Home Archive by category karavali (Page 5)

ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ : ಅಪಘಾತ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಭೇಟಿ

ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಬೈಪಾಸ್ ರಸ್ತೆ, ಜಕ್ರಿಬೆಟ್ಟು,

ಪುರಸಭೆಯ ಪರವಾನಿಗೆ ಪಡೆಯದೆ ಕಾಲೇಜು ನಿರ್ಮಾಣ

ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್

ಬಿ.ಸಿ ರೋಡ್‌ : ತುಳು ನಾಟಕೋತ್ಸವ

ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ಏಳು ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಲ್ಕನೇ ದಿನವಾದ ಇಂದು ಓಂ ಶ್ರೀ ಕಲಾವಿದೆರ್ ಬಿ.ಸಿ. ರೋಡ್ ಇವರಿಂದ ಅಂದ್‌oಡ ಅಂದ್ ಪನ್ಲೆ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ

ಶಾರದಾ ಎ.ಅಂಚನ್ ರಿಗೆ ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ವಿಶ್ವ ಕನ್ನಡ ಸಂಘ (ರಿ) ಹುಬ್ಬಳ್ಳಿ ಇವರು ಪ್ರತೀ ವರುಷ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಮುಂಬಯಿ ಸಾಹಿತಿ, ಲೇಖಕಿ ಶಾರದಾ ಎ. ಅಂಚನ್ ಇವರಿಗೆ ಸಾಹಿತ್ಯ ಹಾಗೂ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವದ ಅಂಗವಾಗಿ ಕೊಡಮಾಡುವ “ವೀರರಾಣಿ ಕಿತ್ತೂರು ಚೆನ್ನಮ್ಮ ಸದ್ಭಾವನಾ ರಾಷ್ಟ್ರೀಯ

ಬೆಳ್ತಂಗಡಿ :ಹೊಂಡಮಯ ರಸ್ತೆಗಳಿಗೆ ತೇಪೆ ಕಾರ್ಯ

ಬೆಳ್ತoಗಡಿತಾಲೂಕಿನಲ್ಲಿರಾಷ್ಟೀಯ ಹೆದ್ದಾರಿ 73ರಲ್ಲಿ ಗುರುವಾಯನಕೆರೆಯಿಂದ ಉಜಿರೆವರೆಗೆ ಹೊಂಡಮಯವಾಗಿರುವ ಸ್ಥಳಗಳಿಗೆ ಕಡೆಗೂ ತೇಪೆ ಕಾರ್ಯಕ್ಕೆ ಇಲಾಖೆ ಮುಂದಾಗಿದೆ.ಪೂoಜಾಲಕಟ್ಟೆಯಿoದ ಚಾರ್ಮಾಡಿ ವರೆಗಿನ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗುAಡಿ ಸೃಷ್ಟಿಯಾಗಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿತ್ತು. ದುರಸ್ತಿಗೆ ಅನೇಕ ಬಾರಿ ಪ್ರತಿಭಟನೆಗಳು ನಡೆದರೂ ಮಳೆಯಿಂದಾಗಿ ದುರಸ್ತಿ ಕಾರ್ಯ ಮುಂದೂಡಲೇ ಹೋಗಿತ್ತು. ಇದೀಗ ಕಳೆದ ಕೆಲ ದಿನಗಳಿಂದ ಮಳೆ ನಿಂತಿರುವುದಿರAದ

ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಅಭಿಯಾನವನ್ನು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗು ಇತರ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ನಡೆಸಲಾಗುವುದು. ಸಾರ್ವಜನಿಕರು ಈ ಅಭಿಯಾನದ ಪ್ರಯೋಜನ ಪಡೆಯುವಂತೆ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ಹಾಗು

ಮಂಗಳೂರು :ಮೂಡುಶೆಡ್ಡೆ- ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಸುರಿದ ತ್ಯಾಜ್ಯ ರಾಶಿ

ಮಂಗಳೂರು ಪಾಲಿಕೆ ವ್ಯಾಪ್ತಿಯ ಮೂಡುಶೆಡ್ಡೆ-ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಕಿಡಿಗೇಡಿಕಗಳು ತ್ಯಾಜ್ಯ ತಂದು ಸುರಿದಿದ್ದು, ತ್ಯಾಜ್ಯ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ಇಲಾಖೆಗೆ ದೂರು ನೀಡಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ ಆಗ್ರಹಿಸಿದ್ದಾರೆ.

0%ಕಮೀಷನ್ 100% ಕೆಲಸ ಆಮ್ ಆದ್ಮಿ ಭರವಸೆಃ ಪೃಥ್ವಿ ರೆಡ್ಡಿ

ಮಂಗಳೂರುಃ ನಮ್ಮ ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ದೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ವ್ಯಕ್ತಪಡಿಸಿದ್ದಾರೆಅವರು ಇಂದು ನಗರದ ಡಾನ ಬಾಸ್ಕೋ ಸಬಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ವತಿಯಂದ ಆಯೋಜಿಸಲಾದ ಪಕ್ಷದ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟಾçರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು.ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ

ಉಳ್ಳಾಲ: ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಒಡೆದು ನಗದು ಕಳವು

ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ. ಮಸೀದಿ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾರೆ. ಮಸೀದಿ ವಠಾರದಲ್ಲಿ ಅಳವಡಿಸಿದ್ದ ಆರು ಕಾಣಿಕೆ ಡಬ್ಬಿಗಳನ್ನು ಒಡೆದು ಹಾಕಲಾಗಿದೆ. ಮಸೀದಿಯನ್ನು ದೋಚುವulala ಮುನ್ನ ಅಥವಾ ನಂತರ ಕಳ್ಳರು