Home Archive by category kundapura

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ

ಹೆಮ್ಮುಂಜೆ ಸ.ಹಿ.ಪ್ರಾ.ಶಾಲೆಗೆ ಕುಂದಾಪುರ ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿ ಪರಿಕರಗಳ ಕೊಡುಗೆ

ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು. ಶಾಲಾ ಸ್ಥಾಪಕ ಕುಟುಂಬದ ಸದಸ್ಯರು, ಹಿರಿಯ ವಿದ್ಯಾರ್ಥಿಯು ಹಾಗೂ ಅತ್ಯುತ್ತಮ ಜಿಲ್ಲಾ ಶಿಕ್ಷಕ

ಕುಂದಾಪುರ: ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು

ಕುಂದಾಪುರ : ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸ್ ರು ಭೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಕಳ್ಳತನ ಪ್ರಕರಣದಲ್ಲಿ ಬಂಧಿತರು. ಲೋಕೇಶ್ ಮಂಜುನಾಥ ನಾಯ್ಕ ಅವರು ಸುಮಾರು 53.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿ ಪರ್ಸಿನಲ್ಲಿಟ್ಟು, ಪತ್ನಿಯ ವ್ಯಾನಿಟಿ

ಕುಂದಾಪುರ: ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ

ಬೈಂದೂರು: ವಿಕಸಿತ ಭಾರತ ಸಂಕಲ್ಪ ಅಭಿಯಾನ

ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು

ಹಳ್ಳಿಗಾಡಿನ ಯುವಕರ ಮನ ಸೆಳೆಯುತ್ತಿದೆ ಹೇ ರನ್ ಜಾಲ್

ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ

ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತಾರೆ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಕುಂದಾಪುರ : ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಈ ಒಂದು ಸಂದರ್ಭದಲ್ಲಿ ಮಾನ್ಯ

ಮಂಗಳೂರು :ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದೆ-ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ

ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಭಾನುವಾರ ಸಂಜೆ ರಾಷ್ಟಿ್ಯ ಸ್ವಯಂ ಸೇವಕ ಸಂಘದ ವತಿಯಿಂದ ಕಂದಾವರ ಪ್ರಿಯಾಂಕ ನಗರದ ಸೇವಾ ಬಸ್ತಿಯ ನಾಗರಿಕರಿಗೆ ದೀಪಾವಳಿ ಹಿಂದಿನ ದಿನದ ನೀರು ತುಂಬಿಸುವ ಕಾರ್ಯಕ್ರಮಕ್ಕೆ ದೇವಸ್ಥಾನದ