Home Archive by category karavali (Page 48)

ಪಡುಬಿದ್ರಿ ಜಂಕ್ಷನ್‍ ಮೋಪೆಡ್ ಸವಾರನ ಮೇಲೆ ಮುಗುಚಿ ಬಿದ್ದ ಲಾರಿ : ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ

ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ: ಇಬ್ಬರ ಬಂಧನ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ

ತಂದೂರ್ ರೆಸ್ಟೋರೆಂಟ್‍ ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ನಿಧನ

ಮಂಗಳೂರಿನ ಪ್ರಸಿದ್ಧ ತಂದೂರ್ ರೆಸ್ಟೋರೆಂಟ್‍ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ಪ್ರಾಯವಾಗಿತ್ತು. ಮಂಗಳೂರಿನ ಗುರುಪುರದವರಾದ ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಇವರು ಪತ್ನಿ ಸುಜಾತ ಆನಂದ ರಾಯಿ, ಪುತ್ರ ವರದರಾಜ್ ಶೆಣೈ, ಪುತ್ರಿ ಶಾರದಾ ದಿಲೀಪ್ ಆಚಾರ್ಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಮಹಾಕಾಳಿ ದೇವಿ ಅಪಮಾನಗೈದ ನಿರ್ದೇಶಕಿಯನ್ನು ಬಂಧಿಸಿ : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ

ಉಳ್ಳಾಲ: ದೇವಿ ಮಹಾಂಕಾಳಿಯನ್ನು ಅವಹೇಳನಕಾರಿಯಾಗಿ , ಹಿಂದೂಗಳ ಧಾರ್ಮಿಕ ಭಾವನಗಳಿಗೆ ಧಕ್ಕೆ ತರುವ ರೂಪದಲ್ಲಿ ಚಿತ್ರಿಸಿರುವ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಸರಕಾರ ಶೀಘ್ರವೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ ಒತ್ತಾಯಿಸಿದ್ದಾರೆ. ದುಷ್ಟರನ್ನು ಸಂಹರಿಸುವ ದೇವಿ ಮಹಾಕಾಳಿ. ಹಿಂದೂಗಳು ಬಹಳಷ್ಟು ನಂಬುವ ದೇವಿಗೆ ಅವಹೇಳ ನಡೆಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಿನಿ ಶೆಟ್ಟಿ

ಉಡುಪಿ: ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 21ರ ಹರೆಯದ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಇನ್ನಂಜೆಯವರು. ಸ್ಪರ್ಧೆಯಲ್ಲಿ ಸಿನಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಕೊಂಡರು. ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ

ಮಂಗಳೂರು ಮುಳುಗಲು ನಗರಪಾಲಿಕೆಯೇ ಕಾರಣ” : ಮಾಜಿ ಶಾಸಕ ಮೊಯಿದೀನ್ ಬಾವಾ

“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು

ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ : ನಿಸ್ವಾರ್ಥ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ

ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಚ ವೈದ್ಯರ ದಿನಾಚರಣೆ ಪ್ರಯುಕ್ತ ನಿಸ್ವಾರ್ಥ ಸಾಧಕ ವೈದ್ಯ ಡಾ. ಗೋಪಾಲ್ ಅವರಿಗೆ ಸನ್ಮಾನಿಸಲಾಯಿತು. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರ್ ಮೆನ್ ಯು.ಕೆ. ಮೋನು ಸನ್ಮಾನಿಸಿ ಮಾತನಾಡಿ, ಸನಾತನ ಧರ್ಮದಲ್ಲಿ ಅನೇಕ ಮಹಾತ್ಮರನ್ನು ಇನ್ನಿತರ ಧರ್ಮದಲ್ಲೂ ಅವರ ಜನ್ಮ ದಿನದ ಮೂಲಕ ಭಾರತೀಯರಾದ ನಾವು ಕೊಂಡಾಡುತ್ತಿದ್ದು ಸೇವಾ ವೃತ್ತಿ

ಚಾಲಕನ ನಿಯಂತ್ರಣ ತಪ್ಪಿದ ಬಸ್ : ಹೆಜಮಾಡಿಯ ರಾ.ಹೆ 66ರಲ್ಲಿ ಘಟನೆ

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ

ದ.ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ, ದ.ಬ್ಲಾಕ್ ಕಾಂಗ್ರೆಸ್ ನೇತೃತ್ವ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು