಿ ನೆದರ್‌ಲ್ಯಾಂಡ್ಸ್ ಮತ್ತು ಸ್ವಿಟ್ಜರ್‌ಲ್ಯಾಂಡ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ. ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಮತ್ತು ಸಂಶೋಧನಾ ವಿನಿಮಯ ಕಾರ್ಯಕ್ರಮಗಳಲ್ಲಿ ಸಹಕರಿಸಲು ಒಪ್ಪಿಕೊಂಡಿವೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕರಾದ ರೆವರೆಂಡ್ ಫಾದರ್ ರಿಚರ್ಡ್ ಅಲೊಶಿಯಸ್ ಕೊಯಿಲೊ ಅವರು, ಥೀಮ್ ವಿವಿಯ ನಿರ್ದೇಶಕರಾದ ಥೀಮ್‌ವಂಡರ್

ದೇರಳಕಟ್ಟೆ : ಕಣಚೂರು ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಕ್ರಮ

ನಾಟೆಕಲ್‌ನ ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ನ ಫಿಸಿಯೋಥೆರಫಿ, ನರ್ಸಿಂಗ್ ಅಲೈಡ್ ಹೆಲ್ತ್ ಸೈನ್ಸ್ನ 2022-23ನೇ ಬ್ಯಾಚ್‌ನ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಕಣಚೂರು ಕಾಲೇಜು ಆಫ್ ನರ್ಸಿಂಗ್ ಸೈನ್ಸ್ನ 2022-23 ಬ್ಯಾಚ್‌ನ ಕೋರ್ಸ್ ಉದ್ಘಾಟನಾ ಕಾರ್ಯಕ್ರಮ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು, ಈ

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ವರ್ಗಾವಣೆ

ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಕಳೆದ ಎರಡು ವರ್ಷಗಳಿಂದ ಹಾಗೂ ಕೊರೊನಾದಂತಹ ಮಾರಕ ರೋಗದ ಸಂದರ್ಭದಲ್ಲಿ ಉತ್ತಮ ನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರನ್ನು

ಉಡುಪಿ : ತುಳುನಾಡಿನಲ್ಲಿ ಮತ್ತೊಮ್ಮೆ ತನ್ನ ಕಾರ್ಣಿಕ ತೋರಿಸಿಕೊಟ್ಟ ಕೊರಗಜ್ಜ ಸ್ವಾಮಿ

ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ. ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ ಸಾವನ್ನೇ ಗೆದ್ದು ಬಂದಿದೆ.ಹೌದು ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು.ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು

ಮಂಗಳೂರು : ಪಳನೀರು ರಸ್ತೆ ಅಗಲೀಕರಣದ ಬಗ್ಗೆ ಜಾಗದ ತಕರಾರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್‌ಬೈಲ್ ದಕ್ಷಿಣ 15ನೇ ವಾರ್ಡ್ನ ಪಳನೀರು ರಸ್ತೆಯ ಅಗಲೀಕರಣದ ಬಗ್ಗೆ ಜಾಗದ ಮಾಲೀಕರ ತಕರಾರು ಇದ್ದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಶಾಸಕರಾದ ಡಾ. ಭರತ್ ಶೆಟ್ಟಿಯವರು ಶುಕ್ರವಾರ ಪಳನೀರಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದ ಮಾತುಕಥೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ತಡೆಗೋಡೆ ಸಹಿತ ರಸ್ತೆ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಮೂಲಕ ಅಗಲೀಕರಣದ ಕಾಮಗಾರಿಗಿದ್ದ ಎಲ್ಲಾ

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಧರ್ಮಸ್ಥಳದ ಖಾವಂದರು

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ್ದರು. ಚಿತ್ರ